<p><strong>ಮೂಡಲಗಿ</strong>: ‘ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘವು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ ₹4.15 ಕೋಟಿ ನಿವ್ವಳ ಲಾಭ ಪಡೆದು ಪ್ರಗತಿಯಲ್ಲಿ ಸಾಗಿದೆ’ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬ.ಬೆಳಕೂಡ ಹೇಳಿದರು.</p>.<p>ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಸಭಾಭವನದಲ್ಲಿ 34ನೇ ವರ್ಷದ ಸರ್ವಸಾಧಾರಣಾ ಸಭೆಯಲ್ಲಿ ಮಾತನಾಡಿದ ಅವರು, ‘ಸದ್ಯ ₹78.86 ಲಕ್ಷ ಷೇರು ಬಂಡವಾಳ, ₹78.84 ಕೋಟಿ ಠೇವು, ₹22.92 ಕೋಟಿ ನಿಧಿ, ₹8.75 ಕೋಟಿ ಗುಂತಾವಣಿಗೆಳು ಇದ್ದು, ದುಡಿಯುವ ಬಂಡವಾಳ ₹98.56 ಕೋಟಿ ಮತ್ತು ಅಡಿಟ್ದಲ್ಲಿ 'ಅ' ಶ್ರೇಣಿ ಪಡೆದುಕೊಂಡಿದೆ’ ಎಂದು ತಿಳಿಸಿದರು.</p>.<p>ಸಂಘವು ಕಳೆದ 25 ವರ್ಷಗಳಿಂದ ಶೇ 100ರಷ್ಟು ಸಾಲ ವಸೂಲಾತಿ ಮಾಡಿದ್ದು, ಸದಸ್ಯರಿಗೆ ಶೇ 25ರಷ್ಟು ಲಾಭಾಂಶ ವಿತರಿಸಿವುದರ ಜೊತೆಗೆ ಮರಣ ಹೊಂದುವ ಸದಸ್ಯರ ಕುಟುಂಬಕ್ಕೆ ₹5 ಸಾವಿರ ಮರಣೋತ್ತರ ನಿಧಿ ನೀಡಲಾಗುತ್ತಿದೆ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಸದಸ್ಯರ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಧನ ನೀಡಲಾಗುತ್ತಿದೆ ಎಂದರು.</p>.<p>ಸಂಘದ ಉಪಾಧ್ಯಕ್ಷ ಶಿವರುದ್ರ ಬಿ. ಪಾಟೀಲ, ನಿರ್ದೇಶಕರಾದ ಬಸಗೌಡ ಪಾಟೀಲ, ಬಸವಣ್ಣೆಪ್ಪ ಗೋರೊಶಿ, ಮಲ್ಲಪ್ಪ ಖಾನಾಪುರ, ರಾಮಪ್ಪಾ ದಬಾಡಿ, ಹಣಮಂತ ಪರಕನಟ್ಟಿ, ಸುಭಾಷ ಖಾನಾಪುರ, ಬಸಪ್ಪಾ ಹೆಬ್ಬಾಳ, ದುಂಡವ್ವಾ ಕಡಾಡಿ, ಲಕ್ಷ್ಮೀಬಾಯಿ ಕಂಕಣವಾಡಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ</strong>: ‘ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘವು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ ₹4.15 ಕೋಟಿ ನಿವ್ವಳ ಲಾಭ ಪಡೆದು ಪ್ರಗತಿಯಲ್ಲಿ ಸಾಗಿದೆ’ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬ.ಬೆಳಕೂಡ ಹೇಳಿದರು.</p>.<p>ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಸಭಾಭವನದಲ್ಲಿ 34ನೇ ವರ್ಷದ ಸರ್ವಸಾಧಾರಣಾ ಸಭೆಯಲ್ಲಿ ಮಾತನಾಡಿದ ಅವರು, ‘ಸದ್ಯ ₹78.86 ಲಕ್ಷ ಷೇರು ಬಂಡವಾಳ, ₹78.84 ಕೋಟಿ ಠೇವು, ₹22.92 ಕೋಟಿ ನಿಧಿ, ₹8.75 ಕೋಟಿ ಗುಂತಾವಣಿಗೆಳು ಇದ್ದು, ದುಡಿಯುವ ಬಂಡವಾಳ ₹98.56 ಕೋಟಿ ಮತ್ತು ಅಡಿಟ್ದಲ್ಲಿ 'ಅ' ಶ್ರೇಣಿ ಪಡೆದುಕೊಂಡಿದೆ’ ಎಂದು ತಿಳಿಸಿದರು.</p>.<p>ಸಂಘವು ಕಳೆದ 25 ವರ್ಷಗಳಿಂದ ಶೇ 100ರಷ್ಟು ಸಾಲ ವಸೂಲಾತಿ ಮಾಡಿದ್ದು, ಸದಸ್ಯರಿಗೆ ಶೇ 25ರಷ್ಟು ಲಾಭಾಂಶ ವಿತರಿಸಿವುದರ ಜೊತೆಗೆ ಮರಣ ಹೊಂದುವ ಸದಸ್ಯರ ಕುಟುಂಬಕ್ಕೆ ₹5 ಸಾವಿರ ಮರಣೋತ್ತರ ನಿಧಿ ನೀಡಲಾಗುತ್ತಿದೆ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಸದಸ್ಯರ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಧನ ನೀಡಲಾಗುತ್ತಿದೆ ಎಂದರು.</p>.<p>ಸಂಘದ ಉಪಾಧ್ಯಕ್ಷ ಶಿವರುದ್ರ ಬಿ. ಪಾಟೀಲ, ನಿರ್ದೇಶಕರಾದ ಬಸಗೌಡ ಪಾಟೀಲ, ಬಸವಣ್ಣೆಪ್ಪ ಗೋರೊಶಿ, ಮಲ್ಲಪ್ಪ ಖಾನಾಪುರ, ರಾಮಪ್ಪಾ ದಬಾಡಿ, ಹಣಮಂತ ಪರಕನಟ್ಟಿ, ಸುಭಾಷ ಖಾನಾಪುರ, ಬಸಪ್ಪಾ ಹೆಬ್ಬಾಳ, ದುಂಡವ್ವಾ ಕಡಾಡಿ, ಲಕ್ಷ್ಮೀಬಾಯಿ ಕಂಕಣವಾಡಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>