<p><strong>ಬೆಳಗಾವಿ:</strong> ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ಭಾನುವಾರ ನಡೆದ ಮತದಾನದ ವೇಳೆ ಜಾರಕಿಹೊಳಿ ಸಹೋದರರ ಬಣ ಹಾಗೂ ಶಾಸಕ ಲಕ್ಷ್ಮಣ ಸವದಿ ಬಣಗಳ ಮುಖಂಡರು ಹೊಡೆದಾಡಿಕೊಂಡರು.</p><p>ಜಾರಕಿಹೊಳಿ ಗುಂಪಿನವರು ತಮ್ಮ ಡೆಲಿಗೇಷನ್ ಫಾರ್ಮ್ಗಳನ್ನು ಕದ್ದು ಇಟ್ಟುಕೊಂಡಿದ್ದಾರೆ. ಮತದಾನ ಮಾಡಲು ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿ ಸವದಿ ಬಣದ ಬೆಂಬಲಿಗರು ಕ್ಯಾತೆ ತೆಗೆದರು. ಜಾರಕಿಹೊಳಿ ಬಣದ ಅಭ್ಯರ್ಥಿ ವಿರುದ್ಧ ಆರೋಪ ಮಾಡಿ ಗಲಾಟೆ ಆರಂಭಿಸಿದರು.</p><p>'ಜಾರಕಿಹೊಳಿ ಪೆನಲ್ ಅಭ್ಯರ್ಥಿ ಅಪ್ಪಾಸಾಹೇಬ ಕುಲಗೂಡೆ ಅವರು ಮತದಾನದ 40 ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ' ಎಂದು ಆರೋಪಿಸಿದರು. ಇದೇ ವಿಚಾರವಾಗಿ ಎರಡೂ ಬಣಗಳ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈಕೈ ಮಿಲಾಯಿಸಿದರು.</p><p>ಸವದಿ ಹಾಗೂ ಕತ್ತಿ ಬಣದಿಂದ ಬಸವಗೌಡ ಆಸಂಗಿ ಕಣಕ್ಕಿಳಿದಿದ್ದಾರೆ. ಅವರ ಪರವಾದ ಡೆಲಿಗೇಟರುಗಳ ಮತಹಕ್ಕು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿದರು.</p><p>ಆಗ ಎರಡೂ ಕಡೆಯ ಬೆಂಬಲಿಗರ ಮಧ್ಯೆ ನೂಕಾಟ- ತಳ್ಳಾಟ ನಡೆಯಿತು. ಕೆಲವರು ಗುಂಪಿನಲ್ಲಿ ಹೊಡೆದಾಡಿಕೊಂಡರು.</p><p>ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರಿಗೆ ತಿಳಿಸಿದರು.</p><p>ನಂತರ 15ಕ್ಕೂ ಹೆಚ್ಚು ಜನ ಕ್ಯಾಂಪ್ ಠಾಣೆಗೆ ತೆರಳಿ 24 ಮಂದಿಯ ಡೆಲಿಗೇಷನ್ ಫಾರ್ಮ್ಗಳನ್ನು ಕದಿಯಲಾಗಿದೆ ಎಂದು ದೂರು ದಾಖಲಿಸಿದರು.</p><p>ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ಭಾನುವಾರ ನಡೆದ ಮತದಾನದ ವೇಳೆ ಜಾರಕಿಹೊಳಿ ಸಹೋದರರ ಬಣ ಹಾಗೂ ಶಾಸಕ ಲಕ್ಷ್ಮಣ ಸವದಿ ಬಣಗಳ ಮುಖಂಡರು ಹೊಡೆದಾಡಿಕೊಂಡರು.</p><p>ಜಾರಕಿಹೊಳಿ ಗುಂಪಿನವರು ತಮ್ಮ ಡೆಲಿಗೇಷನ್ ಫಾರ್ಮ್ಗಳನ್ನು ಕದ್ದು ಇಟ್ಟುಕೊಂಡಿದ್ದಾರೆ. ಮತದಾನ ಮಾಡಲು ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿ ಸವದಿ ಬಣದ ಬೆಂಬಲಿಗರು ಕ್ಯಾತೆ ತೆಗೆದರು. ಜಾರಕಿಹೊಳಿ ಬಣದ ಅಭ್ಯರ್ಥಿ ವಿರುದ್ಧ ಆರೋಪ ಮಾಡಿ ಗಲಾಟೆ ಆರಂಭಿಸಿದರು.</p><p>'ಜಾರಕಿಹೊಳಿ ಪೆನಲ್ ಅಭ್ಯರ್ಥಿ ಅಪ್ಪಾಸಾಹೇಬ ಕುಲಗೂಡೆ ಅವರು ಮತದಾನದ 40 ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ' ಎಂದು ಆರೋಪಿಸಿದರು. ಇದೇ ವಿಚಾರವಾಗಿ ಎರಡೂ ಬಣಗಳ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈಕೈ ಮಿಲಾಯಿಸಿದರು.</p><p>ಸವದಿ ಹಾಗೂ ಕತ್ತಿ ಬಣದಿಂದ ಬಸವಗೌಡ ಆಸಂಗಿ ಕಣಕ್ಕಿಳಿದಿದ್ದಾರೆ. ಅವರ ಪರವಾದ ಡೆಲಿಗೇಟರುಗಳ ಮತಹಕ್ಕು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿದರು.</p><p>ಆಗ ಎರಡೂ ಕಡೆಯ ಬೆಂಬಲಿಗರ ಮಧ್ಯೆ ನೂಕಾಟ- ತಳ್ಳಾಟ ನಡೆಯಿತು. ಕೆಲವರು ಗುಂಪಿನಲ್ಲಿ ಹೊಡೆದಾಡಿಕೊಂಡರು.</p><p>ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರಿಗೆ ತಿಳಿಸಿದರು.</p><p>ನಂತರ 15ಕ್ಕೂ ಹೆಚ್ಚು ಜನ ಕ್ಯಾಂಪ್ ಠಾಣೆಗೆ ತೆರಳಿ 24 ಮಂದಿಯ ಡೆಲಿಗೇಷನ್ ಫಾರ್ಮ್ಗಳನ್ನು ಕದಿಯಲಾಗಿದೆ ಎಂದು ದೂರು ದಾಖಲಿಸಿದರು.</p><p>ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>