<p>ಬೆಳಗಾವಿ: ‘ಸರ್ಕಾರಿ ಪ್ರಾಯೋಜಿತ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಬ್ಯಾಂಕ್ ಶಾಖೆಗಳನ್ನು ಪ್ರಾರಂಭಿಸಲು ಮುಂದಾಗಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಲೀಡ್ ಬ್ಯಾಂಕುಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಬ್ಯಾಂಕರುಗಳ ಸಭೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣರಿಗೆ ಬ್ಯಾಂಕಿಂಗ್ ವ್ಯವಹಾರಗಳ ಅರಿವು ಮೂಡಿಸಬೇಕು. ಈ ಬಗ್ಗೆ ಮುಂದಿನ ಸಭೆಯಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ‘ಬ್ಯಾಂಕುಗಳಲ್ಲಿ ಬಹುದಿನದಿಂದ ಬಾಕಿ ಇರುವ ಸರ್ಕಾರಿ ಯೋಜನೆಯ ಫಲಾನುಭವಿಗಳ ವಿವರವನ್ನು ಆದಷ್ಟು ಬೇಗನೆ ಪರಿಶೀಲಿಸಿ, ಕ್ರಮ ತೆಗೆದುಕೊಳ್ಳಬೇಕು. ರೈತ ಹಾಗೂ ಪರಿಶಿಷ್ಟ ಗ್ರಾಹಕರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯಸ್ಥ ಸುರೇಶ ಪೈ ವರದಿ ನೀಡಿದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಪಿ.ಬಿಸ್ವಾಸ್, ನಬಾರ್ಡ್ ಡಿಡಿಎಂ ಅಭಿನವ ಯಾದವ, ಜಿಲ್ಲೆಯ ಎಲ್ಲ ಬ್ಯಾಂಕ್ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಸರ್ಕಾರಿ ಪ್ರಾಯೋಜಿತ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಬ್ಯಾಂಕ್ ಶಾಖೆಗಳನ್ನು ಪ್ರಾರಂಭಿಸಲು ಮುಂದಾಗಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಲೀಡ್ ಬ್ಯಾಂಕುಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಬ್ಯಾಂಕರುಗಳ ಸಭೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣರಿಗೆ ಬ್ಯಾಂಕಿಂಗ್ ವ್ಯವಹಾರಗಳ ಅರಿವು ಮೂಡಿಸಬೇಕು. ಈ ಬಗ್ಗೆ ಮುಂದಿನ ಸಭೆಯಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ‘ಬ್ಯಾಂಕುಗಳಲ್ಲಿ ಬಹುದಿನದಿಂದ ಬಾಕಿ ಇರುವ ಸರ್ಕಾರಿ ಯೋಜನೆಯ ಫಲಾನುಭವಿಗಳ ವಿವರವನ್ನು ಆದಷ್ಟು ಬೇಗನೆ ಪರಿಶೀಲಿಸಿ, ಕ್ರಮ ತೆಗೆದುಕೊಳ್ಳಬೇಕು. ರೈತ ಹಾಗೂ ಪರಿಶಿಷ್ಟ ಗ್ರಾಹಕರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯಸ್ಥ ಸುರೇಶ ಪೈ ವರದಿ ನೀಡಿದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಪಿ.ಬಿಸ್ವಾಸ್, ನಬಾರ್ಡ್ ಡಿಡಿಎಂ ಅಭಿನವ ಯಾದವ, ಜಿಲ್ಲೆಯ ಎಲ್ಲ ಬ್ಯಾಂಕ್ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>