ಬೆಳಗಾವಿ ಕಂದಾಯ ವಿಭಾಗಕ್ಕೆ ಬೆಳಗಾವಿ ವಲಯದ ಜಂಟಿ ನಿರ್ದೇಶಕರಾಗಿ ನೇಮಗಕೊಂಡಿರುವ ಬಸವರಾಜ ಹೂಗಾರ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು. ವಲಯವು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಉತ್ತರಕನ್ನಡ ಮತ್ತು ಧಾರವಾಡ ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಈ ಜಿಲ್ಲೆಗಳಲ್ಲಿ ಬರುವ ಟ್ರಸ್ಟ್ಗಳು, ಅಕಾಡೆಮಿಗಳು ಮತ್ತು ರಂಗಾಯಣ, ರಂಗಮಂದಿರಗಳು ಹಾಗೂ ಸಹಾಯಕ ನಿರ್ದೆಶಕರ ಮೇಲ್ವಿಚಾರಣೆಯ ಅಧಿಕಾರವನ್ನು ನೂತನ ಜಂಟಿ ನಿರ್ದೇಶಕರಿಗೆ ನೀಡಲಾಗಿದೆ.