<p><strong>ಬೆಳಗಾವಿ:</strong> ಮಳೆ ಮಧ್ಯೆಯೂ ಈ ಬಾರಿ ಸಡಗರದ ನವರಾತ್ರಿ ಉತ್ಸವಕ್ಕೆ ನಗರ ಸಾಕ್ಷಿಯಾಯಿತು. </p><p>ಇಲ್ಲಿನ ಕ್ಯಾಂಪ್ ಪ್ರದೇಶದ ಮರಾಠಿ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ವಿಜಯದಶಮಿ ಪ್ರಯುಕ್ತ ಗುರುವಾರ ನಡೆದ ‘ಸೀಮೋಲ್ಲಂಘನೆ’ ಕಾರ್ಯಕ್ರಮದ ಮೂಲಕ ವೈಭವದ ದಸರೆ ಆಚರಣೆಗೆ ತೆರೆ ಎಳೆಯಲಾಯಿತು.</p><p>ಪಾಟೀಲ ಗಲ್ಲಿಯ ವತನದಾರ್ ಪಾಟೀಲ (ಪೊಲೀಸ್ಪಾಟೀಲ) ಮನೆತನದ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿದವು.</p><p>ಚವಾಟ್ ಗಲ್ಲಿಯಿಂದ ಹೊರಟ ಪಲ್ಲಕ್ಕಿ ಉತ್ಸವ ಮತ್ತು ಅಲಂಕೃತ ಎತ್ತುಗಳ ಮೆರವಣಿಗೆ ಮಾರುತಿ ಗಲ್ಲಿಯ ಮಾರುತಿ ಮಂದಿರದ ಬಳಿ ಆಗಮಿಸಿತು. ನಗರದ ವಿವಿಧ ದೇವಸ್ಥಾನಗಳ ಪಲ್ಲಕ್ಕಿಗಳು ಅಲ್ಲಿಗೆ ಬಂದು ಸಮಾವೇಶಗೊಂಡವು. ನಂತರ ಮುಖ್ಯ ಮೆರವಣಿಗೆ ಮರಾಠಿ ವಿದ್ಯಾನಿಕೇತನ ಶಾಲೆ ಮೈದಾನದತ್ತ ಸಾಗಿತು.</p><p>ಮಕ್ಕಳು, ಯುವಕ–ಯುವತಿಯರು, ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲ ವಯೋಮಾನದವರು ಉತ್ಸಾಹದಿಂದ ಹೆಜ್ಜೆಹಾಕಿದರು. ಹೆಚ್ಚಿನವರು ಸಾಂಪ್ರದಾಯಿಕ ದಿರಿಸಿನಲ್ಲಿ ಕಂಗೊಳಿಸಿದ್ದು ವಿಶೇಷವಾಗಿತ್ತು. ಕಲಾವಿದರ ಪ್ರದರ್ಶನ ಮೆರವಣಿಗೆಗೆ ಮೆರುಗು ತಂದಿತು.</p><p>ಸೀಮೋಲ್ಲಂಘನೆ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಭಕ್ತರ ಜೈಕಾರ ಮುಗಿಲು ಮುಟ್ಟಿತ್ತು. ಅಲ್ಲಿ ಧಾರ್ಮಿಕ ಆಚರಣೆ ಕೈಗೊಂಡ ನಂತರ, ಬನ್ನಿ ಮುಡಿಯಲಾಯಿತು. ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.</p>.<p><strong>ಭಕ್ತರ ಸಾಲು...</strong></p><p>ನವರಾತ್ರಿ ಉತ್ಸವದ ಪ್ರಯುಕ್ತ, ನಗರದಲ್ಲಿ ಪ್ರಮುಖ ದೇಗುಲಗಳು 10 ದಿನ ಸಿಂಗಾರಗೊಂಡಿದ್ದವು. ವಿದ್ಯುದ್ದೀಪಗಳ ಅಲಂಕಾರದಿಂದ ಝಗಮಗಿಸಿದವು. ಬಹುತೇಕ ದೇಗುಲಗಳ ಆವರಣದಲ್ಲಿ ಭಕ್ತರ ಸಾಲು ಕಂಡುಬಂತು.</p><p>ವಿವಿಧ ಬಡಾವಣೆಗಳಲ್ಲಿ 160ಕ್ಕೂ ಅಧಿಕ ದುರ್ಗಾಮಾತಾ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ಮೂರ್ತಿ ಪ್ರತಿಷ್ಠಾಪಿತ ಬಡಾವಣೆಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು. ವಿವಿಧ ಸಂಘಟನೆಯವರು ಆಯೋಜಿಸಿದ್ದ ದಾಂಡಿಯಾ ನೃತ್ಯದಲ್ಲಿ ಸಾವಿರಾರು ಯುವತಿಯರು, ಮಹಿಳೆಯರು ಮತ್ತು ಮಕ್ಕಳು ಹೆಜ್ಜೆಹಾಕಿ ಸಂತಸಪಟ್ಟರು.</p><p>ಶಿವ ಪ್ರತಿಷ್ಠಾನ ಹಿಂದೂಸ್ಥಾನ ಸಂಘಟನೆಯವರು ಆಯೋಜಿಸಿದ್ದ ದುರ್ಗಾಮಾತಾ ದೌಡ್ನಲ್ಲಿ ಸಾವಿರಾರು ಜನರು ಮಳೆಯನ್ನೂ ಲೆಕ್ಕಿಸದೆ ಉತ್ಸಾಹದಿಂದ ಹೆಜ್ಜೆಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಳೆ ಮಧ್ಯೆಯೂ ಈ ಬಾರಿ ಸಡಗರದ ನವರಾತ್ರಿ ಉತ್ಸವಕ್ಕೆ ನಗರ ಸಾಕ್ಷಿಯಾಯಿತು. </p><p>ಇಲ್ಲಿನ ಕ್ಯಾಂಪ್ ಪ್ರದೇಶದ ಮರಾಠಿ ವಿದ್ಯಾನಿಕೇತನ ಶಾಲೆ ಮೈದಾನದಲ್ಲಿ ವಿಜಯದಶಮಿ ಪ್ರಯುಕ್ತ ಗುರುವಾರ ನಡೆದ ‘ಸೀಮೋಲ್ಲಂಘನೆ’ ಕಾರ್ಯಕ್ರಮದ ಮೂಲಕ ವೈಭವದ ದಸರೆ ಆಚರಣೆಗೆ ತೆರೆ ಎಳೆಯಲಾಯಿತು.</p><p>ಪಾಟೀಲ ಗಲ್ಲಿಯ ವತನದಾರ್ ಪಾಟೀಲ (ಪೊಲೀಸ್ಪಾಟೀಲ) ಮನೆತನದ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿದವು.</p><p>ಚವಾಟ್ ಗಲ್ಲಿಯಿಂದ ಹೊರಟ ಪಲ್ಲಕ್ಕಿ ಉತ್ಸವ ಮತ್ತು ಅಲಂಕೃತ ಎತ್ತುಗಳ ಮೆರವಣಿಗೆ ಮಾರುತಿ ಗಲ್ಲಿಯ ಮಾರುತಿ ಮಂದಿರದ ಬಳಿ ಆಗಮಿಸಿತು. ನಗರದ ವಿವಿಧ ದೇವಸ್ಥಾನಗಳ ಪಲ್ಲಕ್ಕಿಗಳು ಅಲ್ಲಿಗೆ ಬಂದು ಸಮಾವೇಶಗೊಂಡವು. ನಂತರ ಮುಖ್ಯ ಮೆರವಣಿಗೆ ಮರಾಠಿ ವಿದ್ಯಾನಿಕೇತನ ಶಾಲೆ ಮೈದಾನದತ್ತ ಸಾಗಿತು.</p><p>ಮಕ್ಕಳು, ಯುವಕ–ಯುವತಿಯರು, ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲ ವಯೋಮಾನದವರು ಉತ್ಸಾಹದಿಂದ ಹೆಜ್ಜೆಹಾಕಿದರು. ಹೆಚ್ಚಿನವರು ಸಾಂಪ್ರದಾಯಿಕ ದಿರಿಸಿನಲ್ಲಿ ಕಂಗೊಳಿಸಿದ್ದು ವಿಶೇಷವಾಗಿತ್ತು. ಕಲಾವಿದರ ಪ್ರದರ್ಶನ ಮೆರವಣಿಗೆಗೆ ಮೆರುಗು ತಂದಿತು.</p><p>ಸೀಮೋಲ್ಲಂಘನೆ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಭಕ್ತರ ಜೈಕಾರ ಮುಗಿಲು ಮುಟ್ಟಿತ್ತು. ಅಲ್ಲಿ ಧಾರ್ಮಿಕ ಆಚರಣೆ ಕೈಗೊಂಡ ನಂತರ, ಬನ್ನಿ ಮುಡಿಯಲಾಯಿತು. ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.</p>.<p><strong>ಭಕ್ತರ ಸಾಲು...</strong></p><p>ನವರಾತ್ರಿ ಉತ್ಸವದ ಪ್ರಯುಕ್ತ, ನಗರದಲ್ಲಿ ಪ್ರಮುಖ ದೇಗುಲಗಳು 10 ದಿನ ಸಿಂಗಾರಗೊಂಡಿದ್ದವು. ವಿದ್ಯುದ್ದೀಪಗಳ ಅಲಂಕಾರದಿಂದ ಝಗಮಗಿಸಿದವು. ಬಹುತೇಕ ದೇಗುಲಗಳ ಆವರಣದಲ್ಲಿ ಭಕ್ತರ ಸಾಲು ಕಂಡುಬಂತು.</p><p>ವಿವಿಧ ಬಡಾವಣೆಗಳಲ್ಲಿ 160ಕ್ಕೂ ಅಧಿಕ ದುರ್ಗಾಮಾತಾ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ಮೂರ್ತಿ ಪ್ರತಿಷ್ಠಾಪಿತ ಬಡಾವಣೆಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು. ವಿವಿಧ ಸಂಘಟನೆಯವರು ಆಯೋಜಿಸಿದ್ದ ದಾಂಡಿಯಾ ನೃತ್ಯದಲ್ಲಿ ಸಾವಿರಾರು ಯುವತಿಯರು, ಮಹಿಳೆಯರು ಮತ್ತು ಮಕ್ಕಳು ಹೆಜ್ಜೆಹಾಕಿ ಸಂತಸಪಟ್ಟರು.</p><p>ಶಿವ ಪ್ರತಿಷ್ಠಾನ ಹಿಂದೂಸ್ಥಾನ ಸಂಘಟನೆಯವರು ಆಯೋಜಿಸಿದ್ದ ದುರ್ಗಾಮಾತಾ ದೌಡ್ನಲ್ಲಿ ಸಾವಿರಾರು ಜನರು ಮಳೆಯನ್ನೂ ಲೆಕ್ಕಿಸದೆ ಉತ್ಸಾಹದಿಂದ ಹೆಜ್ಜೆಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>