<p>ಬೈಲಹೊಂಗಲ: ‘ಪಟ್ಟಣದ ಸಹಕಾರ ಸಂಸ್ಥೆಯಲ್ಲಿ ಇಟ್ಟಿರುವ ₹1.50 ಲಕ್ಷ ಠೇವಣಿಯನ್ನು ಅವಧಿ ಪೂರ್ಣಗೊಂಡರೂ ಮರಳಿ ನೀಡುತ್ತಿಲ್ಲ’ ಎಂದು ಕಿಲ್ಲೇದಾರ ಗಲ್ಲಿಯ ನಿವಾಸಿ ಇಮ್ತಿಯಾಜ್ ಸುತಗಟ್ಟಿ ಹಾಗೂ ಕುಟುಂಬದವರು ದೂರಿದ್ದಾರೆ.</p>.<p>ಇಮ್ತಿಯಾಜ್ ದೃಷ್ಟಿಹೀನರಾಗಿದ್ದು, ಮನೆಯ ಮುಂಭಾಗದಲ್ಲಿ ಸಣ್ಣ ಡಬ್ಬಿ ಇಟ್ಟುಕೊಂಡು ಉಪಜೀವನ ನಡೆಸುತ್ತಿದ್ದಾರೆ. ಇವರ ಕುಟುಂಬದಲ್ಲಿ ಅಂಗವಿಕಲ ತಾಯಿ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ತಂಗಿ, ಪತ್ನಿ, ಮೂರು ಪುತ್ರಿಯರು, ಒಬ್ಬ ಪುತ್ರ ಇದ್ದು, ಈ ಅಲ್ಪ ಆದಾಯದಿಂದಲೇ ಜೀವನ ಸಾಗುತ್ತಿದ್ದಾರೆ. ವಾಸಿಸುತ್ತಿರುವ ಮನೆ ಅತ್ಯಂತ ಹಳೆಯದು ಮತ್ತು ಶಿಥಿಲಾವಸ್ಥೆಯಲ್ಲಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿ ಎದುರಾಗಿದೆ.</p>.<p>‘ಮಳೆಗಾಲದಲ್ಲಿ ಚರಂಡಿ ನೀರು ಮನೆಗೆ ನುಗ್ಗಿ ದೊಡ್ಡ ಸಮಸ್ಯೆ ಉಂಟು ಮಾಡುತ್ತಿದ್ದು, ರಾತ್ರಿ ನಿದ್ದೆ ಮಾಡದೆ ಭಯದಲ್ಲೇ ಕಾಲ ಕಳೆಯುವಂತಾಗಿದೆ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕೋರಿ ನಗರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ದೊರಕಿಲ್ಲ’ ಎಂದು ಆರೋಪಿಸಿದ್ದಾರೆ.</p>.<p>‘ಮನೆ ನಿರ್ಮಾಣಕ್ಕಾಗಿ ಸೊಸೈಟಿಯಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಮರಳಿ ಪಡೆಯಲು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರಕಿಲ್ಲ. ಠೇವಣಿ ಹಣ ವಾಪಸ್ಸು ನೀಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದರೂ, ಸಂಸ್ಥೆಯವರು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ’ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಉಪವಿಭಾಗಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿಗೆ ಕುಳಿತುಕೊಳ್ಳಲು ನಿರ್ಧರಿಸಿದ್ದೇವೆ. ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೂ’ ಎಂದೂ ಆಗ್ರಹಿಸಿದ್ದಾರೆ.</p>.<p>ಸಮಾಜ ಸೇವಕ ರಫೀಕ ಬಡೇಘರ, ಕಿತ್ತೂರು ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಕೋಲಕಾರ, ಪುಣ್ಯ ಕೋಟಿ ಸಂಘದ ಮಂಜು ಮರೆಶೆಟ್ಟಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-21-1375832213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಲಹೊಂಗಲ: ‘ಪಟ್ಟಣದ ಸಹಕಾರ ಸಂಸ್ಥೆಯಲ್ಲಿ ಇಟ್ಟಿರುವ ₹1.50 ಲಕ್ಷ ಠೇವಣಿಯನ್ನು ಅವಧಿ ಪೂರ್ಣಗೊಂಡರೂ ಮರಳಿ ನೀಡುತ್ತಿಲ್ಲ’ ಎಂದು ಕಿಲ್ಲೇದಾರ ಗಲ್ಲಿಯ ನಿವಾಸಿ ಇಮ್ತಿಯಾಜ್ ಸುತಗಟ್ಟಿ ಹಾಗೂ ಕುಟುಂಬದವರು ದೂರಿದ್ದಾರೆ.</p>.<p>ಇಮ್ತಿಯಾಜ್ ದೃಷ್ಟಿಹೀನರಾಗಿದ್ದು, ಮನೆಯ ಮುಂಭಾಗದಲ್ಲಿ ಸಣ್ಣ ಡಬ್ಬಿ ಇಟ್ಟುಕೊಂಡು ಉಪಜೀವನ ನಡೆಸುತ್ತಿದ್ದಾರೆ. ಇವರ ಕುಟುಂಬದಲ್ಲಿ ಅಂಗವಿಕಲ ತಾಯಿ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ತಂಗಿ, ಪತ್ನಿ, ಮೂರು ಪುತ್ರಿಯರು, ಒಬ್ಬ ಪುತ್ರ ಇದ್ದು, ಈ ಅಲ್ಪ ಆದಾಯದಿಂದಲೇ ಜೀವನ ಸಾಗುತ್ತಿದ್ದಾರೆ. ವಾಸಿಸುತ್ತಿರುವ ಮನೆ ಅತ್ಯಂತ ಹಳೆಯದು ಮತ್ತು ಶಿಥಿಲಾವಸ್ಥೆಯಲ್ಲಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿ ಎದುರಾಗಿದೆ.</p>.<p>‘ಮಳೆಗಾಲದಲ್ಲಿ ಚರಂಡಿ ನೀರು ಮನೆಗೆ ನುಗ್ಗಿ ದೊಡ್ಡ ಸಮಸ್ಯೆ ಉಂಟು ಮಾಡುತ್ತಿದ್ದು, ರಾತ್ರಿ ನಿದ್ದೆ ಮಾಡದೆ ಭಯದಲ್ಲೇ ಕಾಲ ಕಳೆಯುವಂತಾಗಿದೆ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕೋರಿ ನಗರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ದೊರಕಿಲ್ಲ’ ಎಂದು ಆರೋಪಿಸಿದ್ದಾರೆ.</p>.<p>‘ಮನೆ ನಿರ್ಮಾಣಕ್ಕಾಗಿ ಸೊಸೈಟಿಯಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಮರಳಿ ಪಡೆಯಲು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರಕಿಲ್ಲ. ಠೇವಣಿ ಹಣ ವಾಪಸ್ಸು ನೀಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದರೂ, ಸಂಸ್ಥೆಯವರು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ’ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಉಪವಿಭಾಗಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿಗೆ ಕುಳಿತುಕೊಳ್ಳಲು ನಿರ್ಧರಿಸಿದ್ದೇವೆ. ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೂ’ ಎಂದೂ ಆಗ್ರಹಿಸಿದ್ದಾರೆ.</p>.<p>ಸಮಾಜ ಸೇವಕ ರಫೀಕ ಬಡೇಘರ, ಕಿತ್ತೂರು ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಕೋಲಕಾರ, ಪುಣ್ಯ ಕೋಟಿ ಸಂಘದ ಮಂಜು ಮರೆಶೆಟ್ಟಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-21-1375832213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>