ಗೋಕಾಕದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, ‘ನಾನು ಸಚಿವ ಸ್ಥಾನ ಬೇಡಿಕೆ ಇಟ್ಟಿಲ್ಲ. ಮಾಧ್ಯಮದಲ್ಲಿ ಆ ರೀತಿಯ ಸುದ್ದಿ ಏಕೆ ಬರುತ್ತಿದೆಯೋ ಗೊತ್ತಿಲ್ಲ. ಪಕ್ಷದಿಂದಲೂ ಅಂತಹ ಆಹ್ವಾನ ಬಂದಿಲ್ಲ. ಕೆಎಂಎಫ್ ಅಧ್ಯಕ್ಷನಾಗಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿದ್ದೇನೆ’ ಎಂದು ಸ್ಪಷ್ಟಪಡಿಸಿದರು.