ನಗರದಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ವೇಳೆ ನಮ್ಮ ಸಮಾಜದ ಬಸನಗೌಡ ಪಾಟೀಲ ಯತ್ನಾಳ ಅಥವಾ ಅರವಿಂದ ಬೆಲ್ಲದ ಅವರನ್ನು ಪರಿಗಣಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಬದಲಾಯಿತು. ಧರ್ಮೇಂದ್ರ ಪ್ರಧಾನ್ ಅವರು ಬೆಂಗಳೂರಿಗೆ ಬಂದಿದ್ದ ವೇಳೆಯವರೆಗೂ, ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆ ಇತ್ತು’ ಎಂದರು.