<p><strong>ಬೆಳಗಾವಿ</strong>: ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮತದಾನ ನಡೆಯಲಿದ್ದು, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ನಗರದ ವಿವಿಧೆಡೆ ಸಂಚರಿಸಿ ಮತಗಟ್ಟೆಗಳನ್ನು ಹಾಗೂ ಅಲ್ಲಿನ ಮೂಲಸೌಕರ್ಯಗಳನ್ನು ಗುರುವಾರ ಪರಿಶೀಲಿಸಿದರು.</p>.<p>ಮಸ್ಟರಿಂಗ್ ಕೇಂದ್ರವಾಗಿರುವ ನಗರದ ಬಿ.ಕೆ. ಮಾಡೆಲ್ ಪ್ರೌಢಶಾಲೆಯಿಂದ ಬೆಳಿಗ್ಗೆಯಿಂದಲೇ ಚುನಾವಣಾ ಸಿಬ್ಬಂದಿ ಮತ ಯಂತ್ರ ಸೇರಿದಂತೆ ಚುನಾವಣಾ ಸಾಮಗ್ರಿಗಳನ್ನು ತೆಗೆದುಕೊಂಡು ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ಗುರುವಾರ ಸಂಜೆ ವೇಳೆಗೆ ತೆರಳಿದರು. ಈ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಅಂತಿಮ ಕ್ಷಣದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು. ಮತಯಂತ್ರಗಳ ವ್ಯವಸ್ಥೆ, ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ವೀಕ್ಷಿಸಿದರು.</p>.<p>ಮತಗಟ್ಟೆಗೆ ನಿಯೋಜಿತ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಚರ್ಚಿಸಿದ ಅವರು, ‘ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಪ್ರತಿ ಮತಗಟ್ಟೆಗೆ ಐವರು ಚುನಾವಣಾ ಅಧಿಕಾರಿ/ಸಿಬ್ಬಂದಿ ನಿಯೋಜಿಸಲಾಗಿದೆ. ಶೇ.20 ಹೆಚ್ಚುವರಿ ಅಧಿಕಾರಿ/ಸಿಬ್ಬಂದಿ ಸೇರಿದಂತೆ ಒಟ್ಟು 2,500 ಜನರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆಯನ್ನು ನ್ಯಾಯಸಮ್ಮತವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಗರದ ಎಲ್ಲ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮತದಾನ ನಡೆಯಲಿದ್ದು, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ನಗರದ ವಿವಿಧೆಡೆ ಸಂಚರಿಸಿ ಮತಗಟ್ಟೆಗಳನ್ನು ಹಾಗೂ ಅಲ್ಲಿನ ಮೂಲಸೌಕರ್ಯಗಳನ್ನು ಗುರುವಾರ ಪರಿಶೀಲಿಸಿದರು.</p>.<p>ಮಸ್ಟರಿಂಗ್ ಕೇಂದ್ರವಾಗಿರುವ ನಗರದ ಬಿ.ಕೆ. ಮಾಡೆಲ್ ಪ್ರೌಢಶಾಲೆಯಿಂದ ಬೆಳಿಗ್ಗೆಯಿಂದಲೇ ಚುನಾವಣಾ ಸಿಬ್ಬಂದಿ ಮತ ಯಂತ್ರ ಸೇರಿದಂತೆ ಚುನಾವಣಾ ಸಾಮಗ್ರಿಗಳನ್ನು ತೆಗೆದುಕೊಂಡು ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ಗುರುವಾರ ಸಂಜೆ ವೇಳೆಗೆ ತೆರಳಿದರು. ಈ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಅಂತಿಮ ಕ್ಷಣದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು. ಮತಯಂತ್ರಗಳ ವ್ಯವಸ್ಥೆ, ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ವೀಕ್ಷಿಸಿದರು.</p>.<p>ಮತಗಟ್ಟೆಗೆ ನಿಯೋಜಿತ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಚರ್ಚಿಸಿದ ಅವರು, ‘ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಪ್ರತಿ ಮತಗಟ್ಟೆಗೆ ಐವರು ಚುನಾವಣಾ ಅಧಿಕಾರಿ/ಸಿಬ್ಬಂದಿ ನಿಯೋಜಿಸಲಾಗಿದೆ. ಶೇ.20 ಹೆಚ್ಚುವರಿ ಅಧಿಕಾರಿ/ಸಿಬ್ಬಂದಿ ಸೇರಿದಂತೆ ಒಟ್ಟು 2,500 ಜನರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆಯನ್ನು ನ್ಯಾಯಸಮ್ಮತವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಗರದ ಎಲ್ಲ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>