"ಬೆಳಗಾವಿಯಲ್ಲೆ ಬಂದ್ ಅಥವಾ ಪ್ರತಿಭಟನೆ ಮಾಡುವ ಬಗ್ಗೆ ಯಾರೂ ಅನುಮತಿ ಪಡೆದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹರಿದಾಡುತ್ತಿದೆ. ಅಗತ್ಯ ಎಲ್ಲ ಸಿದ್ಧತೆ ಮಾಡಿಕೊಂದ್ದೇವೆ. ಕೆಎಸ್ ಆರ್ ಪಿ ಹಾಗೂ ಕ್ಷಿಪ್ರಕಾರ್ಯ ಪಡೆಯ ಪಹರೆ ನಡೆದಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರಮುಖ ವೃತ್ತಗಳಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ಸ್ಥಿತಿಗತಿ ಮೇಲೆ ಕಣ್ಣಿಡಲಾಗಿದೆ. ಯಾರಾದರೂ ಕಾನೂನು ಉಲ್ಲಂಘಿಸಿದ್ದು ಕಂಡುಬಂದರೆ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರೆ ಸ್ಥಳದಲ್ಲೇ ಬಂಧಿಸಲಾಗುವುದು" ಎಂದು ನಗರ ಪೊಲೀಸ್ ಕಮಿಷನ್ರ್ ಡಾ.ಬೋರಲಿಂಗಯ್ಯ ತಿಳಿಸಿದರು.