<p>ಬೆಳಗಾವಿ: ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಲಿಕೆ ಪರಿಷತ್ ಸಭೆಯಲ್ಲಿ ಅಂಗೀಕರಿಸಬೇಕು’ ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಯ ಹೋರಾಟಗಾರರು ಇಲ್ಲಿನ ಪಾಲಿಕೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ ಅವರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.</p>.<p>ಪಾಲಿಕೆ ಸಭಾಂಗಣದಲ್ಲಿ ಪರಿಷತ್ತು ಸಭೆಯ ಆರಂಭದಲ್ಲೇ ನಾಮನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ಅವರು, ‘ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ, ಸುಪ್ರೀಂಕೋರ್ಟ್ ಏನೇ ತೀರ್ಪು ಕೊಟ್ಟರೂ ನಾವು ಪಾಲಿಸುತ್ತೇವೆ. ಆದರೆ, ಈಗ ರಾಜ್ಯದ ನಿರ್ಣಯ ಅಂಗೀಕರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಇದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಸದಸ್ಯರಾದ ರವಿ ಸಾಳುಂಕೆ ಹಾಗೂ ಶಿವಾಜಿ ಮಂಡೋಳಕರ ವಿರೋಧ ವ್ಯಕ್ತಪಡಿಸಿದಾಗ, ವಾಕ್ಸಮರ ನಡೆಯಿತು. ಪರಿಸ್ಥಿತಿ ತಾರಕಕ್ಕೇರಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-51-1798185987</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಲಿಕೆ ಪರಿಷತ್ ಸಭೆಯಲ್ಲಿ ಅಂಗೀಕರಿಸಬೇಕು’ ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಯ ಹೋರಾಟಗಾರರು ಇಲ್ಲಿನ ಪಾಲಿಕೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ ಅವರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.</p>.<p>ಪಾಲಿಕೆ ಸಭಾಂಗಣದಲ್ಲಿ ಪರಿಷತ್ತು ಸಭೆಯ ಆರಂಭದಲ್ಲೇ ನಾಮನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ಅವರು, ‘ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ, ಸುಪ್ರೀಂಕೋರ್ಟ್ ಏನೇ ತೀರ್ಪು ಕೊಟ್ಟರೂ ನಾವು ಪಾಲಿಸುತ್ತೇವೆ. ಆದರೆ, ಈಗ ರಾಜ್ಯದ ನಿರ್ಣಯ ಅಂಗೀಕರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಇದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಸದಸ್ಯರಾದ ರವಿ ಸಾಳುಂಕೆ ಹಾಗೂ ಶಿವಾಜಿ ಮಂಡೋಳಕರ ವಿರೋಧ ವ್ಯಕ್ತಪಡಿಸಿದಾಗ, ವಾಕ್ಸಮರ ನಡೆಯಿತು. ಪರಿಸ್ಥಿತಿ ತಾರಕಕ್ಕೇರಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-51-1798185987</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>