ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಗೆ ಆಮ್ಲಜನಕ ತರುತ್ತಿದ್ದ ಟ್ಯಾಂಕರ್ ಅಪಘಾತ: ಸೋರಿಕೆಯಾಗಿಲ್ಲ

Last Updated 7 ಮೇ 2021, 5:09 IST
ಅಕ್ಷರ ಗಾತ್ರ

ಬೆಳಗಾವಿ: ಬಳ್ಳಾರಿಯಿಂದ ಇಲ್ಲಿಗೆ ಬರುತ್ತಿದ್ದ ಆಮ್ಲಜನಕ ಟ್ಯಾಂಕರ್ ತಾಲ್ಲೂಕಿನ ಮುತ್ನಾಳ ಗ್ರಾಮದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಪಘಾತಕ್ಕೀಡಾಗಿದೆ. ಸೋರಿಕೆ ಸಂಭವಿಸಿಲ್ಲ.

ಬಳ್ಳಾರಿಯ ಜೆಎಸ್ ಡಬ್ಲ್ಯು ಘಟಕದಿಂದ ಬರುತ್ತಿದ್ದ ಟ್ಯಾಂಕರ್ ಮುಂದಿದ್ದ ಟ್ರಕ್ ಗೆ ಗುದ್ದಿದೆ. ಪ್ರಾಣ ಹಾನಿ ಸಂಭವಿಸಿಲ್ಲ.

ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಆ ಟ್ಯಾಂಕರ್ ಚಲಿಸುವ ಸ್ಥಿತಿಯಲ್ಲಿಲ್ಲ. ಬೇರೊಂದು ಟ್ಯಾಂಕರ್ ಗೆ ವರ್ಗಾಯಿಸಿ ಬೆಳಗಾವಿಗೆ ಸಾಗಿಸಲು ನಿರ್ಧರಿಸಲಾಗಿದೆ.

ಬೆಳಗಾವಿಗೆ ತೆರಳುವ ವಾಹನಗಳು ಸರ್ವಿಸ್ ರಸ್ತೆ ಮೂಲಕ ಸಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT