ಅಥಣಿಯಲ್ಲಿ ಗುರುವಾರ ರಾತ್ರಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ತೂಕದ ಯಂತ್ರದ ಬಗ್ಗೆ ಸಚಿವರು ವಿಧಾನಸಭೆಯಲ್ಲೇ ಹೇಳಿದ್ದರು. ಆದರೆ, ಈಗ ಅವರ ಪುತ್ರಿ ಚುನಾವಣೆಗೆ ನಿಂತಿರುವ ಕಾರಣ ಮಾತು ಬದಲಿಸಿ, ಕಾರ್ಖಾನೆಗಳಿಂದ ₹50 ಲಕ್ಷ ವಸೂಲಿ ಮಾಡುತ್ತಿದ್ದಾರೆ. ಇದಕ್ಕಾಗಿ ನೇಮಕಗೊಂಡ ವ್ಯಕ್ತಿ ಕೇಳಿದಾಗ, ನಾನು ಹಣ ಕೊಡಲಿಲ್ಲ. ನನ್ನ ಕಾರ್ಖಾನೆ ಮುಂದೆ 10 ಯಂತ್ರಗಳನ್ನು ಹಾಕಲಿ ಹೇಳಿದೆ’ ಎಂದರು.