‘ಮುಖ್ಯಮಂತ್ರಿ ಹೇಳಿಕೆ ತೀವ್ರ ಖಂಡನೀಯ. ಕೋವಿಡ್, ಲಾಕ್ಡೌನ್ ಮೊದಲಾದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಪರಿಹಾರ ಕಲ್ಪಿಸುವುದಕ್ಕೆ ಆದ್ಯತೆ ಕೊಡುವ ಬದಲಿಗೆ ಕೋಮುಗಲಭೆಗಳಿಗೆ ಪ್ರಚೋದನೆ ನೀಡುವ ಮಾತಗಳನ್ನಾಡಿರುವುದು ಸರಿಯಲ್ಲ. ನೈತಿಕ ಪೊಲೀಸ್ ಹೆಸರಲ್ಲಿ ಅನೈತಿಕ ಗೂಂಡಾಗಿರಿ ನಡೆಸುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಇದನ್ನು ನಾವು ಖಂಡಿಸುತ್ತೇವೆ. ಮತಾಂತರಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ರಸ್ತೆ ತಡೆ ನಡೆಸಿ ಜನರಿಗೆ ತೊಂದರೆ ಕೊಟ್ಟಿದ್ದಾರೆ. ನಮ್ಮ ಸಮಾಜ ಯಾವ ದಿಕ್ಕಿನಲ್ಲಿ ಹೊರಟಿದೆ?’ ಎಂದು ಕಳವಳ ವ್ಯಕ್ತಪಡಿಸಿದರು.