<p><strong>ಬೆಳಗಾವಿ</strong>: ಇಲ್ಲಿನ ಸರ್ಕಾರಿ ಸರದಾರ್ಸ್ ಪ್ರೌಢಶಾಲೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಪಶು ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಸೋಮವಾರ ನಡೆದ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನ ಮನಸೆಳೆಯಿತು.</p>.<p>ಜಿಲ್ಲೆಯ ವಿವಿಧೆಡೆಯಿಂದ ಜನರು ಆಗಮಿಸಿ ಪ್ರದರ್ಶನ ವೀಕ್ಷಿಸಿ ಸಂಭ್ರಮಿಸಿದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ‘ನಾವು ಯಾವ ರೀತಿ ವರ್ತಿಸುತ್ತೇವೆಯೋ, ಅದೇ ರೀತಿ ಪ್ರಾಣಿಗಳೂ ನಮ್ಮೊಂದಿಗೆ ವರ್ತಿಸುತ್ತವೆ. ಈ ಬಗ್ಗೆ ಜಾಗೃತಿ ಮೂಡಿಸಲು ಪ್ರದರ್ಶನ ಆಯೋಜಿಸಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮ ಪ್ರತಿವರ್ಷ ನಡೆಯಲಿ. ತಾಲ್ಲೂಕು ಮಟ್ಟದಲ್ಲೂ ಆಯೋಜನೆಯಾಗಲಿ’ ಎಂದರು.</p>.<p>ಶಾಸಕ ಆಸಿಫ್ ಸೇಠ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿದರು.</p>.<p>ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.</p>.<p>ಬೆಳಗಾವಿ, ವಿಜಯಪುರ, ಬಾಗಲಕೋಟೆ ಸೇರಿ ವಿವಿಧ ಜಿಲ್ಲೆಗಳ 25 ತಳಿಗಳ 300ಕ್ಕೂ ಹೆಚ್ಚು ಶ್ವಾನಗಳು, 9 ತಳಿಗಳ 30ಕ್ಕೂ ಅಧಿಕ ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು.</p>.<p>ಪೊಲೀಸ್ ಶ್ವಾನದಳದಿಂದ ನಡೆದ ವಿಶೇಷ ಪ್ರದರ್ಶನ ಗಮನಸೆಳೆಯಿತು. ನಂತರ ರೇಬಿಸ್ ಕುರಿತು ಕಿರುನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಸರ್ಕಾರಿ ಸರದಾರ್ಸ್ ಪ್ರೌಢಶಾಲೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಪಶು ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಸೋಮವಾರ ನಡೆದ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನ ಮನಸೆಳೆಯಿತು.</p>.<p>ಜಿಲ್ಲೆಯ ವಿವಿಧೆಡೆಯಿಂದ ಜನರು ಆಗಮಿಸಿ ಪ್ರದರ್ಶನ ವೀಕ್ಷಿಸಿ ಸಂಭ್ರಮಿಸಿದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ‘ನಾವು ಯಾವ ರೀತಿ ವರ್ತಿಸುತ್ತೇವೆಯೋ, ಅದೇ ರೀತಿ ಪ್ರಾಣಿಗಳೂ ನಮ್ಮೊಂದಿಗೆ ವರ್ತಿಸುತ್ತವೆ. ಈ ಬಗ್ಗೆ ಜಾಗೃತಿ ಮೂಡಿಸಲು ಪ್ರದರ್ಶನ ಆಯೋಜಿಸಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮ ಪ್ರತಿವರ್ಷ ನಡೆಯಲಿ. ತಾಲ್ಲೂಕು ಮಟ್ಟದಲ್ಲೂ ಆಯೋಜನೆಯಾಗಲಿ’ ಎಂದರು.</p>.<p>ಶಾಸಕ ಆಸಿಫ್ ಸೇಠ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿದರು.</p>.<p>ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.</p>.<p>ಬೆಳಗಾವಿ, ವಿಜಯಪುರ, ಬಾಗಲಕೋಟೆ ಸೇರಿ ವಿವಿಧ ಜಿಲ್ಲೆಗಳ 25 ತಳಿಗಳ 300ಕ್ಕೂ ಹೆಚ್ಚು ಶ್ವಾನಗಳು, 9 ತಳಿಗಳ 30ಕ್ಕೂ ಅಧಿಕ ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು.</p>.<p>ಪೊಲೀಸ್ ಶ್ವಾನದಳದಿಂದ ನಡೆದ ವಿಶೇಷ ಪ್ರದರ್ಶನ ಗಮನಸೆಳೆಯಿತು. ನಂತರ ರೇಬಿಸ್ ಕುರಿತು ಕಿರುನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>