<p>ಬೈಲಹೊಂಗಲ: ‘ಜನಗಣತಿ ಕಾರ್ಯ ರಾಷ್ಟ್ರದ ಅಭಿವೃದ್ಧಿಗೆ ಆಧಾರವಾಗಿದ್ದು, ಪ್ರತಿಯೊಬ್ಬ ಗಣತಿದಾರರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮತ್ತು ಜವಾಬ್ದಾರಿಯಿಂದ ನೆರವೇರಿಸಬೇಕು’ ಎಂದು ತಹಶೀಲ್ದಾರ್ ಹನುಮಂತ ಶಿರಹಟ್ಟಿ ಹೇಳಿದರು.</p>.<p>ನಗರದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಜನಗಣತಿ 2027ರ ಅಂಗವಾಗಿ ಆಯೋಜಿಸಲಾದ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಗಣತಿದಾರರು ತಮ್ಮ ಬ್ಲಾಕ್ ಪ್ರದೇಶಗಳಲ್ಲಿ ಏ.15ರವರೆಗೆ ಸಂಚರಿಸಿ ಮಾಹಿತಿ ಸಂಗ್ರಹಿಸಿಕೊಳ್ಳಬೇಕು, ಜಾಗೃತಿ ಮೂಡಿಸಿ ಹೆಚ್ಚಿನ ಪ್ರಮಾಣದಲ್ಲಿ ಸ್ವಯಂ-ಗಣತಿ ನಡೆಯುವಂತೆ ಪ್ರೋತ್ಸಾಹಿಸಬೇಕು’ ಎಂದರು.</p>.<p>‘ಏ.16ರಿಂದ ಮೇ 15ರವರೆಗೆ ಜನವಸತಿ ಕಟ್ಟಡಗಳ ಸ್ಥಿತಿ, ಸೌಲಭ್ಯಗಳು ಹಾಗೂ ಸ್ವತ್ತುಗಳ ಕುರಿತು ವಿವರವಾದ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>ನಗರಸಭೆ ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ ಮಾತನಾಡಿ, ‘ಗಣತಿದಾರರು ಮನೆಮನೆಗೆ ತೆರಳಿ ಸರಿಯಾದ ಹಾಗೂ ನಿಖರ ಮಾಹಿತಿ ಸಂಗ್ರಹಿಸುವ ಮೂಲಕ ಜನಗಣತಿಯ ಯಶಸ್ಸಿಗೆ ಕೈಜೋಡಿಸಬೇಕು. ಸಾರ್ವಜನಿಕರೊಂದಿಗೆ ಉತ್ತಮ ಸಂವಹನ ಬೆಳೆಸಿ, ಅವರಿಗೆ ಸ್ವಯಂ-ಗಣತಿ ಕುರಿತು ಸ್ಪಷ್ಟ ಮಾಹಿತಿ ನೀಡಿ ಸಹಕಾರ ಪಡೆಯುವುದು ಅಗತ್ಯವಾಗಿದೆ’ ಎಂದು ಹೇಳಿದರು.</p>.<p>ಫೀಲ್ಡ್ ಟ್ರೇನರಗಳಾದ ರಾಜು ಹಕ್ಕಿ, ಮಾಲತೇಶ ಜಕಲಿ ತರಬೇತಿ ನೀಡಿದರು. ಕಚೇರಿ ವ್ಯವಸ್ಥಾಪಕ ಎಂ.ಐ.ಕುಟ್ರಿ, ಸಿಬ್ಬಂದಿಗಳಾದ ಬಿ.ಐ. ಗುಡಿಮನಿ, ಬಿ.ಎನ್.ಪಾಟೀಲ, ಬಿ.ಎ.ಖಾನಪ್ಪನವರ ಎಸ್.ಎನ್.ಪಾಟೀಲ, ಎಸ್.ಎಸ್. ನರಗುಂದ,ಆರ್.ಎಸ್. ಹಿಟ್ಟಣಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-21-2043126181</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಲಹೊಂಗಲ: ‘ಜನಗಣತಿ ಕಾರ್ಯ ರಾಷ್ಟ್ರದ ಅಭಿವೃದ್ಧಿಗೆ ಆಧಾರವಾಗಿದ್ದು, ಪ್ರತಿಯೊಬ್ಬ ಗಣತಿದಾರರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮತ್ತು ಜವಾಬ್ದಾರಿಯಿಂದ ನೆರವೇರಿಸಬೇಕು’ ಎಂದು ತಹಶೀಲ್ದಾರ್ ಹನುಮಂತ ಶಿರಹಟ್ಟಿ ಹೇಳಿದರು.</p>.<p>ನಗರದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಜನಗಣತಿ 2027ರ ಅಂಗವಾಗಿ ಆಯೋಜಿಸಲಾದ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಗಣತಿದಾರರು ತಮ್ಮ ಬ್ಲಾಕ್ ಪ್ರದೇಶಗಳಲ್ಲಿ ಏ.15ರವರೆಗೆ ಸಂಚರಿಸಿ ಮಾಹಿತಿ ಸಂಗ್ರಹಿಸಿಕೊಳ್ಳಬೇಕು, ಜಾಗೃತಿ ಮೂಡಿಸಿ ಹೆಚ್ಚಿನ ಪ್ರಮಾಣದಲ್ಲಿ ಸ್ವಯಂ-ಗಣತಿ ನಡೆಯುವಂತೆ ಪ್ರೋತ್ಸಾಹಿಸಬೇಕು’ ಎಂದರು.</p>.<p>‘ಏ.16ರಿಂದ ಮೇ 15ರವರೆಗೆ ಜನವಸತಿ ಕಟ್ಟಡಗಳ ಸ್ಥಿತಿ, ಸೌಲಭ್ಯಗಳು ಹಾಗೂ ಸ್ವತ್ತುಗಳ ಕುರಿತು ವಿವರವಾದ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>ನಗರಸಭೆ ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ ಮಾತನಾಡಿ, ‘ಗಣತಿದಾರರು ಮನೆಮನೆಗೆ ತೆರಳಿ ಸರಿಯಾದ ಹಾಗೂ ನಿಖರ ಮಾಹಿತಿ ಸಂಗ್ರಹಿಸುವ ಮೂಲಕ ಜನಗಣತಿಯ ಯಶಸ್ಸಿಗೆ ಕೈಜೋಡಿಸಬೇಕು. ಸಾರ್ವಜನಿಕರೊಂದಿಗೆ ಉತ್ತಮ ಸಂವಹನ ಬೆಳೆಸಿ, ಅವರಿಗೆ ಸ್ವಯಂ-ಗಣತಿ ಕುರಿತು ಸ್ಪಷ್ಟ ಮಾಹಿತಿ ನೀಡಿ ಸಹಕಾರ ಪಡೆಯುವುದು ಅಗತ್ಯವಾಗಿದೆ’ ಎಂದು ಹೇಳಿದರು.</p>.<p>ಫೀಲ್ಡ್ ಟ್ರೇನರಗಳಾದ ರಾಜು ಹಕ್ಕಿ, ಮಾಲತೇಶ ಜಕಲಿ ತರಬೇತಿ ನೀಡಿದರು. ಕಚೇರಿ ವ್ಯವಸ್ಥಾಪಕ ಎಂ.ಐ.ಕುಟ್ರಿ, ಸಿಬ್ಬಂದಿಗಳಾದ ಬಿ.ಐ. ಗುಡಿಮನಿ, ಬಿ.ಎನ್.ಪಾಟೀಲ, ಬಿ.ಎ.ಖಾನಪ್ಪನವರ ಎಸ್.ಎನ್.ಪಾಟೀಲ, ಎಸ್.ಎಸ್. ನರಗುಂದ,ಆರ್.ಎಸ್. ಹಿಟ್ಟಣಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-21-2043126181</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>