<p>ಬೈಲಹೊಂಗಲ: ‘ಚನ್ನಮ್ಮನ ಕಿತ್ತೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕು ಎಂಬುದು ನನ್ನ ಗುರಿ. ಜನರ ಸಹಕಾರದಿಂದ ಮಾತ್ರ ಇದು ಸಾಧ್ಯ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.</p>.<p>ಸಮೀಪದ ಚನ್ನಮ್ಮನ ಕಿತ್ತೂರು ಮತಕ್ಷೇತ್ರದ ಸಂಪಗಾಂವ, ಯರಡಾಲ, ಸುತಗಟ್ಟಿ, ದಾಸ್ತಿಕೊಪ್ಪ, ಹುಣಶೀಕಟ್ಟಿ, ದೇವರಶೀಗಹಳ್ಳಿ, ದೇಮಟ್ಟಿ, ಉಗರಖೋಡ ಸೇರಿದಂತೆ ಹಲವು ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಭಾಗದ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಕ್ಷೇತ್ರದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಈ ಭಾಗದ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಉತ್ತಮ ರಸ್ತೆ ಸೌಲಭ್ಯಕ್ಕಾಗಿ ನಿರಂತರವಾಗಿ ಬೇಡಿಕೆ ಸಲ್ಲಿಸುತ್ತಿದ್ದರು. ಅವರ ನಿರೀಕ್ಷೆ ಇಂದು ಈಡೇರಿಸುವ ಹಂತಕ್ಕೆ ಬಂದಿದೆ ಎಂಬುದು ನನಗೆ ಅತ್ಯಂತ ಸಂತೋಷದ ವಿಷಯವಾಗಿದೆ. ಗ್ರಾಮೀಣ ಸಂಪರ್ಕ ಸುಧಾರಿಸಿದರೆ ಆರ್ಥಿಕ ಚಟುವಟಿಕೆಗಳು ವೇಗ ಪಡೆಯುತ್ತವೆ’ ಎಂದರು.</p>.<p>ವಿವಿಧ ಗ್ರಾಮಗಳ ಮುಖಂಡರು ಹಾಗೂ ಹಿರಿಯರು ಶಾಸಕ ಬಾಬಾಸಾಹೇಬ ಪಾಟೀಲ ಅವರನ್ನು ಸನ್ಮಾನಿಸಿದರು. ಚನ್ನಮ್ಮನ ಕಿತ್ತೂರು ಮತಕ್ಷೇತ್ರದ ಸಂಪಗಾಂವ ಗ್ರಾಮದಲ್ಲಿ ಎರಡು ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಬಾಬಾಸಾಹೇಬ ಪಾಟೀಲ ಸಮ್ಮುಖದಲ್ಲಿ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-21-671501954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಲಹೊಂಗಲ: ‘ಚನ್ನಮ್ಮನ ಕಿತ್ತೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕು ಎಂಬುದು ನನ್ನ ಗುರಿ. ಜನರ ಸಹಕಾರದಿಂದ ಮಾತ್ರ ಇದು ಸಾಧ್ಯ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.</p>.<p>ಸಮೀಪದ ಚನ್ನಮ್ಮನ ಕಿತ್ತೂರು ಮತಕ್ಷೇತ್ರದ ಸಂಪಗಾಂವ, ಯರಡಾಲ, ಸುತಗಟ್ಟಿ, ದಾಸ್ತಿಕೊಪ್ಪ, ಹುಣಶೀಕಟ್ಟಿ, ದೇವರಶೀಗಹಳ್ಳಿ, ದೇಮಟ್ಟಿ, ಉಗರಖೋಡ ಸೇರಿದಂತೆ ಹಲವು ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಭಾಗದ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಕ್ಷೇತ್ರದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಈ ಭಾಗದ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಉತ್ತಮ ರಸ್ತೆ ಸೌಲಭ್ಯಕ್ಕಾಗಿ ನಿರಂತರವಾಗಿ ಬೇಡಿಕೆ ಸಲ್ಲಿಸುತ್ತಿದ್ದರು. ಅವರ ನಿರೀಕ್ಷೆ ಇಂದು ಈಡೇರಿಸುವ ಹಂತಕ್ಕೆ ಬಂದಿದೆ ಎಂಬುದು ನನಗೆ ಅತ್ಯಂತ ಸಂತೋಷದ ವಿಷಯವಾಗಿದೆ. ಗ್ರಾಮೀಣ ಸಂಪರ್ಕ ಸುಧಾರಿಸಿದರೆ ಆರ್ಥಿಕ ಚಟುವಟಿಕೆಗಳು ವೇಗ ಪಡೆಯುತ್ತವೆ’ ಎಂದರು.</p>.<p>ವಿವಿಧ ಗ್ರಾಮಗಳ ಮುಖಂಡರು ಹಾಗೂ ಹಿರಿಯರು ಶಾಸಕ ಬಾಬಾಸಾಹೇಬ ಪಾಟೀಲ ಅವರನ್ನು ಸನ್ಮಾನಿಸಿದರು. ಚನ್ನಮ್ಮನ ಕಿತ್ತೂರು ಮತಕ್ಷೇತ್ರದ ಸಂಪಗಾಂವ ಗ್ರಾಮದಲ್ಲಿ ಎರಡು ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಬಾಬಾಸಾಹೇಬ ಪಾಟೀಲ ಸಮ್ಮುಖದಲ್ಲಿ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-21-671501954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>