ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ: ನಾಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ– ಬಸವಜಯ ಮೃತ್ಯುಂಜಯ ಸ್ವಾಮೀಜಿ

ಕನಿಷ್ಠ 20 ಲಕ್ಷ ಜನ ಸೇರುವುದು ನಿಶ್ಚಿತ, ಮೀಸಲಾತಿ ಪಡೆದೇ ಮನೆಗೆ ಮರಳಲು ನಿರ್ಧಾರ’
Last Updated 21 ಡಿಸೆಂಬರ್ 2022, 11:22 IST
ಅಕ್ಷರ ಗಾತ್ರ

ಬೆಳಗಾವಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಡಿ. 22ರಂದು ಬೃಹತ್‌ ಸಮಾವೇಶ ನಡೆಯುವುದು ಶತಸಿದ್ಧ. ಬುತ್ತಿ ಕಟ್ಟಿಕೊಂಡು ಬರುವ ನಮ್ಮ ಜನ ಸುವರ್ಣ ವಿಧಾನಸೌಧ ಬಿಟ್ಟು ಕದಲುವುದಿಲ್ಲ. ಮೀಸಲಾತಿ ಪಡೆದೇ ಮನೆಗೆ ಹೋಗುತ್ತೇವೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸುವರ್ಣ ಸೌಧದ ಬಳಿ ಸಮಾವೇಶಕ್ಕೆ ಗುರುತಿಸಿದ ಜಾಗದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇಲ್ಲಿ ನೂರು ಎಕರೆಯಷ್ಟು ವಿಶಾಲ ಜಾಗ ಸಿದ್ಧಮಾಡಿದ್ದೇವೆ. ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷ ಎ.ಬಿ.‍ಪಾಟೀಲ ಅವರು ಜಾಗ ಗುರುತಿಸಿದ್ದಾರೆ. ಹರಿಹರದ ಮಾಜಿ ಶಾಸಕ ಶಿವಂಶಕರ ಅವರು 1000 ಕ್ವಿಂಟಲ್‌ ಅಕ್ಕಿ ತರಿಸಿದ್ದಾರೆ. ಸಿ.ಸಿ. ಪಾಟೀಲ ಅವರು ಪದಾರ್ಥ ತರಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಕಾಶಪ್ಪನವರ, ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಕೆ.ಪಾಟೀಲ ಎಲ್ಲರೂ ಸಿದ್ಧತೆ ಮಾಡಿದ್ದಾರೆ. ಸಮಾಜದ ಜನ ಯಾವುದೇ ಹಿಂಜರಿಕೆ ಪಡೆದೇ ಬನ್ನಿ ಕರೆ ನೀಡಿದರು’ ಎಂದರು.

‘ಕನಿಷ್ಠ 20 ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ವೇದಿಕೆಗೆ ರಾಣಿ ಚನ್ನಮ್ಮನ ಹೆಸರು, ಮಹಾದ್ವಾರಕ್ಮೆ ಬೆಳವಡಿ ಮಲ್ಲಮ್ಮನ ಹೆಸರು, ಪ್ರದೇಶಕ್ಕೆ ರಾವ್‌ ಬಹಾದ್ದೂರ ಅರಟಾಳ ರುದ್ರಗೌಡರ ಹೆಸರು ಇಡಲಾಗಿದೆ. ಲಿಂಗಾಯತ ಪಂಚಮಸಾಲಿ ಸಮಾಜದ ಐದೂ ಪಂಗಡಗಳ ಜನ ಸೇರುವ ಕಾರಣ ‘ವಿರಾಟ ಪಂಚಶಕ್ತಿ’ ಹೋರಾಟ ಎಂದು ಕರೆಯಲಾಗಿದೆ’ ಎಂದರು.

ಸಮಾವೇಶ ವಿಫಲಗೊಳಿಸುವ ಉದ್ದೇಶದಿಂದ ಆಯಾ ಜಿಲ್ಲೆಗಳ ಗಡಿಯಲ್ಲೇ ಜನರನ್ನು ತಡೆಯಲು ಬ್ಯಾರಿಕೇಡ್‌ ಹಾಕಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ನಾವು ಶಾಂತರೀತಿಯ ಹೋರಾಟ ಮಾಡುವವರು. ಯಾರನ್ನೂ ತಡೆಯಕೂಡದ ಎಂದೂ ಅವರು ಹೇಳಿದರು.

’ಗುರುವಾರ ಬೆಳಿಗ್ಗೆ 11ಕ್ಕೆ ಸಮಾವೇಶ ಆರಂಭವಾಗುತ್ತದೆ. ಮೀಸಲಾತಿ ಘೋಷಿಸಿದರೆ ಮುಖ್ಯಮಂತ್ರಿ ಅವರನ್ನು ಕರೆದು ಕಲ್ಲುಸಕ್ಕರೆ ತುಲಾಭಾರ ಮಾಡಿ, ಸಿಹಿ ತಿನ್ನಿಸುತ್ತೇವೆ. ಇಲ್ಲದಿದ್ದರೆ ಬಂಡಾಯದ ಧ್ವಜ ಎತ್ತುತ್ತೇವೆ ಎಂದರು.

‘ಮುಖ್ಯಮಂತ್ರಿ ಅವರನ್ನು ಬಹಳ ನಂಬಿದ್ದೇವೆ. ಗುರುವಾರ ವರದಿ ತರಿಸಿಕೊಳ್ಳಲಿದ್ದಾರೆ ಎಂಬ ಸೂಚನೆಗಳು ಬಂದಿವೆ’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT