ಇಲ್ಲಿ ಮಂಗಳವಾರ ಮಾತನಾಡಿದ ಅವರು, ‘ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿಲ್ಲ. ಪದೇ ಪದೇ ಸಭೆ ಮುಂದಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿಯ ಶಾಸಕರೆ ಕಾರಣ. ಅವರು ಅಧ್ಯಕ್ಷ ಘೂಳಪ್ಪ ಹೊಸಮನಿ ಅವರಿಗೆ ಸಹಕಾರ ನೀಡುತ್ತಿಲ್ಲ. ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರು ಕೂಡ ಭಾಗವಹಿಸಲು ಆ ಶಾಸಕರು ಬಿಡುತ್ತಿಲ್ಲ. ಈ ಬಗ್ಗೆ ಬುಡಾ ಅಧ್ಯಕ್ಷರೆ ಹೇಳಿಕೆ ನೀಡಿದ್ದಾರೆ. ಇದಕ್ಕೆ ಶಾಸಕರೆ ಸ್ಪಷ್ಟನೆ ಕೊಡಬೇಕಾಗುತ್ತದೆ’ ಎಂದರು.