<p><strong>ಬೆಳಗಾವಿ/ಹಾಸನ/ಕಲಬುರಗಿ:</strong> ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಪಾಸಣೆ ಬಳಿಕ ಹುಸಿ ಎಂದು ದೃಢಪಟ್ಟಿದೆ.</p><p>ಆದರೆ, ಬೆದರಿಕೆ ಕರೆಯಿಂದಾಗಿ ಬೆಳಗಿನ ಹೊತ್ತು ಕಲಾಪ ವ್ಯತ್ಯಯವಾಗಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೆಲ ದಿನಗಳ ಹಿಂದೆಯೂ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬೆದರಿಕೆ ಕರೆ ಬಂದಿತ್ತು.</p><p><strong>ಬೆಳಗಾವಿ ವರದಿ: </strong>ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ಗೆ ಬಾಂಬ್ ಕುರಿತು ಇ–ಮೇಲ್<br>ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನದ ಎಲ್ಲ ಕಲಾಪವನ್ನು ಸ್ಥಗಿತಗೊಳಿಸಲಾಯಿತು.</p><p>ಸಿಬ್ಬಂದಿಯನ್ನು ಹೊರಗೆ ಕಳುಹಿಸಿದ ಪೊಲೀಸರು ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದ ನೆರವಿನಲ್ಲಿ ಸುಮಾರು ಮೂರು ತಾಸು ಪರಿಶೀಲನೆ ನಡೆಸಿದರು. ‘ಪರಿಶೀಲನೆ ಬಳಿಕ ಹುಸಿ ಎಂದು ಗೊತ್ತಾಗಿದೆ’ ಎಂದು ಡಿಸಿಪಿ ನಾರಾಯಣ ಭರಮನಿ ತಿಳಿಸಿದರು.</p><p><strong>‘ಆರ್ಡಿಎಕ್ಸ್ ಬಾಂಬ್ ಸ್ಫೋಟಿಸುವ ಬೆದರಿಕೆ’</strong></p><p><strong>ಹಾಸನ ವರದಿ:</strong> ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಮಂಗಳವಾರ 3ನೇ ಬಾರಿಗೆ ಬಾಂಬ್ ಬೆದರಿಕೆಯ ಇ–ಮೇಲ್ ಬಂದಿದ್ದು, ಪೊಲೀಸರ ತಪಾಸಣೆಯ ನಂತರ ಬೆದರಿಕೆ ಹುಸಿ ಎಂಬುದು ಗೊತ್ತಾಯಿತು.</p><p>ಬೆಳಿಗ್ಗೆ 5.40ಕ್ಕೆ ಕೋರ್ಟ್ನ ಅಧಿಕೃತ ಇ-ಮೇಲ್ ಐಡಿಗೆ ಸಂದೇಶ ಬಂದಿದ್ದು, ‘ಬೆಳಿಗ್ಗೆ 11.50ಕ್ಕೆ ಸೈನೈಡ್ ವಿಷಾನಿಲ ತುಂಬಿದ ಆರ್ಡಿಎಕ್ಸ್ ಬಾಂಬ್ ಸ್ಫೋಟಗೊಳ್ಳಲಿದೆ ಎಂದು’ ಎಂದು ಬೆದರಿಕೆ ಹಾಕಲಾಗಿತ್ತು.</p><p>ಭಯೋತ್ಪಾದನೆ, ಕಾನೂನು ಹಾಗೂ 26/11 ಮುಂಬೈ ದಾಳಿಯ ಸಂದರ್ಭದ ವಿಚಾರಗಳನ್ನು ಉಲ್ಲೇಖಿಸಿ, ಅಜ್ಮಲ್ ಕಸಬ್ ಹೆಸರನ್ನೂ ಪ್ರಸ್ತಾಪಿಸಲಾಗಿತ್ತು.</p><p>ಡಿಎಆರ್ನ ಡಿವೈಎಸ್ಪಿ ಪಾಲಾಕ್ಷ ನೇತೃತ್ವದಲ್ಲಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತೀವ್ರ ಪರಿಶೀಲನೆ ನಡೆಸಿದರು. ಹುಸಿ ಎಂದು ಸಾಬೀತಾದ ಬಳಿಕ ಕೆಲಸಗಳನ್ನು ಪುನರಾರಂಭಿಸಲಾಯಿತು.</p><p>ಡಿ.15ರಂದು ಜಿಲ್ಲಾಧಿಕಾರಿ ಕಚೇರಿಯ ಇ-ಮೇಲ್ಗೆ, ಜನವರಿ 6 ಮತ್ತು ಫೆ.16 ರಂದು ಕೋರ್ಟ್ನ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿತ್ತು. </p><p><strong>ಕಲಬುರಗಿ ವರದಿ</strong>: ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆತಂಕ ಆವರಿಸಿತ್ತು. ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ವಿಧ್ವಂಸಕ ಕೃತ್ಯ ತಡೆ ತಂಡದವರು ಪರಿಶೀಲಿಸಿದರು.</p><p>ಬೆದರಿಕೆ ಕಾರಣದಿಂದ ಕೋರ್ಟ್ ಕಲಾಪ ಅರ್ಧ ದಿನ ಸ್ಥಗಿತಗೊಂಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ/ಹಾಸನ/ಕಲಬುರಗಿ:</strong> ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಪಾಸಣೆ ಬಳಿಕ ಹುಸಿ ಎಂದು ದೃಢಪಟ್ಟಿದೆ.</p><p>ಆದರೆ, ಬೆದರಿಕೆ ಕರೆಯಿಂದಾಗಿ ಬೆಳಗಿನ ಹೊತ್ತು ಕಲಾಪ ವ್ಯತ್ಯಯವಾಗಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೆಲ ದಿನಗಳ ಹಿಂದೆಯೂ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬೆದರಿಕೆ ಕರೆ ಬಂದಿತ್ತು.</p><p><strong>ಬೆಳಗಾವಿ ವರದಿ: </strong>ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ಗೆ ಬಾಂಬ್ ಕುರಿತು ಇ–ಮೇಲ್<br>ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನದ ಎಲ್ಲ ಕಲಾಪವನ್ನು ಸ್ಥಗಿತಗೊಳಿಸಲಾಯಿತು.</p><p>ಸಿಬ್ಬಂದಿಯನ್ನು ಹೊರಗೆ ಕಳುಹಿಸಿದ ಪೊಲೀಸರು ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದ ನೆರವಿನಲ್ಲಿ ಸುಮಾರು ಮೂರು ತಾಸು ಪರಿಶೀಲನೆ ನಡೆಸಿದರು. ‘ಪರಿಶೀಲನೆ ಬಳಿಕ ಹುಸಿ ಎಂದು ಗೊತ್ತಾಗಿದೆ’ ಎಂದು ಡಿಸಿಪಿ ನಾರಾಯಣ ಭರಮನಿ ತಿಳಿಸಿದರು.</p><p><strong>‘ಆರ್ಡಿಎಕ್ಸ್ ಬಾಂಬ್ ಸ್ಫೋಟಿಸುವ ಬೆದರಿಕೆ’</strong></p><p><strong>ಹಾಸನ ವರದಿ:</strong> ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಮಂಗಳವಾರ 3ನೇ ಬಾರಿಗೆ ಬಾಂಬ್ ಬೆದರಿಕೆಯ ಇ–ಮೇಲ್ ಬಂದಿದ್ದು, ಪೊಲೀಸರ ತಪಾಸಣೆಯ ನಂತರ ಬೆದರಿಕೆ ಹುಸಿ ಎಂಬುದು ಗೊತ್ತಾಯಿತು.</p><p>ಬೆಳಿಗ್ಗೆ 5.40ಕ್ಕೆ ಕೋರ್ಟ್ನ ಅಧಿಕೃತ ಇ-ಮೇಲ್ ಐಡಿಗೆ ಸಂದೇಶ ಬಂದಿದ್ದು, ‘ಬೆಳಿಗ್ಗೆ 11.50ಕ್ಕೆ ಸೈನೈಡ್ ವಿಷಾನಿಲ ತುಂಬಿದ ಆರ್ಡಿಎಕ್ಸ್ ಬಾಂಬ್ ಸ್ಫೋಟಗೊಳ್ಳಲಿದೆ ಎಂದು’ ಎಂದು ಬೆದರಿಕೆ ಹಾಕಲಾಗಿತ್ತು.</p><p>ಭಯೋತ್ಪಾದನೆ, ಕಾನೂನು ಹಾಗೂ 26/11 ಮುಂಬೈ ದಾಳಿಯ ಸಂದರ್ಭದ ವಿಚಾರಗಳನ್ನು ಉಲ್ಲೇಖಿಸಿ, ಅಜ್ಮಲ್ ಕಸಬ್ ಹೆಸರನ್ನೂ ಪ್ರಸ್ತಾಪಿಸಲಾಗಿತ್ತು.</p><p>ಡಿಎಆರ್ನ ಡಿವೈಎಸ್ಪಿ ಪಾಲಾಕ್ಷ ನೇತೃತ್ವದಲ್ಲಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತೀವ್ರ ಪರಿಶೀಲನೆ ನಡೆಸಿದರು. ಹುಸಿ ಎಂದು ಸಾಬೀತಾದ ಬಳಿಕ ಕೆಲಸಗಳನ್ನು ಪುನರಾರಂಭಿಸಲಾಯಿತು.</p><p>ಡಿ.15ರಂದು ಜಿಲ್ಲಾಧಿಕಾರಿ ಕಚೇರಿಯ ಇ-ಮೇಲ್ಗೆ, ಜನವರಿ 6 ಮತ್ತು ಫೆ.16 ರಂದು ಕೋರ್ಟ್ನ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿತ್ತು. </p><p><strong>ಕಲಬುರಗಿ ವರದಿ</strong>: ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆತಂಕ ಆವರಿಸಿತ್ತು. ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ವಿಧ್ವಂಸಕ ಕೃತ್ಯ ತಡೆ ತಂಡದವರು ಪರಿಶೀಲಿಸಿದರು.</p><p>ಬೆದರಿಕೆ ಕಾರಣದಿಂದ ಕೋರ್ಟ್ ಕಲಾಪ ಅರ್ಧ ದಿನ ಸ್ಥಗಿತಗೊಂಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>