ಸಿ.ಆರ್.ಪಿ.ಎಫ್, ರಾಜ್ಯ ಮೀಸಲು ಪೊಲೀಸ್ ಪಡೆಗಳು, ನಗರ ಪೊಲೀಸ್, ಗೃಹರಕ್ಷಕ ದಳದವರು ಪಾಲ್ಗೊಂಡಿದ್ದರು. ಖಡಕ್ ಗಲ್ಲಿ, ಖಂಜರ್ಗಲ್ಲಿ, ಖಡೇಬಜಾರ್ ಮೊದಲಾದ ಕಡೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಡಿಸಿಪಿಗಳಾದ ಯಶೋದಾ ವಂಟಗೋಡಿ, ಮುತ್ತುರಾಜ್, ಎಸಿಪಿಗಳಾದ ನಾರಾಯಣ ಭರಮನಿ, ಚಂದ್ರಪ್ಪ ಮತ್ತು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.