<p><strong>ಬೆಳಗಾವಿ:</strong> ‘ಯಾರಿಗೂ ತೊಂದರೆಯಾಗದಂತೆ ಸರಳ ಮತ್ತು ಸಜ್ಜನಿಕೆಯಿಂದ ಬದುಕುವುದೇ ಬಸವ ಮಾರ್ಗ’ ಎಂದು ನಗರಪಾಲಿಕೆ ನಿವೃತ್ತ ಅಧಿಕಾರಿ ಡಿ.ಕೆ. ನಿಂಬಾಳ ಹೇಳಿದರು.</p>.<p>ಬಸವ ಭೀಮ ಸೇನೆಯು ಬಸವೇಶ್ವರ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಸವಣ್ಣನ ತತ್ವ–ಸಿದ್ಧಾಂತಗಳ ಪ್ರತಿಪಾದನೆಯೊಂದಿಗೆ ಶರಣರ ಸಮ ಸಮಾಜದ ತತ್ವಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ವಕೀಲ ಚನ್ನಬಸಪ್ಪ ಬಾಗೇವಾಡಿ, ‘ಲಿಂಗಾಯತ ಧರ್ಮಕ್ಕೆ ಸಂವಿಧಾನದ ಮಾನ್ಯತೆ ಇನ್ನೂ ಸಿಕ್ಕಿಲ್ಲ. ನಾವು ನಿರಾಶಾವಾದಿಗಳಲ್ಲ. ನ್ಯಾಯಾಂಗದ ಮೇಲೆ ಸಂಪೂರ್ಣ ಭರವಸೆ ಇದೆ. ಮಾನ್ಯತೆ ದೊರೆಯುವ ವಿಶ್ವಾಸವಿದೆ’ ಎಂದರು.</p>.<p>ಬಸವ ಭೀಮ ಸೇನೆ ಅಧ್ಯಕ್ಷ ಆರ್.ಎಸ್. ದರ್ಗೆ ಮಾತನಾಡಿ, ‘ಬಹು ಭಾಷಾ ಮತ್ತು ಸಂಸ್ಕೃತಿಯ ಈ ದೇಶವನ್ನು ಹಿಂದುತ್ವದ ಅಡಿಯಲ್ಲಿ ಕಟ್ಟಲು ಸಾಧ್ಯವಿಲ್ಲ. ಎಲ್ಲ ಶೋಷಿತ ಸಮುದಾಯಗಳ ಕಾಯಕ ಜೀವಿಗಳನ್ನು ಗೌರವಿಸುವ ಬಸವ ಮಾರ್ಗದಿಂದ ಮಾತ್ರ ಸುಭದ್ರ ಭಾರತ ನಿರ್ಮಿಸಬಹುದು. ಭಾರತ ಬಸವ ಭಾರತವಾಗಬೇಕು’ ಎಂದು ಹೇಳಿದರು.</p>.<p>ಮುಖಂಡರಾದ ಬಸವರಾಜ ರೊಟ್ಟಿ, ರಾಜಶೇಖರ ಭೋಜ, ಸಿದಗೌಡ ಮೋದಗಿ, ರಾಜು ಕುಂದಗೋಳ, ಬಿ.ಎ. ಪಾಟೀಲ, ಸಿದ್ರಾಮ ಸಾವಳಗಿ, ಆಕಾಶ ಹಲಗೇಕರಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಯಾರಿಗೂ ತೊಂದರೆಯಾಗದಂತೆ ಸರಳ ಮತ್ತು ಸಜ್ಜನಿಕೆಯಿಂದ ಬದುಕುವುದೇ ಬಸವ ಮಾರ್ಗ’ ಎಂದು ನಗರಪಾಲಿಕೆ ನಿವೃತ್ತ ಅಧಿಕಾರಿ ಡಿ.ಕೆ. ನಿಂಬಾಳ ಹೇಳಿದರು.</p>.<p>ಬಸವ ಭೀಮ ಸೇನೆಯು ಬಸವೇಶ್ವರ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಸವಣ್ಣನ ತತ್ವ–ಸಿದ್ಧಾಂತಗಳ ಪ್ರತಿಪಾದನೆಯೊಂದಿಗೆ ಶರಣರ ಸಮ ಸಮಾಜದ ತತ್ವಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ವಕೀಲ ಚನ್ನಬಸಪ್ಪ ಬಾಗೇವಾಡಿ, ‘ಲಿಂಗಾಯತ ಧರ್ಮಕ್ಕೆ ಸಂವಿಧಾನದ ಮಾನ್ಯತೆ ಇನ್ನೂ ಸಿಕ್ಕಿಲ್ಲ. ನಾವು ನಿರಾಶಾವಾದಿಗಳಲ್ಲ. ನ್ಯಾಯಾಂಗದ ಮೇಲೆ ಸಂಪೂರ್ಣ ಭರವಸೆ ಇದೆ. ಮಾನ್ಯತೆ ದೊರೆಯುವ ವಿಶ್ವಾಸವಿದೆ’ ಎಂದರು.</p>.<p>ಬಸವ ಭೀಮ ಸೇನೆ ಅಧ್ಯಕ್ಷ ಆರ್.ಎಸ್. ದರ್ಗೆ ಮಾತನಾಡಿ, ‘ಬಹು ಭಾಷಾ ಮತ್ತು ಸಂಸ್ಕೃತಿಯ ಈ ದೇಶವನ್ನು ಹಿಂದುತ್ವದ ಅಡಿಯಲ್ಲಿ ಕಟ್ಟಲು ಸಾಧ್ಯವಿಲ್ಲ. ಎಲ್ಲ ಶೋಷಿತ ಸಮುದಾಯಗಳ ಕಾಯಕ ಜೀವಿಗಳನ್ನು ಗೌರವಿಸುವ ಬಸವ ಮಾರ್ಗದಿಂದ ಮಾತ್ರ ಸುಭದ್ರ ಭಾರತ ನಿರ್ಮಿಸಬಹುದು. ಭಾರತ ಬಸವ ಭಾರತವಾಗಬೇಕು’ ಎಂದು ಹೇಳಿದರು.</p>.<p>ಮುಖಂಡರಾದ ಬಸವರಾಜ ರೊಟ್ಟಿ, ರಾಜಶೇಖರ ಭೋಜ, ಸಿದಗೌಡ ಮೋದಗಿ, ರಾಜು ಕುಂದಗೋಳ, ಬಿ.ಎ. ಪಾಟೀಲ, ಸಿದ್ರಾಮ ಸಾವಳಗಿ, ಆಕಾಶ ಹಲಗೇಕರಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>