ಇತಿಹಾಸ ತಜ್ಞರು, ಕನ್ನಡಪರ ಸಂಘಟನೆಗಳ ಮುಖಂಡರು ಒಂದೂವರೆ ದಶಕದಿಂದ ಇದಕ್ಕಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಪ್ರತಿ ಬಾರಿಯ ಕಿತ್ತೂರು ಉತ್ಸವದಲ್ಲೂ ಬೊಗಸೆ ತುಂಬ ಭರವಸೆ ಮಾತ್ರ ಸಿಗುತ್ತಿದೆ. ಇದೀಗ ರಾಜ್ಯ ಸರ್ಕಾರ ವಿಜಯಪುರ ವಿಮಾನ ನಿಲ್ದಾಣದ ಹೆಸರು ಬದಲಿಸಿದ್ದಕ್ಕೆ ಹೋರಾಟಗಾರರು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ಬೆಳಗಾವಿ ವಿಮಾನ ನಿಲ್ದಾಣದ ಮಾತೇ ಎತ್ತದ ಕಾರಣಕ್ಕೆ ತೀವ್ರ ಬೇಸರ ಹೊರಹಾಕುವಂತಾಗಿದೆ.