<p><strong>ಬೈಲಹೊಂಗಲ</strong>: ‘ಗುರು ಬಸವೇಶ್ವರರ ಸಂದೇಶಗಳು ಸಾರ್ವಕಾಲಿಕವಾಗಿವೆ. ವಚನಗಳ ಸಾರ ನಿತ್ಯ ಜೊತೆಯಲ್ಲಿದ್ದರೆ ಜೀವನ ಪಾವನವಾಗಲಿದ್ದು, ಪೋಷಕರು ಮಕ್ಕಳಿಗೆ ಸದಾ ಸಂಪ್ರದಾಯ, ಸಂಸ್ಕಾರ ಕಲಿಸಿ ಜಾಗೃತರನ್ನಾಗಿಸಬೇಕು’ ಎಂದು ಗದಗ-ಡಂಬಳ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಉಡಕೇರಿ ಗ್ರಾಮದಲ್ಲಿ ಗುರುವಾರ ನಡೆದ ವಿಶ್ವಗುರು ಬಸವೇಶ್ವರರ ಅಶ್ವಾರೂಢ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಸವೇಶ್ವರ ಕಂಚಿನ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ,‘12 ನೇ ಶತಮಾನದಲ್ಲಿ ಸಮಾನತೆ ಸಂದೇಶ ಸಾರಿದ ಶರಣರನ್ನು ಪ್ರತಿಯೊಬ್ಬರು ಆರಾಧಿಸುವ ನಿಟ್ಟಿನಲ್ಲಿ ನಾಡಿನ ಪ್ರತಿಯೊಂದು ಗ್ರಾಮಗಳಲ್ಲಿ ಬಸವೇಶ್ವರರ ಅಶ್ವಾರೂಢ ಮೂರ್ತಿ ಪ್ರತಿಷ್ಠಾಪನೆಯಾಗಬೇಕು. ಬಸವ ಪರ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿ ಆ ಮೂಲಕ ಜನ ಜಾಗೃತಿಯಾಗಬೇಕು’ ಎಂದರು.</p>.<p>ಗ್ರಾಮದ ನಾಗರಿಕರಿಂದ ಬಸವೇಶ್ವರರ ಭಾವಚಿತ್ರ ಹಾಗೂ ಶರಣೆಯರಿಂದ ವಚನ ಸಾಹಿತ್ಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.</p>.<p>ಕದಳಿ ಮಹಿಳಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ್ಯೆ ಪೇಮಾ ಅಂಗಡಿ ಬಸವಾದಿ ಶರಣರ ಕುರಿತು ಉಪನ್ಯಾಸ ನೀಡಿದರು. ನಂತರ ಮಹಾಪ್ರಸಾದ ನಡೆಯಿತು. </p>.<p>ತೋಂಟದ ಡಾ.ಸಿದ್ದರಾಮ ಸ್ವಾಮೀಜಿ ಅವರಿಂದ ಇಷ್ಟಲಿಂಗ ಪೂಜೆ, ಮಕ್ಕಳಿಗೆ ಲಿಂಗದೀಕ್ಷೆ ಕಾರ್ಯಕ್ರಮ ಭಕ್ತಿ-ಭಾವಗಳಿಂದ ನಡೆಯಿತು. ರಾಮಲಿಂಗೇಶ್ವರ ಪ್ರೌಢಶಾಲೆ ಅಧ್ಯಕ್ಷ ರಾಜು ಬೋಳಶೆಟ್ಟಿ ಷಟಸ್ಥಳ ಧ್ವಜಾರೋಹಣ ನೆರವೇರಿಸಿದರು. ಚಂದ್ರು ಮೇಟ್ಯಾಳ ಸ್ವಾಗತಿಸಿದರು. ಉಮೇಶ ಹಿತ್ತಲಮನಿ ನಿರೂಪಿಸಿದರು. ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ</strong>: ‘ಗುರು ಬಸವೇಶ್ವರರ ಸಂದೇಶಗಳು ಸಾರ್ವಕಾಲಿಕವಾಗಿವೆ. ವಚನಗಳ ಸಾರ ನಿತ್ಯ ಜೊತೆಯಲ್ಲಿದ್ದರೆ ಜೀವನ ಪಾವನವಾಗಲಿದ್ದು, ಪೋಷಕರು ಮಕ್ಕಳಿಗೆ ಸದಾ ಸಂಪ್ರದಾಯ, ಸಂಸ್ಕಾರ ಕಲಿಸಿ ಜಾಗೃತರನ್ನಾಗಿಸಬೇಕು’ ಎಂದು ಗದಗ-ಡಂಬಳ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಉಡಕೇರಿ ಗ್ರಾಮದಲ್ಲಿ ಗುರುವಾರ ನಡೆದ ವಿಶ್ವಗುರು ಬಸವೇಶ್ವರರ ಅಶ್ವಾರೂಢ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಸವೇಶ್ವರ ಕಂಚಿನ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ,‘12 ನೇ ಶತಮಾನದಲ್ಲಿ ಸಮಾನತೆ ಸಂದೇಶ ಸಾರಿದ ಶರಣರನ್ನು ಪ್ರತಿಯೊಬ್ಬರು ಆರಾಧಿಸುವ ನಿಟ್ಟಿನಲ್ಲಿ ನಾಡಿನ ಪ್ರತಿಯೊಂದು ಗ್ರಾಮಗಳಲ್ಲಿ ಬಸವೇಶ್ವರರ ಅಶ್ವಾರೂಢ ಮೂರ್ತಿ ಪ್ರತಿಷ್ಠಾಪನೆಯಾಗಬೇಕು. ಬಸವ ಪರ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿ ಆ ಮೂಲಕ ಜನ ಜಾಗೃತಿಯಾಗಬೇಕು’ ಎಂದರು.</p>.<p>ಗ್ರಾಮದ ನಾಗರಿಕರಿಂದ ಬಸವೇಶ್ವರರ ಭಾವಚಿತ್ರ ಹಾಗೂ ಶರಣೆಯರಿಂದ ವಚನ ಸಾಹಿತ್ಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.</p>.<p>ಕದಳಿ ಮಹಿಳಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ್ಯೆ ಪೇಮಾ ಅಂಗಡಿ ಬಸವಾದಿ ಶರಣರ ಕುರಿತು ಉಪನ್ಯಾಸ ನೀಡಿದರು. ನಂತರ ಮಹಾಪ್ರಸಾದ ನಡೆಯಿತು. </p>.<p>ತೋಂಟದ ಡಾ.ಸಿದ್ದರಾಮ ಸ್ವಾಮೀಜಿ ಅವರಿಂದ ಇಷ್ಟಲಿಂಗ ಪೂಜೆ, ಮಕ್ಕಳಿಗೆ ಲಿಂಗದೀಕ್ಷೆ ಕಾರ್ಯಕ್ರಮ ಭಕ್ತಿ-ಭಾವಗಳಿಂದ ನಡೆಯಿತು. ರಾಮಲಿಂಗೇಶ್ವರ ಪ್ರೌಢಶಾಲೆ ಅಧ್ಯಕ್ಷ ರಾಜು ಬೋಳಶೆಟ್ಟಿ ಷಟಸ್ಥಳ ಧ್ವಜಾರೋಹಣ ನೆರವೇರಿಸಿದರು. ಚಂದ್ರು ಮೇಟ್ಯಾಳ ಸ್ವಾಗತಿಸಿದರು. ಉಮೇಶ ಹಿತ್ತಲಮನಿ ನಿರೂಪಿಸಿದರು. ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>