ಬೆಳಗಾವಿ: ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ರಾಮನ ಭಕ್ತರ ಕೈಮೇಲೆ ಟ್ಯಾಟೂ ಹಾಕಿಸುವ ಅಭಿಯಾನಕ್ಕೆ ಸೋಮವಾರ ಚಾಲನೆ ಸಿಕ್ಕಿತು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಭಯ ಪಾಟೀಲ, ‘ಟ್ಯಾಟೂ ಹಾಕಿಸುವ ಅಭಿಯಾನ ಕೈಗೊಳ್ಳುತ್ತಿರುವುದು ಇದೇ ಮೊದಲು. ಆಸಕ್ತರು ತಮ್ಮ ಕೈಮೇಲೆ ರಾಮನ ಚಿತ್ರ ಮತ್ತು ತಮಗಿಷ್ಟವಾದ ಭಾಷೆಗಳಲ್ಲಿ ರಾಮನಿಗೆ ಸಂಬಂಧಿಸಿದ ಘೋಷಣೆ ಬರೆಯಿಸಿಕೊಳ್ಳುತ್ತಿದ್ದಾರೆ. 3 ಸಾವಿರಕ್ಕೂ ಅಧಿಕ ಜನರು ನೋಂದಾಯಿಸಿಕೊಂಡಿದ್ದಾರೆ’ ಎಂದರು.