<p><strong>ಹುಕ್ಕೇರಿ</strong>: ತಾಲ್ಲೂಕಿನ ಗುಟಗುದ್ದಿ ಗ್ರಾಮದಲ್ಲಿ ನಡೆದ ಬಸವರಾಜ ಹುಂದ್ರಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಹೊಸ ವಂಟಮೂರಿ ತಂಡವು, ಗುಟಗುದ್ದಿ ತಂಡವನ್ನು ಮಣಿಸಿ, ಜಯ ಗಳಿಸಿತು.</p>.<p>ಹೊಸ ವಂಟಮೂರಿ ತಂಡಕ್ಕೆ ಪ್ರಥಮ ಬಹುಮಾನವಾಗಿ ₹10 ಸಾವಿರ ಮತ್ತು ಟ್ರೋಫಿ, ಗುಟಗುದ್ದಿ ತಂಡಕ್ಕೆ ದ್ವಿತೀಯ ಬಹುಮಾನ ₹7 ಸಾವಿರ ಮತ್ತು ಟ್ರೋಫಿ ಹಾಗೂ ಸೋನಟ್ಟಿ ತಂಡಕ್ಕೆ ತೃತೀಯ ಬಹುಮಾನ ₹5 ಸಾವಿರ ಮತ್ತು ಟ್ರೋಫಿ ವಿತರಿಸಲಾಯಿತು. ಒಟ್ಟು 28 ತಂಡಗಳು ಟೂರ್ನಿಯಲ್ಲಿ ಭಾಗವಹಿಸಿದ್ದವು.</p>.<p>ಬಹುಮಾನ ವಿತರಿಸಿ ಮಾತನಾಡಿದ ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ, ‘ಕ್ರೀಡೆಯಲ್ಲಿ ಸೋಲು–ಗೆಲುವು ಸಹಜ. ಸ್ಪರ್ಧಾಳುಗಳು ಕ್ರೀಡಾಸ್ಫೂರ್ತಿ ಬೆಳೆಸಿಕೊಳ್ಳಬೇಕು. ಸೋಲನ್ನು ಗೆಲುವಾಗಿಸುವತ್ತ ಚಿಂತಿಸಬೇಕೆ ವಿನಃ ವೈರತ್ವ ಸಾಧಿಸುವುದರಲ್ಲಿ ಅರ್ಥವಿಲ್ಲ’ ಎಂದರು.</p>.<p>ಗಂಗಾರಾಮ್ ಪಾಟೀಲ, ಬಸವರಾಜ ಲಂಕೆಪ್ಪಗೋಳ, ಬಸವರಾಜ ಪೂಜೇರಿ, ರಾಮಚಂದ್ರ ನಾಯಿಕ, ಯಲ್ಲಪ್ಪ ಗಡಕರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ತಾಲ್ಲೂಕಿನ ಗುಟಗುದ್ದಿ ಗ್ರಾಮದಲ್ಲಿ ನಡೆದ ಬಸವರಾಜ ಹುಂದ್ರಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಹೊಸ ವಂಟಮೂರಿ ತಂಡವು, ಗುಟಗುದ್ದಿ ತಂಡವನ್ನು ಮಣಿಸಿ, ಜಯ ಗಳಿಸಿತು.</p>.<p>ಹೊಸ ವಂಟಮೂರಿ ತಂಡಕ್ಕೆ ಪ್ರಥಮ ಬಹುಮಾನವಾಗಿ ₹10 ಸಾವಿರ ಮತ್ತು ಟ್ರೋಫಿ, ಗುಟಗುದ್ದಿ ತಂಡಕ್ಕೆ ದ್ವಿತೀಯ ಬಹುಮಾನ ₹7 ಸಾವಿರ ಮತ್ತು ಟ್ರೋಫಿ ಹಾಗೂ ಸೋನಟ್ಟಿ ತಂಡಕ್ಕೆ ತೃತೀಯ ಬಹುಮಾನ ₹5 ಸಾವಿರ ಮತ್ತು ಟ್ರೋಫಿ ವಿತರಿಸಲಾಯಿತು. ಒಟ್ಟು 28 ತಂಡಗಳು ಟೂರ್ನಿಯಲ್ಲಿ ಭಾಗವಹಿಸಿದ್ದವು.</p>.<p>ಬಹುಮಾನ ವಿತರಿಸಿ ಮಾತನಾಡಿದ ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ, ‘ಕ್ರೀಡೆಯಲ್ಲಿ ಸೋಲು–ಗೆಲುವು ಸಹಜ. ಸ್ಪರ್ಧಾಳುಗಳು ಕ್ರೀಡಾಸ್ಫೂರ್ತಿ ಬೆಳೆಸಿಕೊಳ್ಳಬೇಕು. ಸೋಲನ್ನು ಗೆಲುವಾಗಿಸುವತ್ತ ಚಿಂತಿಸಬೇಕೆ ವಿನಃ ವೈರತ್ವ ಸಾಧಿಸುವುದರಲ್ಲಿ ಅರ್ಥವಿಲ್ಲ’ ಎಂದರು.</p>.<p>ಗಂಗಾರಾಮ್ ಪಾಟೀಲ, ಬಸವರಾಜ ಲಂಕೆಪ್ಪಗೋಳ, ಬಸವರಾಜ ಪೂಜೇರಿ, ರಾಮಚಂದ್ರ ನಾಯಿಕ, ಯಲ್ಲಪ್ಪ ಗಡಕರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>