‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಹೊರ ರಾಜ್ಯದಿಂದ ಬಂದ ಅವರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಅವರು ವಿವಿಧೆಡೆ ಸುತ್ತಾಡಿದ್ದಾರೆ ಎನ್ನುವ ಮಾತುಗಳು ಅಲ್ಲಿನ ಜನರಿಂದ ಕೇಳಿಬಂದಿರುವುದರಿಂದ ಸಮಗ್ರವಾಗಿ ಪರಿಶೀಲಿಸಲಾಗುವುದು. ದ್ವಿತೀಯ ಸಂಪರ್ಕಕ್ಕೆ ಬಂದಿರುವವರನ್ನು ಕೂಡ ಕ್ವಾರಂಟೈನ್ ಮಾಡಲು ಕ್ರಮ ವಹಿಸಲಾಗುವುದು’ ಎಂದು ಮಾಹಿತಿ ನೀಡಿದರು.