<p><strong>ಬೆಂಗಳೂರು</strong>: ಬೆಳಗಾವಿ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ʼವಂದೇ ಭಾರತ್ʼ ರೈಲು ಸಂಚರಿಸುವ ಸಮಯ ಹತ್ತಿರ ಬಂದಿದೆ.</p><p>ಇದೇ ಆಗಸ್ಟ್ 10 ರಂದು ಭಾನುವಾರ ‘ಬೆಳಗಾವಿ–ಬೆಂಗಳೂರು ವಂದೇ ಭಾರತ್’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಚಾಲನೆ ನೀಡಲಿದ್ದಾರೆ ಎಂದು ಸಂಸದ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿ ತಿಳಿಸಿದ್ದಾರೆ.</p><p>ಆಗಸ್ಟ್ 10 ರಂದು ಮಧ್ಯಾಹ್ನ 1 ಗಂಟೆಯ ಸುಮಾರು ಹೊಸ ವಂದೇ ಭಾರತ ರೈಲು ಬೆಂಗಳೂರಿನಿಂದ–ಬೆಳಗಾವಿಗೆ ಉದ್ಘಾಟನಾರ್ಥ ಸಂಚಾರ ಆರಂಭಿಸಲಿದ್ದು ಆಗಸ್ಟ್ 11ರಿಂದ ಬುಕಿಂಗ್ ತೆರೆಯಬಹುದು ಎನ್ನಲಾಗಿದೆ.</p>.<p><strong>ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ಹೀಗಿದೆ..</strong></p><p>ನೂತನ ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ವಾರದಲ್ಲಿ ಆರು ದಿನ ಬೆಳಗಾವಿಯಿಂದ (BGM) ಬೆಳಿಗ್ಗೆ 5.20ಕ್ಕೆ ಹೊರಟು ಅದೇ ದಿನ ಬೆಂಗಳೂರಿಗೆ (SBC KSR) ಮಧ್ಯಾಹ್ನ 1.50ಕ್ಕೆ ತಲುಪಲಿದೆ.</p><p>ವಾರದಲ್ಲಿ ಆರು ದಿನ ಬೆಂಗಳೂರಿನಿಂದ (SBC KSR) ವಾಪಸ್ ಅದೇ ದಿನ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ (BGM) ತಲುಪಲಿದೆ.</p> <p><strong>ನಿಲುಗಡೆಗೆ ಅವಕಾವಿರುವ ನಿಲ್ದಾಣಗಳು</strong></p><p>ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ತುಮಕೂರು ನಿಲ್ದಾಣಗಳಿಗೆ ನಿಲುಗಡೆ ನೀಡಲಿದೆ.</p><p><strong>ಮೂರು ಒಂದೇ ಭಾರತ್ ರೈಲಿಗೆ ಹಸಿರು ನಿಶಾನೆ</strong></p><p>ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಾತ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.</p>.ವಿಡಿಯೊ: ಸೋರುತಿಹುದು ವಂದೇ ಭಾರತ್ ರೈಲು ಮಾಳಿಗೆ! ದೂರಿಗೆ ರೈಲ್ವೆ ಪ್ರತಿಕ್ರಿಯೆ.Video: ವಂದೇ ಭಾರತ್ ರೈಲಿನಲ್ಲಿ BJP ಶಾಸಕನ ಬೆಂಬಲಿಗರಿಂದ ಪ್ರಯಾಣಿಕನ ಮೇಲೆ ಹಲ್ಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಳಗಾವಿ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ʼವಂದೇ ಭಾರತ್ʼ ರೈಲು ಸಂಚರಿಸುವ ಸಮಯ ಹತ್ತಿರ ಬಂದಿದೆ.</p><p>ಇದೇ ಆಗಸ್ಟ್ 10 ರಂದು ಭಾನುವಾರ ‘ಬೆಳಗಾವಿ–ಬೆಂಗಳೂರು ವಂದೇ ಭಾರತ್’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಚಾಲನೆ ನೀಡಲಿದ್ದಾರೆ ಎಂದು ಸಂಸದ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿ ತಿಳಿಸಿದ್ದಾರೆ.</p><p>ಆಗಸ್ಟ್ 10 ರಂದು ಮಧ್ಯಾಹ್ನ 1 ಗಂಟೆಯ ಸುಮಾರು ಹೊಸ ವಂದೇ ಭಾರತ ರೈಲು ಬೆಂಗಳೂರಿನಿಂದ–ಬೆಳಗಾವಿಗೆ ಉದ್ಘಾಟನಾರ್ಥ ಸಂಚಾರ ಆರಂಭಿಸಲಿದ್ದು ಆಗಸ್ಟ್ 11ರಿಂದ ಬುಕಿಂಗ್ ತೆರೆಯಬಹುದು ಎನ್ನಲಾಗಿದೆ.</p>.<p><strong>ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ಹೀಗಿದೆ..</strong></p><p>ನೂತನ ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ವಾರದಲ್ಲಿ ಆರು ದಿನ ಬೆಳಗಾವಿಯಿಂದ (BGM) ಬೆಳಿಗ್ಗೆ 5.20ಕ್ಕೆ ಹೊರಟು ಅದೇ ದಿನ ಬೆಂಗಳೂರಿಗೆ (SBC KSR) ಮಧ್ಯಾಹ್ನ 1.50ಕ್ಕೆ ತಲುಪಲಿದೆ.</p><p>ವಾರದಲ್ಲಿ ಆರು ದಿನ ಬೆಂಗಳೂರಿನಿಂದ (SBC KSR) ವಾಪಸ್ ಅದೇ ದಿನ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ (BGM) ತಲುಪಲಿದೆ.</p> <p><strong>ನಿಲುಗಡೆಗೆ ಅವಕಾವಿರುವ ನಿಲ್ದಾಣಗಳು</strong></p><p>ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ತುಮಕೂರು ನಿಲ್ದಾಣಗಳಿಗೆ ನಿಲುಗಡೆ ನೀಡಲಿದೆ.</p><p><strong>ಮೂರು ಒಂದೇ ಭಾರತ್ ರೈಲಿಗೆ ಹಸಿರು ನಿಶಾನೆ</strong></p><p>ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಾತ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.</p>.ವಿಡಿಯೊ: ಸೋರುತಿಹುದು ವಂದೇ ಭಾರತ್ ರೈಲು ಮಾಳಿಗೆ! ದೂರಿಗೆ ರೈಲ್ವೆ ಪ್ರತಿಕ್ರಿಯೆ.Video: ವಂದೇ ಭಾರತ್ ರೈಲಿನಲ್ಲಿ BJP ಶಾಸಕನ ಬೆಂಬಲಿಗರಿಂದ ಪ್ರಯಾಣಿಕನ ಮೇಲೆ ಹಲ್ಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>