<p><strong>ಬೆಳಗಾವಿ:</strong> ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಸೋಮವಾರ ಶ್ರದ್ಧಾ–ಭಕ್ತಿಯಿಂದ ಆಚರಿಸಲು ಮುಸ್ಲಿಮರು ಸಜ್ಜಾಗಿದ್ದಾರೆ.</p>.<p>ಇಲ್ಲಿನ ನ್ಯಾಯಾಲಯ ಆವರಣದ ಬಳಿ ಇರುವ ಈದ್ಗಾ ಮೈದಾನ, ಕೋಟೆ ಆವರಣದಲ್ಲಿರುವ ಹಳೆಯ ಮಸೀದಿ ಸೇರಿದಂತೆ ನಗರದ ಎಲ್ಲ ಮಸೀದಿಗಳಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿದೆ. ಸಕಲ ಜೀವರಾಶಿ ಒಳಿತಿಗಾಗಿ ಪ್ರಾರ್ಥಿಸಲಿರುವ ಮುಸ್ಲಿಮರು, ಕುರ್ಬಾನಿ(ಪ್ರಾಣಿಬಲಿ) ನೀಡಿ ಭಕ್ತಿ ಮೆರೆಯಲಿದ್ದಾರೆ.</p>.<p>ಹಬ್ಬದ ಮುನ್ನಾದಿನವಾದ ಭಾನುವಾರ, ಇಲ್ಲಿನ ಖಡೇಬಜಾರ್, ಖಂಜರ್ ಗಲ್ಲಿ, ಗಣಪತ ಗಲ್ಲಿ ಮತ್ತಿತರ ಮಾರುಕಟ್ಟೆ ಪ್ರದೇಶಗಳಲ್ಲಿ ಖರೀದಿ ಭರಾಟೆ ಜೋರಾಗಿತ್ತು. ಸಿಹಿಖಾದ್ಯವಾದ ‘ಶಿರ್–ಕುರ್ಮಾ’ ತಯಾರಿಕೆಗೆ ಬೇಕಿರುವ ಶಾವಿಗೆ, ಒಣಹಣ್ಣುಗಳನ್ನು ಜನರು ಉತ್ಸಾಹದಿಂದ ಖರೀದಿಸುತ್ತಿರುವುದು ಕಂಡುಬಂತು.</p>.<p>‘ಬಕ್ರೀದ್ ಹಿನ್ನೆಲೆಯಲ್ಲಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಜನರು ಶಾಂತಿಯುತವಾಗಿ ಹಬ್ಬ ಆಚರಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಸೋಮವಾರ ಶ್ರದ್ಧಾ–ಭಕ್ತಿಯಿಂದ ಆಚರಿಸಲು ಮುಸ್ಲಿಮರು ಸಜ್ಜಾಗಿದ್ದಾರೆ.</p>.<p>ಇಲ್ಲಿನ ನ್ಯಾಯಾಲಯ ಆವರಣದ ಬಳಿ ಇರುವ ಈದ್ಗಾ ಮೈದಾನ, ಕೋಟೆ ಆವರಣದಲ್ಲಿರುವ ಹಳೆಯ ಮಸೀದಿ ಸೇರಿದಂತೆ ನಗರದ ಎಲ್ಲ ಮಸೀದಿಗಳಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿದೆ. ಸಕಲ ಜೀವರಾಶಿ ಒಳಿತಿಗಾಗಿ ಪ್ರಾರ್ಥಿಸಲಿರುವ ಮುಸ್ಲಿಮರು, ಕುರ್ಬಾನಿ(ಪ್ರಾಣಿಬಲಿ) ನೀಡಿ ಭಕ್ತಿ ಮೆರೆಯಲಿದ್ದಾರೆ.</p>.<p>ಹಬ್ಬದ ಮುನ್ನಾದಿನವಾದ ಭಾನುವಾರ, ಇಲ್ಲಿನ ಖಡೇಬಜಾರ್, ಖಂಜರ್ ಗಲ್ಲಿ, ಗಣಪತ ಗಲ್ಲಿ ಮತ್ತಿತರ ಮಾರುಕಟ್ಟೆ ಪ್ರದೇಶಗಳಲ್ಲಿ ಖರೀದಿ ಭರಾಟೆ ಜೋರಾಗಿತ್ತು. ಸಿಹಿಖಾದ್ಯವಾದ ‘ಶಿರ್–ಕುರ್ಮಾ’ ತಯಾರಿಕೆಗೆ ಬೇಕಿರುವ ಶಾವಿಗೆ, ಒಣಹಣ್ಣುಗಳನ್ನು ಜನರು ಉತ್ಸಾಹದಿಂದ ಖರೀದಿಸುತ್ತಿರುವುದು ಕಂಡುಬಂತು.</p>.<p>‘ಬಕ್ರೀದ್ ಹಿನ್ನೆಲೆಯಲ್ಲಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಜನರು ಶಾಂತಿಯುತವಾಗಿ ಹಬ್ಬ ಆಚರಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>