<p><strong>ಬೆಳಗಾವಿ:</strong> ‘ಹಿಂದುಳಿದ ವರ್ಗಗಳಲ್ಲಿನ ಅಲೆಮಾರಿ ಸಮುದಾಯದ ಜನರಿಗೆ ಸರ್ಕಾರಿ ಕಾರ್ಯಕ್ರಮಗಳ ಲಾಭ ತಲುಪಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳೂ ಕರ್ತವ್ಯ ನಿರ್ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು.</p>.<p>ಬುಧವಾರ ನಡೆದ ಅಲೆಮಾರಿ, ಅರೆ ಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಬಹುತೇಕ ಇಲಾಖೆಗಳಲ್ಲಿ ಪ್ರತ್ಯೇಕ ಕೋಟಾ ನಿಗದಿಯಾಗಿಲ್ಲವಾದರೂ ಅಲೆಮಾರಿ ಸಮುದಾಯದ ಅರ್ಜಿದಾರರನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ ಪರಿಗಣಿಸಿ ಹೆಚ್ಚಿನ ಪ್ರಗತಿ ಸಾಧಿಸಬೇಕು’ ಎಂದರು.</p>.<p>ಹಾಜರಿದ್ದ ಅಧಿಕಾರೇತರ ಸದಸ್ಯರು ಹಾಗೂ ಸಮುದಾಯದ ಪ್ರಮುಖರ ಸಮಸ್ಯೆಗಳನ್ನು ಆಲಿಸಿ ನಿವೇಶನ ಒದಗಿಸುವ ಕಾರ್ಯವನ್ನು ಕಾನೂನಿನ ಪ್ರಕಾರ ಮಾಡಲಾಗುವುದು ಎಂದು ತಿಳಿಸಿದರು.</p>.<p>‘ಈಗಾಗಲೇ ಪ್ರಸಕ್ತ ಸಾಲಿನಲ್ಲಿ ನಿವೇಶನ ದಾಖಲೆ ಸಲ್ಲಿಸಿದ 105 ಅರ್ಹ ಅಲೆಮಾರಿ ಕುಟುಂಬಗಳಿಗೆ ಮನೆ ಒದಗಿಸಲು ರಾಜೀವ್ಗಾಂಧಿ ಹೌಸಿಂಗ್ ಕಾರ್ಪೊರೇಷನ್ಗೆ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವ ಸಲ್ಲಿಸಲಾಗಿದೆ. ಇನ್ನೂ ಅರ್ಹರ ಅರ್ಜಿಗಳು ಬಂದಲ್ಲಿ ಅದನ್ನೂ ಪರಿಗಣಿಸಲಾಗುತ್ತದೆ’ ಎಂದರು.</p>.<p>ಅಲೆಮಾರಿ ಕಾಲೊನಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಮನಗೌಡ ಕನ್ನೊಳ್ಳಿ, ದೇವರಾಜ ಅರಸು ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಎಸ್.ಎನ್. ಬಾನ್ಸಿ, ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನೀಕೇರಿ, ಸಮಿತಿಯ ನಾಮನಿರ್ದೇಶನ ಸದಸ್ಯರಾದ ಉದ್ದಪ್ಪ ಹೆಳವರ, ರಾಜಶೇಖರ ವಾಕೂಡೆ, ಅಮೃತ ದಪ್ಪಿನವರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಹಿಂದುಳಿದ ವರ್ಗಗಳಲ್ಲಿನ ಅಲೆಮಾರಿ ಸಮುದಾಯದ ಜನರಿಗೆ ಸರ್ಕಾರಿ ಕಾರ್ಯಕ್ರಮಗಳ ಲಾಭ ತಲುಪಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳೂ ಕರ್ತವ್ಯ ನಿರ್ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು.</p>.<p>ಬುಧವಾರ ನಡೆದ ಅಲೆಮಾರಿ, ಅರೆ ಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಬಹುತೇಕ ಇಲಾಖೆಗಳಲ್ಲಿ ಪ್ರತ್ಯೇಕ ಕೋಟಾ ನಿಗದಿಯಾಗಿಲ್ಲವಾದರೂ ಅಲೆಮಾರಿ ಸಮುದಾಯದ ಅರ್ಜಿದಾರರನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ ಪರಿಗಣಿಸಿ ಹೆಚ್ಚಿನ ಪ್ರಗತಿ ಸಾಧಿಸಬೇಕು’ ಎಂದರು.</p>.<p>ಹಾಜರಿದ್ದ ಅಧಿಕಾರೇತರ ಸದಸ್ಯರು ಹಾಗೂ ಸಮುದಾಯದ ಪ್ರಮುಖರ ಸಮಸ್ಯೆಗಳನ್ನು ಆಲಿಸಿ ನಿವೇಶನ ಒದಗಿಸುವ ಕಾರ್ಯವನ್ನು ಕಾನೂನಿನ ಪ್ರಕಾರ ಮಾಡಲಾಗುವುದು ಎಂದು ತಿಳಿಸಿದರು.</p>.<p>‘ಈಗಾಗಲೇ ಪ್ರಸಕ್ತ ಸಾಲಿನಲ್ಲಿ ನಿವೇಶನ ದಾಖಲೆ ಸಲ್ಲಿಸಿದ 105 ಅರ್ಹ ಅಲೆಮಾರಿ ಕುಟುಂಬಗಳಿಗೆ ಮನೆ ಒದಗಿಸಲು ರಾಜೀವ್ಗಾಂಧಿ ಹೌಸಿಂಗ್ ಕಾರ್ಪೊರೇಷನ್ಗೆ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವ ಸಲ್ಲಿಸಲಾಗಿದೆ. ಇನ್ನೂ ಅರ್ಹರ ಅರ್ಜಿಗಳು ಬಂದಲ್ಲಿ ಅದನ್ನೂ ಪರಿಗಣಿಸಲಾಗುತ್ತದೆ’ ಎಂದರು.</p>.<p>ಅಲೆಮಾರಿ ಕಾಲೊನಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಮನಗೌಡ ಕನ್ನೊಳ್ಳಿ, ದೇವರಾಜ ಅರಸು ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಎಸ್.ಎನ್. ಬಾನ್ಸಿ, ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನೀಕೇರಿ, ಸಮಿತಿಯ ನಾಮನಿರ್ದೇಶನ ಸದಸ್ಯರಾದ ಉದ್ದಪ್ಪ ಹೆಳವರ, ರಾಜಶೇಖರ ವಾಕೂಡೆ, ಅಮೃತ ದಪ್ಪಿನವರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>