<p><strong>ಬೆಳಗಾವಿ:</strong> ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ರಾಮನ ಭಕ್ತರ ಕೈಮೇಲೆ ಟ್ಯಾಟೂ ಹಾಕಿಸುವ ಅಭಿಯಾನಕ್ಕೆ ಸೋಮವಾರ ಚಾಲನೆ ಸಿಕ್ಕಿತು.</p><p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಭಯ ಪಾಟೀಲ, ‘ಟ್ಯಾಟೂ ಹಾಕಿಸುವ ಅಭಿಯಾನ ಕೈಗೊಳ್ಳುತ್ತಿರುವುದು ಇದೇ ಮೊದಲು. ಆಸಕ್ತರು ತಮ್ಮ ಕೈಮೇಲೆ ರಾಮನ ಚಿತ್ರ ಮತ್ತು ತಮಗಿಷ್ಟವಾದ ಭಾಷೆಗಳಲ್ಲಿ ರಾಮನಿಗೆ ಸಂಬಂಧಿಸಿದ ಘೋಷಣೆ ಬರೆಯಿಸಿಕೊಳ್ಳುತ್ತಿದ್ದಾರೆ. 3 ಸಾವಿರಕ್ಕೂ ಅಧಿಕ ಜನರು ನೋಂದಾಯಿಸಿಕೊಂಡಿದ್ದಾರೆ’ ಎಂದರು.</p>.<p>‘ಜ.21ರವರೆಗೆ 10 ಸಾವಿರ ಜನರಿಗೆ ಟ್ಯಾಟೂ ಹಾಕಿಸುವ ಗುರಿ ಹೊಂದಿದ್ದೇವೆ. ಶಿವಾಜಿ ಉದ್ಯಾನ, ಆರ್ಪಿಡಿ-ಗೋಗಟೆ ಕಾಲೇಜುಗಳ ಬಳಿ ಮತ್ತು ಅನಗೋಳದ ಹರಿ ಮಂದಿರದಲ್ಲಿ ಬುಧವಾರದಿಂದ ಕಲಾವಿದರು ಲಭ್ಯವಿರಲಿದ್ದು, ಮಹಿಳೆಯರ ಕೈಮೇಲೆ ಟ್ಯಾಟೂ ಹಾಕಲು ಪ್ರತ್ಯೇಕವಾಗಿ ಮಹಿಳಾ ಕಲಾವಿದರು ಇರಲಿದ್ದಾರೆ’ ಎಂದರು.</p>.ರಾಮ ಮಂದಿರ: ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮ ಲಲ್ಲಾ ಮೂರ್ತಿಯೇ ಅಂತಿಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ರಾಮನ ಭಕ್ತರ ಕೈಮೇಲೆ ಟ್ಯಾಟೂ ಹಾಕಿಸುವ ಅಭಿಯಾನಕ್ಕೆ ಸೋಮವಾರ ಚಾಲನೆ ಸಿಕ್ಕಿತು.</p><p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಭಯ ಪಾಟೀಲ, ‘ಟ್ಯಾಟೂ ಹಾಕಿಸುವ ಅಭಿಯಾನ ಕೈಗೊಳ್ಳುತ್ತಿರುವುದು ಇದೇ ಮೊದಲು. ಆಸಕ್ತರು ತಮ್ಮ ಕೈಮೇಲೆ ರಾಮನ ಚಿತ್ರ ಮತ್ತು ತಮಗಿಷ್ಟವಾದ ಭಾಷೆಗಳಲ್ಲಿ ರಾಮನಿಗೆ ಸಂಬಂಧಿಸಿದ ಘೋಷಣೆ ಬರೆಯಿಸಿಕೊಳ್ಳುತ್ತಿದ್ದಾರೆ. 3 ಸಾವಿರಕ್ಕೂ ಅಧಿಕ ಜನರು ನೋಂದಾಯಿಸಿಕೊಂಡಿದ್ದಾರೆ’ ಎಂದರು.</p>.<p>‘ಜ.21ರವರೆಗೆ 10 ಸಾವಿರ ಜನರಿಗೆ ಟ್ಯಾಟೂ ಹಾಕಿಸುವ ಗುರಿ ಹೊಂದಿದ್ದೇವೆ. ಶಿವಾಜಿ ಉದ್ಯಾನ, ಆರ್ಪಿಡಿ-ಗೋಗಟೆ ಕಾಲೇಜುಗಳ ಬಳಿ ಮತ್ತು ಅನಗೋಳದ ಹರಿ ಮಂದಿರದಲ್ಲಿ ಬುಧವಾರದಿಂದ ಕಲಾವಿದರು ಲಭ್ಯವಿರಲಿದ್ದು, ಮಹಿಳೆಯರ ಕೈಮೇಲೆ ಟ್ಯಾಟೂ ಹಾಕಲು ಪ್ರತ್ಯೇಕವಾಗಿ ಮಹಿಳಾ ಕಲಾವಿದರು ಇರಲಿದ್ದಾರೆ’ ಎಂದರು.</p>.ರಾಮ ಮಂದಿರ: ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮ ಲಲ್ಲಾ ಮೂರ್ತಿಯೇ ಅಂತಿಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>