<p><strong>ಬೆಳಗಾವಿ/ಕಾಗವಾಡ:</strong> ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಸೋಮವಾರ ರಾತ್ರಿ 3 ಟನ್ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಸ್ಥಳೀಯರು ಬೆಂಕಿ ಹಚ್ಚಿದ ಘಟನೆ ಪಟ್ಟಣದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಯಿತು.</p>.<p>ಮಾಂಸ ಸಾಗಿಸುತ್ತಿದ್ದವರು ಮತ್ತು ವಾಹನಕ್ಕೆ ಬೆಂಕಿ ಹಚ್ಚಿದವರು ಸೇರಿ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್ಗೆ ಐಸ್ ಸ್ಲ್ಯಾಬ್ಗಳಿಂದ ಮುಚ್ಚಿದ ಮಾಂಸವನ್ನು ಲಾರಿಯಲ್ಲಿ ಸಾಗಿಸಲಾಗುತಿತ್ತು.</p>.<p>ಐನಾಪುರ ದಾಟುವಾಗ ಹಿಂದೂತ್ವ ಸಂಘಟನೆಯ ಕಾರ್ಯಕರ್ತರು ತಡೆದು, ಲಾರಿಗೆ ಬೆಂಕಿ ಹಚ್ಚಿದರು. ಪೊಲೀಸರು ಬರುವಷ್ಟರಲ್ಲಿ ವಾಹನ ಸುಟ್ಟು ಕರಕಲಾಗಿತ್ತು. ಜತೆಗೆ, ಹಲ್ಲೆ ಮಾಡಿದ್ದರಿಂದ ಚಾಲಕ ಮತ್ತು ಕ್ಲೀನರ್ಗೆ ಗಾಯಗಳಾಗಿವೆ.</p>.<p>‘ಮಾಂಸ ಸಾಗಿಸುತ್ತಿದ್ದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಷ್ಟಾದ ವಿಕಾಸ ವಾರೆ, ಸುಧೀರ ಗಸ್ತಿ, ಕುಡಚಿಯ ಸಾಹೇಬಲಾಲ್ ಮುತವಾಲೆ ಅವರನ್ನು ಬಂಧಿಸಿದ್ದೇವೆ. ಕಲಬುರಗಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದೇವೆ’ ಎಂದು ಜಿಲ್ಲಾ ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದರು.</p>.<p>‘ಲಾರಿಗೆ ಬೆಂಕಿ ಹಚ್ಚಿದ ವಿಡಿಯೊದಲ್ಲಿ ಕಂಡುಬಂದ ಐನಾಪುರದ ಆವೇಶ ಜಿರಗಾಳೆ, ಸುಹಾಸ ಲೋಂಡೆ, ಅನಿಲ ಸಾವಳಿ, ಸದಾಶಿವ ಕುರಂದವಾಡೆ ಎಂಬುವರನ್ನು ಬಂಧಿಸಲಾಗಿದೆ. ಹಲ್ಲೆಗೆ ಒಳಗಾದ ಚಾಲಕ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದರಿಂದ ಆರೋಪಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ’ ಎಂದರು.</p>.<p>‘ವಾಹನದಲ್ಲಿದ್ದ ಮಾಂಸ ಹಸುವಿನದ್ದಾಗಿದ್ದು, ಪರೀಕ್ಷೆಗಾಗಿ ಮಾದರಿ ಕಳುಹಿಸಲಾಗಿದೆ. ಆರೋಪಿಗಳು ಒಂದು ವಾರದಿಂದ ಮಾಂಸ ಖರೀದಿಸಿದ್ದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ/ಕಾಗವಾಡ:</strong> ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಸೋಮವಾರ ರಾತ್ರಿ 3 ಟನ್ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಸ್ಥಳೀಯರು ಬೆಂಕಿ ಹಚ್ಚಿದ ಘಟನೆ ಪಟ್ಟಣದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಯಿತು.</p>.<p>ಮಾಂಸ ಸಾಗಿಸುತ್ತಿದ್ದವರು ಮತ್ತು ವಾಹನಕ್ಕೆ ಬೆಂಕಿ ಹಚ್ಚಿದವರು ಸೇರಿ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್ಗೆ ಐಸ್ ಸ್ಲ್ಯಾಬ್ಗಳಿಂದ ಮುಚ್ಚಿದ ಮಾಂಸವನ್ನು ಲಾರಿಯಲ್ಲಿ ಸಾಗಿಸಲಾಗುತಿತ್ತು.</p>.<p>ಐನಾಪುರ ದಾಟುವಾಗ ಹಿಂದೂತ್ವ ಸಂಘಟನೆಯ ಕಾರ್ಯಕರ್ತರು ತಡೆದು, ಲಾರಿಗೆ ಬೆಂಕಿ ಹಚ್ಚಿದರು. ಪೊಲೀಸರು ಬರುವಷ್ಟರಲ್ಲಿ ವಾಹನ ಸುಟ್ಟು ಕರಕಲಾಗಿತ್ತು. ಜತೆಗೆ, ಹಲ್ಲೆ ಮಾಡಿದ್ದರಿಂದ ಚಾಲಕ ಮತ್ತು ಕ್ಲೀನರ್ಗೆ ಗಾಯಗಳಾಗಿವೆ.</p>.<p>‘ಮಾಂಸ ಸಾಗಿಸುತ್ತಿದ್ದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಷ್ಟಾದ ವಿಕಾಸ ವಾರೆ, ಸುಧೀರ ಗಸ್ತಿ, ಕುಡಚಿಯ ಸಾಹೇಬಲಾಲ್ ಮುತವಾಲೆ ಅವರನ್ನು ಬಂಧಿಸಿದ್ದೇವೆ. ಕಲಬುರಗಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದೇವೆ’ ಎಂದು ಜಿಲ್ಲಾ ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದರು.</p>.<p>‘ಲಾರಿಗೆ ಬೆಂಕಿ ಹಚ್ಚಿದ ವಿಡಿಯೊದಲ್ಲಿ ಕಂಡುಬಂದ ಐನಾಪುರದ ಆವೇಶ ಜಿರಗಾಳೆ, ಸುಹಾಸ ಲೋಂಡೆ, ಅನಿಲ ಸಾವಳಿ, ಸದಾಶಿವ ಕುರಂದವಾಡೆ ಎಂಬುವರನ್ನು ಬಂಧಿಸಲಾಗಿದೆ. ಹಲ್ಲೆಗೆ ಒಳಗಾದ ಚಾಲಕ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದರಿಂದ ಆರೋಪಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ’ ಎಂದರು.</p>.<p>‘ವಾಹನದಲ್ಲಿದ್ದ ಮಾಂಸ ಹಸುವಿನದ್ದಾಗಿದ್ದು, ಪರೀಕ್ಷೆಗಾಗಿ ಮಾದರಿ ಕಳುಹಿಸಲಾಗಿದೆ. ಆರೋಪಿಗಳು ಒಂದು ವಾರದಿಂದ ಮಾಂಸ ಖರೀದಿಸಿದ್ದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>