<p>ಬೆಳಗಾವಿ: ‘ಡಿಸಿಸಿ ಬ್ಯಾಂಕ್ ರೈತರ ಬ್ಯಾಂಕ್ ಆಗಿದ್ದು, ನಷ್ಟದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಂತರ ರೂಪಾಯಿ ಸಾಲ ನೀಡುತ್ತಿರುವುದು ಖಂಡನೀಯ’ ಎಂದು ರೈತ ಮುಖಂಡ ಶಶಿಕಾಂತ ಗುರೂಜಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಕ್ಕರೆ ಕಾರ್ಖಾನೆಗಳಿಗೆ ₹700 ಕೋಟಿ ಸಾಲ ನೀಡುವುದಾಗಿ ಡಿಸಿಸಿ ಬ್ಯಾಂಕ್ ಸಭೆಯಲ್ಲಿ ನಿರ್ಧರಿಸಲಾಗಿದೆ. ನಷ್ಟದಲ್ಲಿರುವ ಕಾರ್ಖಾನೆಗಳಿಗೆ ಸಾಲ ನೀಡುವುದು ಎಷ್ಟು ಸರಿ?’ ಎಂದರು.</p>.<p>‘ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ರೈತರಿಗೆ ಸಾಲ ಕೊಟ್ಟರೆ ನಷ್ಟವಾಗುತ್ತದೆ ಎಂದು ಹೇಳಿದ್ದರು. ಆದರೆ, ಈಗ ದಿವಾಳಿ ಆಗಿರುವ ಸಕ್ಕರೆ ಕಾರ್ಖಾನೆಗಳಿಗೆ ಸಾಲ ಏಕೆ ಕೊಡುತ್ತಿದ್ದಾರೆ? ಸಂಗಮ ಸಕ್ಕರೆ ಕಾರ್ಖಾನೆಗೆ ₹297 ಕೋಟಿ ಸಾಲ ನೀಡುವ ಪ್ರಸ್ತಾವ ಸರಿಯಲ್ಲ. ಇದೇ ರೀತಿ ಮಾಜಿ ಶಾಸಕ ಸಂಜಯ ಪಾಟೀಲ ₹123 ಕೋಟಿ ಸಾಲ ಕೇಳಿರುವುದು, ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ₹175 ಕೋಟಿ ನಷ್ಟದಲ್ಲಿದೆ. ಆದರೂ ₹75 ಕೋಟಿ ಸಾಲಕ್ಕೆ ಮನವಿ ಮಾಡಿದೆ. ಹರ್ಷ ಶುಗರ್ಗೆ ₹50 ಕೋಟಿ, ಬೆಲಗಾಂ ಶುಗರ್ಸ್ಗೆ₹16 ಕೋಟಿ ಹಾಗೂ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಗೆ ₹245 ಕೋಟಿ ಸಾಲ ಬೇಡಿಕೆ ಇಡಲಾಗಿದೆ’ ಎಂದರು.</p>.<p>ಮುಖಂಡ ಚೂನಪ್ಪ ಪೂಜಾರಿ ಮಾತನಾಡಿ, ‘ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಸಕ್ಕರೆ ಕಾರ್ಖಾನೆಗಳಿಗೆ ಸುಮಾರು ₹700 ಕೋಟಿ ಸಾಲ ನೀಡಲು ಮುಂದಾಗಿದ್ದಾರೆ. ಈ ಹಣವನ್ನು ರೈತರಿಗೆ ಸಾಲ ಸೌಲಭ್ಯ ನೀಡಬೇಕು’ ಎಂದರು.</p>.<p>ಪ್ರೇಮ ಚೌಗಲಾ, ಪ್ರಕಾಶ ಉಮರಾಣಿ, ಶಿವಾನಂದ ಮೆಕ್ಕಳಕಿ, ಶಿವಾನಂದ ಮುಗಳಿಹಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-21-792089551</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಡಿಸಿಸಿ ಬ್ಯಾಂಕ್ ರೈತರ ಬ್ಯಾಂಕ್ ಆಗಿದ್ದು, ನಷ್ಟದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಂತರ ರೂಪಾಯಿ ಸಾಲ ನೀಡುತ್ತಿರುವುದು ಖಂಡನೀಯ’ ಎಂದು ರೈತ ಮುಖಂಡ ಶಶಿಕಾಂತ ಗುರೂಜಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಕ್ಕರೆ ಕಾರ್ಖಾನೆಗಳಿಗೆ ₹700 ಕೋಟಿ ಸಾಲ ನೀಡುವುದಾಗಿ ಡಿಸಿಸಿ ಬ್ಯಾಂಕ್ ಸಭೆಯಲ್ಲಿ ನಿರ್ಧರಿಸಲಾಗಿದೆ. ನಷ್ಟದಲ್ಲಿರುವ ಕಾರ್ಖಾನೆಗಳಿಗೆ ಸಾಲ ನೀಡುವುದು ಎಷ್ಟು ಸರಿ?’ ಎಂದರು.</p>.<p>‘ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ರೈತರಿಗೆ ಸಾಲ ಕೊಟ್ಟರೆ ನಷ್ಟವಾಗುತ್ತದೆ ಎಂದು ಹೇಳಿದ್ದರು. ಆದರೆ, ಈಗ ದಿವಾಳಿ ಆಗಿರುವ ಸಕ್ಕರೆ ಕಾರ್ಖಾನೆಗಳಿಗೆ ಸಾಲ ಏಕೆ ಕೊಡುತ್ತಿದ್ದಾರೆ? ಸಂಗಮ ಸಕ್ಕರೆ ಕಾರ್ಖಾನೆಗೆ ₹297 ಕೋಟಿ ಸಾಲ ನೀಡುವ ಪ್ರಸ್ತಾವ ಸರಿಯಲ್ಲ. ಇದೇ ರೀತಿ ಮಾಜಿ ಶಾಸಕ ಸಂಜಯ ಪಾಟೀಲ ₹123 ಕೋಟಿ ಸಾಲ ಕೇಳಿರುವುದು, ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ₹175 ಕೋಟಿ ನಷ್ಟದಲ್ಲಿದೆ. ಆದರೂ ₹75 ಕೋಟಿ ಸಾಲಕ್ಕೆ ಮನವಿ ಮಾಡಿದೆ. ಹರ್ಷ ಶುಗರ್ಗೆ ₹50 ಕೋಟಿ, ಬೆಲಗಾಂ ಶುಗರ್ಸ್ಗೆ₹16 ಕೋಟಿ ಹಾಗೂ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಗೆ ₹245 ಕೋಟಿ ಸಾಲ ಬೇಡಿಕೆ ಇಡಲಾಗಿದೆ’ ಎಂದರು.</p>.<p>ಮುಖಂಡ ಚೂನಪ್ಪ ಪೂಜಾರಿ ಮಾತನಾಡಿ, ‘ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಸಕ್ಕರೆ ಕಾರ್ಖಾನೆಗಳಿಗೆ ಸುಮಾರು ₹700 ಕೋಟಿ ಸಾಲ ನೀಡಲು ಮುಂದಾಗಿದ್ದಾರೆ. ಈ ಹಣವನ್ನು ರೈತರಿಗೆ ಸಾಲ ಸೌಲಭ್ಯ ನೀಡಬೇಕು’ ಎಂದರು.</p>.<p>ಪ್ರೇಮ ಚೌಗಲಾ, ಪ್ರಕಾಶ ಉಮರಾಣಿ, ಶಿವಾನಂದ ಮೆಕ್ಕಳಕಿ, ಶಿವಾನಂದ ಮುಗಳಿಹಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-21-792089551</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>