<p><strong>ಬೆಳಗಾವಿ:</strong> ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಬುಧವಾರ ಮಹಿಳಾ ಪ್ರಯಾಣಿಕರೊಬ್ಬರ ಚಿನ್ನಾಭರಣ, ಹಣ ಕದ್ದ ಮಹಿಳೆಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಹೈದರಾಬಾದ್ನಿಂದ ಬೆಳಗಾವಿಗೆ ಆಗಮಿಸಿದ ಅಕ್ಷತಾ ಕೊಣ್ಣೂರ ಅವರು, ಬೆಳಗಾವಿ–ಬೀಡಿ ಮಾರ್ಗದ ಬಸ್ ಏರಿದ್ದರು. ಆಗ ಅಕ್ಷತಾ ಅವರ ಬ್ಯಾಗ್ನಲ್ಲಿದ್ದ ಪರ್ಸ್ ಕಳುವಾಗಿದೆ.</p><p>‘ಪರ್ಸ್ನಲ್ಲಿ 30 ಗ್ರಾಂ ಚಿನ್ನದ ಮಂಗಳಸೂತ್ರ, ₹5 ಸಾವಿರ ನಗದು ಇತ್ತು. ಅದು ಕಳ್ಳತನವಾಗಿದೆ’ ಎಂದು ತಕ್ಷಣವೇ ಪೊಲೀಸರ ಗಮನಕ್ಕೆ ತಂದಿದ್ದಾರೆ. ತ್ವರಿತವಾಗಿ ಪೊಲೀಸರು ಅಲ್ಲಿಗೆ ದೌಡಾಯಿಸಿದ್ದಾರೆ. ಆಗ ಕಿಟಕಿ ತೆರೆದು ಬಸ್ನ ಹೊರಗೆ ಮಂಗಳಸೂತ್ರ ಎಸೆಯಲಾಗಿದೆ.</p><p>ಇದರಿಂದ ಆರೋಪಿಗಳು ಬಸ್ನಲ್ಲೇ ಇದ್ದಾರೆ ಎಂದು ಶಂಕಿಸಿದ ಪೊಲೀಸರು, ಎಲ್ಲ ಪ್ರಯಾಣಿಕರ ತಪಾಸಣೆ ಆರಂಭಿಸಿದ್ದಾರೆ. ಆಗ ಕಳ್ಳತನ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾರೆ.</p><p>‘ಬೆಳಗಾವಿ ತಾಲ್ಲೂಕಿನ ಬೆಂಢಿಗೇರಿಯ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಮಹಿಳೆ ಈ ಕೃತ್ಯ ಎಸಗಿದ್ದಾರೆ. ವಶಕ್ಕೆ ಪಡೆದ ಚಿನ್ನಾಭರಣ, ಹಣವನ್ನು ಅಕ್ಷತಾ ಅವರಿಗೆ ತಲುಪಿಸಿದ್ದೇವೆ’ ಎಂದು ಮಾರ್ಕೆಟ್ ಠಾಣೆ ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p><p>‘ಅಕ್ಷತಾ ಅವರ ಪತಿ ಹೈದಾರಾಬಾದ್ನಲ್ಲಿ ನ್ಯಾಷನಲ್ ಪೊಲೀಸ್ ಅಕಾಡೆಮಿಯಲ್ಲಿ ಕೆಲಸ ಮಾಡುತ್ತಾರೆ. ಸಂಕ್ರಾಂತಿ ಹಬ್ಬಕ್ಕಾಗಿ ಅವರು ಊರಿಗೆ ಬಂದಾಗ ಘಟನೆ ನಡೆದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಬುಧವಾರ ಮಹಿಳಾ ಪ್ರಯಾಣಿಕರೊಬ್ಬರ ಚಿನ್ನಾಭರಣ, ಹಣ ಕದ್ದ ಮಹಿಳೆಯನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಹೈದರಾಬಾದ್ನಿಂದ ಬೆಳಗಾವಿಗೆ ಆಗಮಿಸಿದ ಅಕ್ಷತಾ ಕೊಣ್ಣೂರ ಅವರು, ಬೆಳಗಾವಿ–ಬೀಡಿ ಮಾರ್ಗದ ಬಸ್ ಏರಿದ್ದರು. ಆಗ ಅಕ್ಷತಾ ಅವರ ಬ್ಯಾಗ್ನಲ್ಲಿದ್ದ ಪರ್ಸ್ ಕಳುವಾಗಿದೆ.</p><p>‘ಪರ್ಸ್ನಲ್ಲಿ 30 ಗ್ರಾಂ ಚಿನ್ನದ ಮಂಗಳಸೂತ್ರ, ₹5 ಸಾವಿರ ನಗದು ಇತ್ತು. ಅದು ಕಳ್ಳತನವಾಗಿದೆ’ ಎಂದು ತಕ್ಷಣವೇ ಪೊಲೀಸರ ಗಮನಕ್ಕೆ ತಂದಿದ್ದಾರೆ. ತ್ವರಿತವಾಗಿ ಪೊಲೀಸರು ಅಲ್ಲಿಗೆ ದೌಡಾಯಿಸಿದ್ದಾರೆ. ಆಗ ಕಿಟಕಿ ತೆರೆದು ಬಸ್ನ ಹೊರಗೆ ಮಂಗಳಸೂತ್ರ ಎಸೆಯಲಾಗಿದೆ.</p><p>ಇದರಿಂದ ಆರೋಪಿಗಳು ಬಸ್ನಲ್ಲೇ ಇದ್ದಾರೆ ಎಂದು ಶಂಕಿಸಿದ ಪೊಲೀಸರು, ಎಲ್ಲ ಪ್ರಯಾಣಿಕರ ತಪಾಸಣೆ ಆರಂಭಿಸಿದ್ದಾರೆ. ಆಗ ಕಳ್ಳತನ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾರೆ.</p><p>‘ಬೆಳಗಾವಿ ತಾಲ್ಲೂಕಿನ ಬೆಂಢಿಗೇರಿಯ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಮಹಿಳೆ ಈ ಕೃತ್ಯ ಎಸಗಿದ್ದಾರೆ. ವಶಕ್ಕೆ ಪಡೆದ ಚಿನ್ನಾಭರಣ, ಹಣವನ್ನು ಅಕ್ಷತಾ ಅವರಿಗೆ ತಲುಪಿಸಿದ್ದೇವೆ’ ಎಂದು ಮಾರ್ಕೆಟ್ ಠಾಣೆ ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p><p>‘ಅಕ್ಷತಾ ಅವರ ಪತಿ ಹೈದಾರಾಬಾದ್ನಲ್ಲಿ ನ್ಯಾಷನಲ್ ಪೊಲೀಸ್ ಅಕಾಡೆಮಿಯಲ್ಲಿ ಕೆಲಸ ಮಾಡುತ್ತಾರೆ. ಸಂಕ್ರಾಂತಿ ಹಬ್ಬಕ್ಕಾಗಿ ಅವರು ಊರಿಗೆ ಬಂದಾಗ ಘಟನೆ ನಡೆದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>