<p>ಬೆಳಗಾವಿ: ಪ್ರಕರಣವೊಂದಕ್ಕೆ ವಿಚಾರಣೆಗೆ ಕರೆತಂದಿದ್ದ ಆರೋಪಿಗಳು ನ್ಯಾಯಾಲಯದ ಆವರಣದಲ್ಲೇ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿ, ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿದ ಘಟನೆ ಗುರುವಾರ ನಡೆಯಿತು. ಈ ಬಗ್ಗೆ ನಾಲ್ವರ ವಿರುದ್ಧ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮುತ್ಯಾನಟ್ಟಿ ಗ್ರಾಮದ ನಿವಾಸಿಗಳಾದ ಬಸವರಾಜ ಹೊಳೆಪ್ಪ ದಡ್ಡಿ, ಬಸವಣ್ಣಿ (ಬಸು) ಸಿದ್ದಪ್ಪ ನಾಯ್ಕ, ನವೀನ ಸಿದ್ದಪ್ಪ ದಡ್ಡಿ ಹಾಗೂ ಲಕ್ಷ್ಮಣ ಫಕಿರಪ್ಪ ಹಲ್ಲೆ ನಡೆಯಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳು.</p>.<p>ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ಮುಗಿಸಿ ಮರಳುವಾಗ ಮಾಧ್ಯಮದವರು ವಿಡಿಯೊ ಮಾಡಲು ಮುಂದಾದರು. ಆ ವೇಳೆ ಆರೋಪಿಗಳು ಕ್ಯಾಮೆರಾ ಒಡೆಯಲು ಯತ್ನಿಸಿದರು. ಮಾಧ್ಯಮದವರಿಗೆ ಬೆದರಿಕೆ ಹಾಕಿ, ಅವಾಚ್ಯ ಪದಗಳಿಂದ ನಿಂದಿಸಿದರು. ಪೊಲೀಸರ ಕರ್ತವ್ಯಕ್ಕೂ ಧಕ್ಕೆ ತಂದರು.</p>.<p>ಈ ಬಗ್ಗೆ ಪೊಲೀಸ್ ಅಧಿಕಾರಿ ಅಡಿವೆಪ್ಪ ನಾವಿ ಅವರು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 126(2), 132, 352, 351(3) ಹಾಗೂ 3(5) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-21-1165477696</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಪ್ರಕರಣವೊಂದಕ್ಕೆ ವಿಚಾರಣೆಗೆ ಕರೆತಂದಿದ್ದ ಆರೋಪಿಗಳು ನ್ಯಾಯಾಲಯದ ಆವರಣದಲ್ಲೇ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿ, ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿದ ಘಟನೆ ಗುರುವಾರ ನಡೆಯಿತು. ಈ ಬಗ್ಗೆ ನಾಲ್ವರ ವಿರುದ್ಧ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮುತ್ಯಾನಟ್ಟಿ ಗ್ರಾಮದ ನಿವಾಸಿಗಳಾದ ಬಸವರಾಜ ಹೊಳೆಪ್ಪ ದಡ್ಡಿ, ಬಸವಣ್ಣಿ (ಬಸು) ಸಿದ್ದಪ್ಪ ನಾಯ್ಕ, ನವೀನ ಸಿದ್ದಪ್ಪ ದಡ್ಡಿ ಹಾಗೂ ಲಕ್ಷ್ಮಣ ಫಕಿರಪ್ಪ ಹಲ್ಲೆ ನಡೆಯಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳು.</p>.<p>ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ಮುಗಿಸಿ ಮರಳುವಾಗ ಮಾಧ್ಯಮದವರು ವಿಡಿಯೊ ಮಾಡಲು ಮುಂದಾದರು. ಆ ವೇಳೆ ಆರೋಪಿಗಳು ಕ್ಯಾಮೆರಾ ಒಡೆಯಲು ಯತ್ನಿಸಿದರು. ಮಾಧ್ಯಮದವರಿಗೆ ಬೆದರಿಕೆ ಹಾಕಿ, ಅವಾಚ್ಯ ಪದಗಳಿಂದ ನಿಂದಿಸಿದರು. ಪೊಲೀಸರ ಕರ್ತವ್ಯಕ್ಕೂ ಧಕ್ಕೆ ತಂದರು.</p>.<p>ಈ ಬಗ್ಗೆ ಪೊಲೀಸ್ ಅಧಿಕಾರಿ ಅಡಿವೆಪ್ಪ ನಾವಿ ಅವರು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 126(2), 132, 352, 351(3) ಹಾಗೂ 3(5) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-21-1165477696</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>