<p><strong>ಬೆಳಗಾವಿ:</strong> ‘ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಬೇಕು. ಹಲಗಾ-ಮಚ್ಚೆ ಬೈಪಾಸ್ ಕಾಮಗಾರಿ ರದ್ದುಗೊಳಿಸಬೇಕು’ ಎನ್ನುವುದು ಸೇರದಿಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಸಂತ್ರಸ್ತರನ್ನು ಗುರುತಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡಿದ್ದರೂ ಪರಿಹಾರ ಸಿಗದವರಿಗೆ ನ್ಯಾಯ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಬೇಕಾಗುವಷ್ಟು ಮರಳನ್ನು ಜಿಲ್ಲಾಡಳಿತದಿಂದಲೇ ಪೂರೈಸಬೇಕು’ ಎಂದು ಒತ್ತಾಯಿಸಿದರು.</p>.<p>‘ಹಲಗಾ-ಮಚ್ಚೆ ಬೈಪಾಸ್ ನಿರ್ಮಾಣದಿಂದ ರೈತರು ಫಲವತ್ತಾದ ಜಮೀನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ರೈತರ ಹಿತದೃಷ್ಟಿಯಿಂದ ಈ ಕಾಮಗಾರಿ ನಿಲ್ಲಿಸಬೇಕು. ಸ್ವಾಧೀನಪಡಿಸಿಕೊಂಡಿರುವ ಜಮೀನು ವಾಪಸ್ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಜಿಲ್ಲೆಯ ಎಲ್ಲ ರಾಸಾಯನಿಕ ರಸಗೊಬ್ಬರ ಅಂಗಡಿಗಳಲ್ಲೂ ದರ ಪಟ್ಟಿ ಪ್ರಕಟಿಸಬೇಕು. ಫಸಲ್ ಬೀಮಾ ಯೋಜನೆ ಸಮೀಕ್ಷೆಯನ್ನು ರೈತರ ಉಪಸ್ಥಿತಿಯಲ್ಲಿಯೇ ನಡೆಸಬೇಕು. ಏಜೆಂಟರ ಹಾವಳಿ ತಪ್ಪಿಸಬೇಕು. ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಸತ್ಯಪ್ಪ ಮಲ್ಲಾಪುರೆ, ಕಾರ್ಯಾಧ್ಯಕ್ಷ ರವಿ ಸಿದ್ದಮ್ಮನವರ, ಉಪಾಧ್ಯಕ್ಷ ಗೋಪಾಲ ಕುಕನೂರ, ಪ್ರಧಾನ ಕಾರ್ಯದರ್ಶಿ ಮಲ್ಲು ದೇಸಾಯಿ, ಮುಖಂಡರಾದ ತ್ಯಾಗರಾಜ ಕದಂ, ರಾಜು ಮರವೆ, ಭರಮು ಖೇಮಲಾಪುರೆ, ಶಿವಾನಂದ ದೊಡವಾಡ, ಮಹಾದೇವ ಮಡಿವಾಳರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಬೇಕು. ಹಲಗಾ-ಮಚ್ಚೆ ಬೈಪಾಸ್ ಕಾಮಗಾರಿ ರದ್ದುಗೊಳಿಸಬೇಕು’ ಎನ್ನುವುದು ಸೇರದಿಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಸಂತ್ರಸ್ತರನ್ನು ಗುರುತಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡಿದ್ದರೂ ಪರಿಹಾರ ಸಿಗದವರಿಗೆ ನ್ಯಾಯ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಬೇಕಾಗುವಷ್ಟು ಮರಳನ್ನು ಜಿಲ್ಲಾಡಳಿತದಿಂದಲೇ ಪೂರೈಸಬೇಕು’ ಎಂದು ಒತ್ತಾಯಿಸಿದರು.</p>.<p>‘ಹಲಗಾ-ಮಚ್ಚೆ ಬೈಪಾಸ್ ನಿರ್ಮಾಣದಿಂದ ರೈತರು ಫಲವತ್ತಾದ ಜಮೀನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ರೈತರ ಹಿತದೃಷ್ಟಿಯಿಂದ ಈ ಕಾಮಗಾರಿ ನಿಲ್ಲಿಸಬೇಕು. ಸ್ವಾಧೀನಪಡಿಸಿಕೊಂಡಿರುವ ಜಮೀನು ವಾಪಸ್ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಜಿಲ್ಲೆಯ ಎಲ್ಲ ರಾಸಾಯನಿಕ ರಸಗೊಬ್ಬರ ಅಂಗಡಿಗಳಲ್ಲೂ ದರ ಪಟ್ಟಿ ಪ್ರಕಟಿಸಬೇಕು. ಫಸಲ್ ಬೀಮಾ ಯೋಜನೆ ಸಮೀಕ್ಷೆಯನ್ನು ರೈತರ ಉಪಸ್ಥಿತಿಯಲ್ಲಿಯೇ ನಡೆಸಬೇಕು. ಏಜೆಂಟರ ಹಾವಳಿ ತಪ್ಪಿಸಬೇಕು. ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಸತ್ಯಪ್ಪ ಮಲ್ಲಾಪುರೆ, ಕಾರ್ಯಾಧ್ಯಕ್ಷ ರವಿ ಸಿದ್ದಮ್ಮನವರ, ಉಪಾಧ್ಯಕ್ಷ ಗೋಪಾಲ ಕುಕನೂರ, ಪ್ರಧಾನ ಕಾರ್ಯದರ್ಶಿ ಮಲ್ಲು ದೇಸಾಯಿ, ಮುಖಂಡರಾದ ತ್ಯಾಗರಾಜ ಕದಂ, ರಾಜು ಮರವೆ, ಭರಮು ಖೇಮಲಾಪುರೆ, ಶಿವಾನಂದ ದೊಡವಾಡ, ಮಹಾದೇವ ಮಡಿವಾಳರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>