‘ಪ್ರಸ್ತುತ ಸಣ್ಣ ಬ್ಯಾಂಕ್ಗಳು ಆರ್ಥಿಕವಾಗಿ ದಿವಾಳಿಯಾಗುತ್ತಿವೆ. ಸಾಲ ಮರುಪಾವತಿ ಸಕಾಲದಲ್ಲಿ ಆಗುತ್ತಿಲ್ಲ. ಅರ್ಥ ವ್ಯವಸ್ಥೆಯಲ್ಲಿ ಹಣದ ಹರಿವಿನ ಪ್ರಮಾಣ ಕಡಿಮೆಯಾಗುತ್ತಿದೆ. ವಿಜಯ ಮಲ್ಯ ಮತ್ತು ನೀರವ್ ಮೋದಿ ಅವರಂತಹ ವ್ಯಕ್ತಿಗಳು ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ಬ್ಯಾಂಕ್ಗಳಿಗೆ ವಂಚಿಸಿ ವಿದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ. ಇದರಿಂದಾಗಿ, ಸಾಲ ನೀಡಿದ ಬ್ಯಾಂಕ್ಗಳು ದಿವಾಳಿ ಅಂಚಿನಲ್ಲಿವೆ. ಇಂತಹ ಸಾಲಗಾರರಿಂದ ಜನಸಾಮಾನ್ಯರು ತಮ್ಮ ಹಣ ಕಳೆದುಕೊಳ್ಳುವುದಷ್ಟೇ ಅಲ್ಲದೇ, ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ಜನರ ನಂಬಿಕೆ ಕಡಿಮೆಯಾಗುತ್ತದೆ’ ಎಂದು ವಿಷಾದ ವ್ಯಕ್ತಪಡಿಸಿದರು.