‘ಅವರು ‘ನೇತಾಜಿ’ ದಿನಪತ್ರಿಕೆ, ‘ಸಂಯುಕ್ತ ಕರ್ನಾಟಕ’ದಲ್ಲಿ ಕೆಲ ವರ್ಷ, ಬಳಿಕ ‘ಕನ್ನಡಪ್ರಭ’, ‘ಇಂಡಿಯನ್ ಎಕ್ಸ್ಪ್ರೆಸ್’ ಪತ್ರಿಕೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ‘ಸಾಕ್ಷಿ ಹೇಳಲಾಗದ ಕಥೆಗಳು’, ‘ವೃತ್ತಾಂತ’ ಎಂಬ ಪತ್ರಿಕಾ ಬದುಕಿನ ಅನುಭವ ಆಧರಿಸಿದ ಕೃತಿಗಳನ್ನು ರಚಿಸಿದ್ದಾರೆ. ಕಾವ್ಯ, ಕಥೆ, ಕಾದಂಬರಿ, ಅನುವಾದ ನಾಟಕ ವಿಮರ್ಶೆ ಕುರಿತು 60ಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ. ಅವರ ಅಂಕಣ ಬರಹಗಳು ಮತ್ತು ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದಾರೆ. 45 ವರ್ಷಗಳ ಸುದೀರ್ಘ ಅನುಭವ ಮತ್ತು ಸಾಧನೆ ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.