<p><strong>ರಾಮದುರ್ಗ:</strong> ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳು ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಹಮ್ಮಿಕೊಂಡಿದ್ದ ಧರಣಿ ಅಂತ್ಯಗೊಂಡಿತು.</p>.<p>ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ನೇತೃತ್ವದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯದ ಮುಂಭಾಗದಲ್ಲಿ ನಡೆದ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಧರಣಿ ನಿರತರಿಗೆ ಎಳೆ ನೀರು ನೀಡುವ ಮೂಲಕ ಹಿಂಪಡೆಯುವಂತೆ ಮಾಡಿದರು.</p>.<p>ತಾಲ್ಲೂಕಿನ ಮುದೇನೂರ ಹಾಗೂ ಓಬಳಾಪೂರ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಅವ್ಯವಹಾರ ನಡೆಸಿದ ಆಯಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಬೇಕು ಎಂದು ಶ್ರೀನಿವಾಸಗೌಡ ಪಟ್ಟು ಹಿಡಿದಿದ್ದರು. ತಾಲ್ಲೂಕಿನ 37 ಗ್ರಾಮ ಪಂಚಾಯಿತಿಯ ಲೆಕ್ಕಪರಿಶೋಧನಾ ವರದಿ ಪರಿಗಣಿಸಿ 6 ತಿಂಗಳೊಳಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನಾ ನಿರತರೊಂದಿಗೆ ತಾಲ್ಲೂಕು ಪಂಚಾಯ್ತಿ ಇಒ ಪ್ರವೀಣಕುಮಾರ ಸಾಲಿ ಚರ್ಚೆ ನಡೆಸಿದರು. ತಪ್ಪಿತಸ್ಥ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಆಸ್ತಿಯ ಮೇಲೆ ಬೋಜಾ ಹೇರಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿ ಅಂತ್ಯಗೊಂಡಿದೆ.</p>.<p>ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ರಾಮದುರ್ಗ, ಕಾಳಪ್ಪ ಕಮ್ಮಾರ, ನಿಂಗನಗೌಡ ಸಂಗನಗೌಡ್ರ, ಸುಬ್ರಾಯಪ್ಪ ಪೂಜೇರ, ಮಲ್ಲಪ್ಪ ಮದರಖಂಡಿ, ಶಿವಪ್ಪ ಯಂಡಿಗೇರಿ, ಶಂಕರಪ್ಪ ಅಂಗಡಿ, ಮಹಾದೇವ ತ್ಯಾಟಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ:</strong> ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳು ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಹಮ್ಮಿಕೊಂಡಿದ್ದ ಧರಣಿ ಅಂತ್ಯಗೊಂಡಿತು.</p>.<p>ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ನೇತೃತ್ವದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯದ ಮುಂಭಾಗದಲ್ಲಿ ನಡೆದ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಧರಣಿ ನಿರತರಿಗೆ ಎಳೆ ನೀರು ನೀಡುವ ಮೂಲಕ ಹಿಂಪಡೆಯುವಂತೆ ಮಾಡಿದರು.</p>.<p>ತಾಲ್ಲೂಕಿನ ಮುದೇನೂರ ಹಾಗೂ ಓಬಳಾಪೂರ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಅವ್ಯವಹಾರ ನಡೆಸಿದ ಆಯಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಬೇಕು ಎಂದು ಶ್ರೀನಿವಾಸಗೌಡ ಪಟ್ಟು ಹಿಡಿದಿದ್ದರು. ತಾಲ್ಲೂಕಿನ 37 ಗ್ರಾಮ ಪಂಚಾಯಿತಿಯ ಲೆಕ್ಕಪರಿಶೋಧನಾ ವರದಿ ಪರಿಗಣಿಸಿ 6 ತಿಂಗಳೊಳಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನಾ ನಿರತರೊಂದಿಗೆ ತಾಲ್ಲೂಕು ಪಂಚಾಯ್ತಿ ಇಒ ಪ್ರವೀಣಕುಮಾರ ಸಾಲಿ ಚರ್ಚೆ ನಡೆಸಿದರು. ತಪ್ಪಿತಸ್ಥ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಆಸ್ತಿಯ ಮೇಲೆ ಬೋಜಾ ಹೇರಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿ ಅಂತ್ಯಗೊಂಡಿದೆ.</p>.<p>ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ರಾಮದುರ್ಗ, ಕಾಳಪ್ಪ ಕಮ್ಮಾರ, ನಿಂಗನಗೌಡ ಸಂಗನಗೌಡ್ರ, ಸುಬ್ರಾಯಪ್ಪ ಪೂಜೇರ, ಮಲ್ಲಪ್ಪ ಮದರಖಂಡಿ, ಶಿವಪ್ಪ ಯಂಡಿಗೇರಿ, ಶಂಕರಪ್ಪ ಅಂಗಡಿ, ಮಹಾದೇವ ತ್ಯಾಟಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>