<p><strong>ಬೆಳಗಾವಿ:</strong> ಬಸವಣ್ಣನನ್ನು ಸಾಂಸ್ಕೃತಿಕ ನಾಯಕನೆಂದು ರಾಜ್ಯ ಸರ್ಕಾರ ಘೋಷಿಸಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಬಸವ ಸಂಸ್ಕೃತಿ ಅಭಿಯಾನ’ದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. </p><p>ಲಿಂಗಾಯತ ಮಠಾಧೀಶರ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭೆ, ಶರಣ ಸಾಹಿತ್ಯ ಪರಿಷತ್, ರಾಷ್ಟ್ರೀಯ ಬಸವದಳ, ಲಿಂಗಾಯತ ಸಂಘಟನೆ ಹಾಗೂ ಬಸವಪರ ಸಂಘಟನೆಗಳ ಆಶ್ರಯದಲ್ಲಿ ನಡೆದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಬಸವ ಭಕ್ತರು ಸೇರಿದ್ದರು. ಬೆಳಗಾವಿ ಮಾತ್ರವಲ್ಲದೆ; ವಿವಿಧೆಡೆಯಿಂದ ಸಾವಿರಾರು ಜನರ ದಂಡು ಹರಿದುಬಂದಿತ್ತು.</p><p>ಲಿಂಗರಾಜ ಕಾಲೇಜು ಮೈದಾನದಿಂದ ಆರಂಭಗೊಂಡ ಮೆರವಣಿಗೆ ಕಾಲೇಜು ರಸ್ತೆ, ರಾಣಿ ಚನ್ನಮ್ಮನ ವೃತ್ತ, ಅಂಬೇಡ್ಕರ್ ರಸ್ತೆ, ಶ್ರೀಕೃಷ್ಣದೇವರಾಯ ವೃತ್ತ ಮಾರ್ಗವಾಗಿ ಸಾಗಿ, ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣ ತಲುಪಿತು.</p><p>ಮೆರವಣಿಗೆಯುದ್ದಕ್ಕೂ ಬಸವಣ್ಣನ ಪರ ಜೈಕಾರಗಳು ಮಾರ್ದನಿಸಿದವು. ‘ಜೈ ಬಸವೇಶ’ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಶರಣೆಯರು ವಚನದ ಕಟ್ಟುಗಳನ್ನು ಹೊತ್ತು ಸಾಗಿದರು. ಬಸವ ಧ್ವಜಗಳು ರಾರಾಜಿಸಿದವು.</p><p>ರಾಣಿ ಚನ್ನಮ್ಮನ ವೇಷಧಾರಿಗಳು ಕುದುರೆ ಮೇಲೆ ಹತ್ತಿ ಮೆರವಣಿಗೆಯುದ್ದಕ್ಕೂ ಗಮನಸೆಳೆದರು. ಇಡೀ ನಗರದಲ್ಲಿ ಬಸವ ತತ್ವ ಅಭಿಯಾನ ಅನುರಣಿಸಿತು.</p><p>ಶರಣರ ವೇಷಗಳಲ್ಲಿದ್ದ ಪುಟಾಣಿಗಳು ಮೆರವಣಿಗೆಗೆ ಮೆರುಗು ತಂದರು. ‘ಬಸವ ರಥ’ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು.</p><p>ವಿವಿಧ ಜಿಲ್ಲೆಗಳ ಮಠಗಳ ಮಠಾಧೀಶರು, ಶರಣರು–ಶರಣೆಯರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಬಸವಣ್ಣನನ್ನು ಸಾಂಸ್ಕೃತಿಕ ನಾಯಕನೆಂದು ರಾಜ್ಯ ಸರ್ಕಾರ ಘೋಷಿಸಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಬಸವ ಸಂಸ್ಕೃತಿ ಅಭಿಯಾನ’ದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. </p><p>ಲಿಂಗಾಯತ ಮಠಾಧೀಶರ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭೆ, ಶರಣ ಸಾಹಿತ್ಯ ಪರಿಷತ್, ರಾಷ್ಟ್ರೀಯ ಬಸವದಳ, ಲಿಂಗಾಯತ ಸಂಘಟನೆ ಹಾಗೂ ಬಸವಪರ ಸಂಘಟನೆಗಳ ಆಶ್ರಯದಲ್ಲಿ ನಡೆದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಬಸವ ಭಕ್ತರು ಸೇರಿದ್ದರು. ಬೆಳಗಾವಿ ಮಾತ್ರವಲ್ಲದೆ; ವಿವಿಧೆಡೆಯಿಂದ ಸಾವಿರಾರು ಜನರ ದಂಡು ಹರಿದುಬಂದಿತ್ತು.</p><p>ಲಿಂಗರಾಜ ಕಾಲೇಜು ಮೈದಾನದಿಂದ ಆರಂಭಗೊಂಡ ಮೆರವಣಿಗೆ ಕಾಲೇಜು ರಸ್ತೆ, ರಾಣಿ ಚನ್ನಮ್ಮನ ವೃತ್ತ, ಅಂಬೇಡ್ಕರ್ ರಸ್ತೆ, ಶ್ರೀಕೃಷ್ಣದೇವರಾಯ ವೃತ್ತ ಮಾರ್ಗವಾಗಿ ಸಾಗಿ, ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣ ತಲುಪಿತು.</p><p>ಮೆರವಣಿಗೆಯುದ್ದಕ್ಕೂ ಬಸವಣ್ಣನ ಪರ ಜೈಕಾರಗಳು ಮಾರ್ದನಿಸಿದವು. ‘ಜೈ ಬಸವೇಶ’ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಶರಣೆಯರು ವಚನದ ಕಟ್ಟುಗಳನ್ನು ಹೊತ್ತು ಸಾಗಿದರು. ಬಸವ ಧ್ವಜಗಳು ರಾರಾಜಿಸಿದವು.</p><p>ರಾಣಿ ಚನ್ನಮ್ಮನ ವೇಷಧಾರಿಗಳು ಕುದುರೆ ಮೇಲೆ ಹತ್ತಿ ಮೆರವಣಿಗೆಯುದ್ದಕ್ಕೂ ಗಮನಸೆಳೆದರು. ಇಡೀ ನಗರದಲ್ಲಿ ಬಸವ ತತ್ವ ಅಭಿಯಾನ ಅನುರಣಿಸಿತು.</p><p>ಶರಣರ ವೇಷಗಳಲ್ಲಿದ್ದ ಪುಟಾಣಿಗಳು ಮೆರವಣಿಗೆಗೆ ಮೆರುಗು ತಂದರು. ‘ಬಸವ ರಥ’ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು.</p><p>ವಿವಿಧ ಜಿಲ್ಲೆಗಳ ಮಠಗಳ ಮಠಾಧೀಶರು, ಶರಣರು–ಶರಣೆಯರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>