‘ಅಕ್ಕ ಪಡೆಯನ್ನೂ ಬಳಸಿಕೊಳ್ಳುತ್ತಿದ್ದೇವೆ’
‘ಎಷ್ಟೇ ಜಾಗೃತಿ ಮೂಡಿಸಿದರೂ ಪ್ರೀತಿ ಪ್ರೇಮದ ಕಾರಣಕ್ಕೆ ಕೆಲವು ಯುವತಿಯರನ್ನು ಪಾಲಕರು ಬಾಲ್ಯವಿವಾಹ ಮಾಡಿಸುತ್ತಿದ್ದಾರೆ. ಆದರೂ ಶಾಲೆ–ಕಾಲೇಜು ಹಂತದಲ್ಲಿ ಜಾಗೃತಿ ಕಾರ್ಯಕ್ರಮ ಚುರುಕುಗೊಳಿಸಿದ್ದೇವೆ. ನಗರ ಮತ್ತು ಗ್ರಾಮೀಣ ಹಂತದಲ್ಲಿರುವ ಅಕ್ಕ ಪಡೆಗಳನ್ನೂ ಈ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದೇವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್.ಚೇತನಕುಮಾರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.