<p><strong>ಕಾಗವಾಡ(ಬೆಳಗಾವಿ ಜಿಲ್ಲೆ): </strong>ಪಟ್ಟಣದ ಕಾಗವಾಡ-ಗಣೇಶವಾಡಿ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9.390 ಕೆ.ಜಿ ಬೆಳ್ಳಿ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಪೋಲಿಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.</p>.<p>ಮಹಾರಾಷ್ಟ್ರದ ರೆಂದಾಳದಿಂದ ಅಥಣಿ ಕಡೆಗೆ ಹೊರಟಿದ್ದ ಕಾರನ್ನು ಈ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಿದಾಗ, ಬೆಳ್ಳಿಯ ಕಾಲ್ಗೆಜ್ಜೆ ಮತ್ತಿತರ ಆಭರಣ ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.</p>.<p class="Subhead"> ₹15 ಲಕ್ಷ ನಗದು ವಶ (ಹುಬ್ಬಳ್ಳಿ ವರದಿ): ಟಿಂಬರ್ ವ್ಯಾಪಾರಿಯೊಬ್ಬರು ತಮ್ಮ ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹15 ಲಕ್ಷ ನಗದನ್ನು ನಗರದ ಕಾರವಾರ ರಸ್ತೆಯ ಚೆಕ್ ಪೋಸ್ಟ್ನಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಭಾನುವಾರ ವಶಪಡಿಸಿಕೊಂಡಿದ್ದಾರೆ.</p>.<p>ಅಂಕೋಲಾ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕಾರನ್ನು ತಡೆದ ಸಿಬ್ಬಂದಿ, ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ. ‘ಮರದ ವ್ಯವಹಾರಕ್ಕೆ ಸಂಬಂಧಿಸಿದ ಹಣ ಎಂದು ವ್ಯಾಪಾರಿ ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅವರು ಬಂದು ವಿಚಾರಣೆ ನಡೆಸಲಿದ್ದಾರೆ’ ಎಂದು ತಹಶೀಲ್ದಾರ್ ಆರ್.ಕೆ. ಪಾಟೀಲ ತಿಳಿಸಿದ್ದಾರೆ.</p>.<p class="Subhead">ಇಸ್ತ್ರಿಪೆಟ್ಟಿಗೆ,₹16 ಲಕ್ಷ ನಗದು ವಶ (ಬಾಗಲಕೋಟೆ ವರದಿ): ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6,798 ಇಸ್ತ್ರಿ ಪೆಟ್ಟಿಗೆ ಹಾಗೂ ₹ 16 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. </p>.<p>ನಗರದ ಹೊರವಲಯ ಮಹಾರುದ್ರಪ್ಪನನ ಹಳ್ಳದ ಬಳಿ ಭಾನುವಾರ ಲಾರಿ ತಡೆದು ಪರಿಶೀಲಿಸಿದಾಗ ಇಸ್ತ್ರಿ ಪೆಟ್ಟಿಗೆಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ₹35 ಲಕ್ಷ ಮೌಲ್ಯ ಎಂದು ಅಂದಾಜಿಸಲಾಗಿದೆ. ಸೂಕ್ತ ದಾಖಲೆ ಹೊಂದಿರದ ಕಾರಣ ಅವುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. </p>.<p>ಹುನಗುಂದ ತಾಲ್ಲೂಕಿನ ಗುಡೂರು ಚೆಕ್ ಪೋಸ್ಟ್ನಲ್ಲಿ ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹16 ಲಕ್ಷ ವಶಪಡಿಸಿಕೊಳ್ಳ<br />ಲಾಗಿದೆ. ಯಲಬುರ್ಗಾದ ಸುನೀಲ್ ಉಪ್ಪಾರ, ಬಸನಗೌಡ, ಕಳಕಪ್ಪ, ಹುಸೇನಸಾಬ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.</p>.<p class="Subhead">₹8 ಲಕ್ಷ ನಗದು ವಶ:ಹೊಸಪೇಟೆ (ವಿಜಯನಗರ) ವರದಿ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ ₹8 ಲಕ್ಷ ನಗದು ಹಣವನ್ನು ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಹರಪನಹಳ್ಳಿ ತಾಲ್ಲೂಕಿನ ಹೊಸಪೇಟೆ– ಶಿವಮೊಗ್ಗ ರಾಜ್ಯ ಹೆದ್ದಾರಿ 25ರ ದುಗ್ಗಾವತಿ ಚೆಕ್ ಪೋಸ್ಟ್ನಲ್ಲಿ ಸಂತೋಷ್ ಎಂಬುವರು ಮುತ್ತೂಟ್ ಫೈನಾನ್ಸ್ ಹರಿಹರ ಶಾಖೆಯಿಂದ ಬೈಕ್ನಲ್ಲಿ ₹5 ಲಕ್ಷ ತೆಗೆದುಕೊಂಡು ಹೋಗುತ್ತಿದ್ದರು. ಹಾಗೆಯೇ ದಾವಣಗೆರೆ ಜಿಲ್ಲೆಯ ಕಕ್ಕರಗೊಳ್ಳದ ತಿಮ್ಮೇಶ್ ಅವರ ಕಾರಿನಿಂದ ದಾಖಲೆಗಳಿಲ್ಲದ ₹3 ಲಕ್ಷ ಹಣ ವಶಕ್ಕೆ ತೆಗೆದುಕೊಳ್ಳಲಾಗಿದೆ. </p>.<p class="Subhead">₹6.40 ಲಕ್ಷ ನಗದು ವಶ (ಗದಗ ವರದಿ): ಗಜೇಂದ್ರಗಡ ತಾಲ್ಲೂಕಿನ ಇಳಕಲ್ ನಾಕಾ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹6.40 ಲಕ್ಷ ಹಣ ಹಾಗೂ ಗದಗ ತಾಲ್ಲೂಕಿನ ಮುಳಗುಂದ ಚೆಕ್ಪೋಸ್ಟ್ನಲ್ಲಿ ರಸೀದಿ ಇಲ್ಲದೇ ಸಾಗಿಸುತ್ತಿದ್ದ ₹5 ಲಕ್ಷ ಮೌಲ್ಯದ ಬಟ್ಟೆಗಳು ಹಾಗೂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p class="Subhead">₹42.39 ಲಕ್ಷ ಮೌಲ್ಯದ ಸೀರೆ ಅಕ್ರಮ ದಾಸ್ತಾನು ಜಪ್ತಿ (ಮುದ್ದೇಬಿಹಾಳ ವರದಿ) : ಪಟ್ಟಣದ ಅಂಗಡಿಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ₹42.39 ಲಕ್ಷ ಮೌಲ್ಯದ ಸೀರೆಗಳನ್ನು ದಾಳಿ ನಡೆಸಿ ಪೊಲೀಸರು ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಎದುರಿಗಿನ ಪುರಸಭೆ ಮಳಿಗೆಯ ಕಾಂಪ್ಲೆಕ್ಸ್ (ನಂ19) ಈ ದಾಸ್ತಾನು ಇಡಲಾಗಿತ್ತು.</p>.<p class="Subhead">ದಾಖಲೆ ಇಲ್ಲದ ₹ 19.98 ಲಕ್ಷ ಜಪ್ತಿ (ಕಲಬುರಗಿ ವರದಿ): ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ₹ 19.98 ಲಕ್ಷ ಹಣವನ್ನು ಇಲ್ಲಿನ ಉಪನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>ಆಳಂದ ಚೆಕ್ ಪೋಸ್ಟ್ ಸಮೀಪ ವಾಹನಗಳನ್ನು ತಪಾಸಣೆ ಮಾಡುವ ವೇಳೆ ಕಾರೊಂದರಲ್ಲಿ ಸುಮಾರು ₹ 19.98 ನಗದು ಇರುವುದು ಪತ್ತೆಯಾಯಿತು. ಈ ಬಗ್ಗೆ ಚಾಲಕನನ್ನು ವಿಚಾರಿಸಿದಾಗ ಯಾವುದೇ ದಾಖಲಾತಿಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ₹33 ಲಕ್ಷ ಮೌಲ್ಯದ ಅಕ್ರ ಮದ್ಯ ವಶ</p>.<p>ಹುಕ್ಕೇರಿ ತಾಲ್ಲೂಕಿನ ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿರುವ ಬುಗುಟೆ ಆಲೂರ ಚೆಕ್ ಪೋಸ್ಟ್ ನಲ್ಲಿ ರಾಜಸ್ತಾನ ಹಾಗೂ ಗೋವಾ ರಾಜ್ಯದ ದಾಖಲಾತಿ ಹೊಂದಿರುವ ₹33 ಲಕ್ಷ ಮೌಲ್ಯದ 450 ಲೀಟರ್ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ</p>.<p class="Subhead">ನಂದವಾಡಗಿ- 1.96 ಲಕ್ಷ ನಗದು, 156 ಸೀರೆ ವಶ (ಇಳಕಲ್ ವರದಿ): ಸಮೀಪದ ನಂದವಾಡಗಿ ಚೆಕ್ ಪೋಸ್ಟ್ ನಲ್ಲಿ ₹1.96 ಲಕ್ಷ ನಗದು ಹಾಗೂ 156 ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಗವಾಡ(ಬೆಳಗಾವಿ ಜಿಲ್ಲೆ): </strong>ಪಟ್ಟಣದ ಕಾಗವಾಡ-ಗಣೇಶವಾಡಿ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9.390 ಕೆ.ಜಿ ಬೆಳ್ಳಿ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ಪೋಲಿಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.</p>.<p>ಮಹಾರಾಷ್ಟ್ರದ ರೆಂದಾಳದಿಂದ ಅಥಣಿ ಕಡೆಗೆ ಹೊರಟಿದ್ದ ಕಾರನ್ನು ಈ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಿದಾಗ, ಬೆಳ್ಳಿಯ ಕಾಲ್ಗೆಜ್ಜೆ ಮತ್ತಿತರ ಆಭರಣ ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.</p>.<p class="Subhead"> ₹15 ಲಕ್ಷ ನಗದು ವಶ (ಹುಬ್ಬಳ್ಳಿ ವರದಿ): ಟಿಂಬರ್ ವ್ಯಾಪಾರಿಯೊಬ್ಬರು ತಮ್ಮ ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹15 ಲಕ್ಷ ನಗದನ್ನು ನಗರದ ಕಾರವಾರ ರಸ್ತೆಯ ಚೆಕ್ ಪೋಸ್ಟ್ನಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಭಾನುವಾರ ವಶಪಡಿಸಿಕೊಂಡಿದ್ದಾರೆ.</p>.<p>ಅಂಕೋಲಾ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕಾರನ್ನು ತಡೆದ ಸಿಬ್ಬಂದಿ, ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ. ‘ಮರದ ವ್ಯವಹಾರಕ್ಕೆ ಸಂಬಂಧಿಸಿದ ಹಣ ಎಂದು ವ್ಯಾಪಾರಿ ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅವರು ಬಂದು ವಿಚಾರಣೆ ನಡೆಸಲಿದ್ದಾರೆ’ ಎಂದು ತಹಶೀಲ್ದಾರ್ ಆರ್.ಕೆ. ಪಾಟೀಲ ತಿಳಿಸಿದ್ದಾರೆ.</p>.<p class="Subhead">ಇಸ್ತ್ರಿಪೆಟ್ಟಿಗೆ,₹16 ಲಕ್ಷ ನಗದು ವಶ (ಬಾಗಲಕೋಟೆ ವರದಿ): ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6,798 ಇಸ್ತ್ರಿ ಪೆಟ್ಟಿಗೆ ಹಾಗೂ ₹ 16 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. </p>.<p>ನಗರದ ಹೊರವಲಯ ಮಹಾರುದ್ರಪ್ಪನನ ಹಳ್ಳದ ಬಳಿ ಭಾನುವಾರ ಲಾರಿ ತಡೆದು ಪರಿಶೀಲಿಸಿದಾಗ ಇಸ್ತ್ರಿ ಪೆಟ್ಟಿಗೆಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ₹35 ಲಕ್ಷ ಮೌಲ್ಯ ಎಂದು ಅಂದಾಜಿಸಲಾಗಿದೆ. ಸೂಕ್ತ ದಾಖಲೆ ಹೊಂದಿರದ ಕಾರಣ ಅವುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. </p>.<p>ಹುನಗುಂದ ತಾಲ್ಲೂಕಿನ ಗುಡೂರು ಚೆಕ್ ಪೋಸ್ಟ್ನಲ್ಲಿ ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹16 ಲಕ್ಷ ವಶಪಡಿಸಿಕೊಳ್ಳ<br />ಲಾಗಿದೆ. ಯಲಬುರ್ಗಾದ ಸುನೀಲ್ ಉಪ್ಪಾರ, ಬಸನಗೌಡ, ಕಳಕಪ್ಪ, ಹುಸೇನಸಾಬ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.</p>.<p class="Subhead">₹8 ಲಕ್ಷ ನಗದು ವಶ:ಹೊಸಪೇಟೆ (ವಿಜಯನಗರ) ವರದಿ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ ₹8 ಲಕ್ಷ ನಗದು ಹಣವನ್ನು ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಹರಪನಹಳ್ಳಿ ತಾಲ್ಲೂಕಿನ ಹೊಸಪೇಟೆ– ಶಿವಮೊಗ್ಗ ರಾಜ್ಯ ಹೆದ್ದಾರಿ 25ರ ದುಗ್ಗಾವತಿ ಚೆಕ್ ಪೋಸ್ಟ್ನಲ್ಲಿ ಸಂತೋಷ್ ಎಂಬುವರು ಮುತ್ತೂಟ್ ಫೈನಾನ್ಸ್ ಹರಿಹರ ಶಾಖೆಯಿಂದ ಬೈಕ್ನಲ್ಲಿ ₹5 ಲಕ್ಷ ತೆಗೆದುಕೊಂಡು ಹೋಗುತ್ತಿದ್ದರು. ಹಾಗೆಯೇ ದಾವಣಗೆರೆ ಜಿಲ್ಲೆಯ ಕಕ್ಕರಗೊಳ್ಳದ ತಿಮ್ಮೇಶ್ ಅವರ ಕಾರಿನಿಂದ ದಾಖಲೆಗಳಿಲ್ಲದ ₹3 ಲಕ್ಷ ಹಣ ವಶಕ್ಕೆ ತೆಗೆದುಕೊಳ್ಳಲಾಗಿದೆ. </p>.<p class="Subhead">₹6.40 ಲಕ್ಷ ನಗದು ವಶ (ಗದಗ ವರದಿ): ಗಜೇಂದ್ರಗಡ ತಾಲ್ಲೂಕಿನ ಇಳಕಲ್ ನಾಕಾ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹6.40 ಲಕ್ಷ ಹಣ ಹಾಗೂ ಗದಗ ತಾಲ್ಲೂಕಿನ ಮುಳಗುಂದ ಚೆಕ್ಪೋಸ್ಟ್ನಲ್ಲಿ ರಸೀದಿ ಇಲ್ಲದೇ ಸಾಗಿಸುತ್ತಿದ್ದ ₹5 ಲಕ್ಷ ಮೌಲ್ಯದ ಬಟ್ಟೆಗಳು ಹಾಗೂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p class="Subhead">₹42.39 ಲಕ್ಷ ಮೌಲ್ಯದ ಸೀರೆ ಅಕ್ರಮ ದಾಸ್ತಾನು ಜಪ್ತಿ (ಮುದ್ದೇಬಿಹಾಳ ವರದಿ) : ಪಟ್ಟಣದ ಅಂಗಡಿಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ₹42.39 ಲಕ್ಷ ಮೌಲ್ಯದ ಸೀರೆಗಳನ್ನು ದಾಳಿ ನಡೆಸಿ ಪೊಲೀಸರು ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಎದುರಿಗಿನ ಪುರಸಭೆ ಮಳಿಗೆಯ ಕಾಂಪ್ಲೆಕ್ಸ್ (ನಂ19) ಈ ದಾಸ್ತಾನು ಇಡಲಾಗಿತ್ತು.</p>.<p class="Subhead">ದಾಖಲೆ ಇಲ್ಲದ ₹ 19.98 ಲಕ್ಷ ಜಪ್ತಿ (ಕಲಬುರಗಿ ವರದಿ): ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ₹ 19.98 ಲಕ್ಷ ಹಣವನ್ನು ಇಲ್ಲಿನ ಉಪನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>ಆಳಂದ ಚೆಕ್ ಪೋಸ್ಟ್ ಸಮೀಪ ವಾಹನಗಳನ್ನು ತಪಾಸಣೆ ಮಾಡುವ ವೇಳೆ ಕಾರೊಂದರಲ್ಲಿ ಸುಮಾರು ₹ 19.98 ನಗದು ಇರುವುದು ಪತ್ತೆಯಾಯಿತು. ಈ ಬಗ್ಗೆ ಚಾಲಕನನ್ನು ವಿಚಾರಿಸಿದಾಗ ಯಾವುದೇ ದಾಖಲಾತಿಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ₹33 ಲಕ್ಷ ಮೌಲ್ಯದ ಅಕ್ರ ಮದ್ಯ ವಶ</p>.<p>ಹುಕ್ಕೇರಿ ತಾಲ್ಲೂಕಿನ ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿರುವ ಬುಗುಟೆ ಆಲೂರ ಚೆಕ್ ಪೋಸ್ಟ್ ನಲ್ಲಿ ರಾಜಸ್ತಾನ ಹಾಗೂ ಗೋವಾ ರಾಜ್ಯದ ದಾಖಲಾತಿ ಹೊಂದಿರುವ ₹33 ಲಕ್ಷ ಮೌಲ್ಯದ 450 ಲೀಟರ್ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ</p>.<p class="Subhead">ನಂದವಾಡಗಿ- 1.96 ಲಕ್ಷ ನಗದು, 156 ಸೀರೆ ವಶ (ಇಳಕಲ್ ವರದಿ): ಸಮೀಪದ ನಂದವಾಡಗಿ ಚೆಕ್ ಪೋಸ್ಟ್ ನಲ್ಲಿ ₹1.96 ಲಕ್ಷ ನಗದು ಹಾಗೂ 156 ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>