<p><strong>ಬೆಳಗಾವಿ</strong>: ‘ಕಾರ್ಯಕರ್ತರ ಜನಪರ ಹೋರಾಟದಿಂದ ಬಿಜೆಪಿ ಬೆಳೆದಿದೆ. ಸಂಘಟನೆ ಮೂಲಕ ಪಕ್ಷದ ಚಟುವಟಿಕೆಗಳನ್ನು ಬೂತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ತಲುಪಿಸಲು ಎಲ್ಲರೂ ಶ್ರಮಿಸಬೇಕು’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಕರೆ ನೀಡಿದರು.</p>.<p>ಇಲ್ಲಿನ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಮತಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಶಿಸ್ತುಬದ್ಧವಾಗಿ ಆಯೋಜಿಸಬೇಕು’ ಎಂದು ಸೂಚಿಸಿದರು.</p>.<p>ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ‘ರಾಜ್ಯದಲ್ಲಿರುವುದು ಹಗರಣಗಳ ಸರ್ಕಾರ. ವಿವಿಧ ಹಗರಣಗಳು, ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣದ ದುರ್ಬಳಕೆ, ಭ್ರಷ್ಟಾಚಾರ, ಅನಿಯಂತ್ರಿತ ಮಾದಕವಸ್ತು ಹಾವಳಿ, ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ... ಇವೇ ಕಾಂಗ್ರೆಸ್ ಸರ್ಕಾರದ ಸಾಧನೆಗಳು’ ಎಂದು ಟೀಕಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ, ಪ್ರಮೋದ ಕೊಚೇರಿ, ಮಹೇಶ ಮೋಹಿತೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕಾರ್ಯಕರ್ತರ ಜನಪರ ಹೋರಾಟದಿಂದ ಬಿಜೆಪಿ ಬೆಳೆದಿದೆ. ಸಂಘಟನೆ ಮೂಲಕ ಪಕ್ಷದ ಚಟುವಟಿಕೆಗಳನ್ನು ಬೂತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ತಲುಪಿಸಲು ಎಲ್ಲರೂ ಶ್ರಮಿಸಬೇಕು’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಕರೆ ನೀಡಿದರು.</p>.<p>ಇಲ್ಲಿನ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಮತಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಶಿಸ್ತುಬದ್ಧವಾಗಿ ಆಯೋಜಿಸಬೇಕು’ ಎಂದು ಸೂಚಿಸಿದರು.</p>.<p>ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ‘ರಾಜ್ಯದಲ್ಲಿರುವುದು ಹಗರಣಗಳ ಸರ್ಕಾರ. ವಿವಿಧ ಹಗರಣಗಳು, ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣದ ದುರ್ಬಳಕೆ, ಭ್ರಷ್ಟಾಚಾರ, ಅನಿಯಂತ್ರಿತ ಮಾದಕವಸ್ತು ಹಾವಳಿ, ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ... ಇವೇ ಕಾಂಗ್ರೆಸ್ ಸರ್ಕಾರದ ಸಾಧನೆಗಳು’ ಎಂದು ಟೀಕಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ, ಪ್ರಮೋದ ಕೊಚೇರಿ, ಮಹೇಶ ಮೋಹಿತೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>