<p><strong>ಬೆಳಗಾವಿ:</strong> ಇಲ್ಲಿನ ಬಿ.ಶಂಕರಾನಂದ ಮಾರ್ಗದಲ್ಲಿ (ಕ್ಲಬ್ ರಸ್ತೆ) ಮಂಗಳವಾರ ಮಧ್ಯಾಹ್ನ ಬೈಕ್ನಲ್ಲಿ ಬಂದ ಇಬ್ಬರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಅವರ ಕಾರು ಚಾಲಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.</p><p>ತಾಲ್ಲೂಕಿನ ಬೆಳಗುಂದಿಯ ಬಸವಂತ ಕಡೋಲ್ಕರ (32) ಗಾಯಗೊಂಡಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p><p>‘ಕಾರು ನಿಲ್ಲಿಸಿ ರಸ್ತೆಯಲ್ಲಿ ನಿಂತಿದ್ದ ಬಸವಂತ ಅವರ ಜತೆಗೆ, ಬೈಕ್ನಲ್ಲಿ ಬಂದ ಇಬ್ಬರು ಮಾತನಾಡಿದ್ದಾರೆ. ನಂತರ ಎದೆ, ಭುಜ ಮತ್ತಿತರ ಕಡೆ ಚಾಕುವಿನಿಂದ ಇರಿದಿದ್ದಾರೆ. ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದೇವೆ’ ಎಂದು ಕ್ಯಾಂಪ್ ಠಾಣೆ ಇನ್ಸ್ಪೆಕ್ಟರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಬಿ.ಶಂಕರಾನಂದ ಮಾರ್ಗದಲ್ಲಿ (ಕ್ಲಬ್ ರಸ್ತೆ) ಮಂಗಳವಾರ ಮಧ್ಯಾಹ್ನ ಬೈಕ್ನಲ್ಲಿ ಬಂದ ಇಬ್ಬರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಅವರ ಕಾರು ಚಾಲಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.</p><p>ತಾಲ್ಲೂಕಿನ ಬೆಳಗುಂದಿಯ ಬಸವಂತ ಕಡೋಲ್ಕರ (32) ಗಾಯಗೊಂಡಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p><p>‘ಕಾರು ನಿಲ್ಲಿಸಿ ರಸ್ತೆಯಲ್ಲಿ ನಿಂತಿದ್ದ ಬಸವಂತ ಅವರ ಜತೆಗೆ, ಬೈಕ್ನಲ್ಲಿ ಬಂದ ಇಬ್ಬರು ಮಾತನಾಡಿದ್ದಾರೆ. ನಂತರ ಎದೆ, ಭುಜ ಮತ್ತಿತರ ಕಡೆ ಚಾಕುವಿನಿಂದ ಇರಿದಿದ್ದಾರೆ. ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದೇವೆ’ ಎಂದು ಕ್ಯಾಂಪ್ ಠಾಣೆ ಇನ್ಸ್ಪೆಕ್ಟರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>