<p><strong>ಬೆಳಗಾವಿ:</strong> ಮಹಾರಾಷ್ಟ್ರ ಮತ್ತು ಜಿಲ್ಲೆಯಲ್ಲಿ ಗುರುವಾರ ಮಳೆ ಬಿಡುವು ಕೊಟ್ಟಿದ್ದರೂ, ನದಿಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿಲ್ಲ. ಬುಧವಾರ 38 ಸೇತುವೆ ಮುಳುಗಡೆಯಾಗಿದ್ದವು. ಗುರುವಾರ ಆ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.</p><p>ಘಟಪ್ರಭಾ ನದಿಗೆ ನಿರ್ಮಿಸಿದ 14, ದೂಧಗಂಗಾ ನದಿಗೆ ನಿರ್ಮಿಸಿದ 9, ಮಲಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳ ತಲಾ 6, ಕೃಷ್ಣಾ ನದಿಯ 5, ಮಾರ್ಕಂಡೇಯ ನದಿಯ 2 ಮತ್ತು ವೇದಗಂಗಾ ನದಿಯ 1 ಸೇತುವೆ ಮುಳುಗಡೆ ಸ್ಥಿತಿಯಲ್ಲಿದೆ.</p><p>ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ–ಯಡೂರ ಸೇತುವೆ ಬಳಿ 2,26,707 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಈ ಪೈಕಿ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪುರೆ ಬ್ಯಾರೇಜ್ನಿಂದ ಕೃಷ್ಣಾ ನದಿಗೆ 1,85,875 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಸದಲಗಾ ಬಳಿ ದೂಧಗಂಗಾ ನದಿಯಿಂದ 40,832 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.</p><p>ದೂಧಗಂಗಾ ನದಿಯ ಯಕ್ಸಂಬಾ-ದಾನವಾಡ, ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾದ ಕಾರಣ, ಕರ್ನಾಟಕ–ಮಹಾರಾಷ್ಟ್ರ ಮಧ್ಯೆ ಸಂಚಾರ ಕಡಿತಗೊಂಡಿದೆ. ಉಭಯ ರಾಜ್ಯಗಳಲ್ಲಿನ ಗ್ರಾಮಗಳಿಗೆ ತೆರಳಲು ಜನರು 25ರಿಂದ 30 ಕಿ.ಮೀ ಸುತ್ತು ಬಳಸಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ.</p><p>ಘಟಪ್ರಭಾ ನದಿ ಉಕ್ಕಿ ಹರಿಯುತ್ತಿರುವ ಕಾರಣ, ಮೂಡಲಗಿ ತಾಲ್ಲೂಕಿನ ಮಸಗುಪ್ಪಿ ಸೇತುವೆ ಮುಳುಗಡೆಯಾಗಿದೆ. ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಆವರಣ, ಹುಣಶ್ಯಾಳ ಪಿ.ವೈ. ಗ್ರಾಮದ ಹನುಮಂತ ದೇವರ ದೇವಸ್ಥಾನ ಜಲಾವೃತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಹಾರಾಷ್ಟ್ರ ಮತ್ತು ಜಿಲ್ಲೆಯಲ್ಲಿ ಗುರುವಾರ ಮಳೆ ಬಿಡುವು ಕೊಟ್ಟಿದ್ದರೂ, ನದಿಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿಲ್ಲ. ಬುಧವಾರ 38 ಸೇತುವೆ ಮುಳುಗಡೆಯಾಗಿದ್ದವು. ಗುರುವಾರ ಆ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.</p><p>ಘಟಪ್ರಭಾ ನದಿಗೆ ನಿರ್ಮಿಸಿದ 14, ದೂಧಗಂಗಾ ನದಿಗೆ ನಿರ್ಮಿಸಿದ 9, ಮಲಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳ ತಲಾ 6, ಕೃಷ್ಣಾ ನದಿಯ 5, ಮಾರ್ಕಂಡೇಯ ನದಿಯ 2 ಮತ್ತು ವೇದಗಂಗಾ ನದಿಯ 1 ಸೇತುವೆ ಮುಳುಗಡೆ ಸ್ಥಿತಿಯಲ್ಲಿದೆ.</p><p>ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ–ಯಡೂರ ಸೇತುವೆ ಬಳಿ 2,26,707 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಈ ಪೈಕಿ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪುರೆ ಬ್ಯಾರೇಜ್ನಿಂದ ಕೃಷ್ಣಾ ನದಿಗೆ 1,85,875 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಸದಲಗಾ ಬಳಿ ದೂಧಗಂಗಾ ನದಿಯಿಂದ 40,832 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.</p><p>ದೂಧಗಂಗಾ ನದಿಯ ಯಕ್ಸಂಬಾ-ದಾನವಾಡ, ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾದ ಕಾರಣ, ಕರ್ನಾಟಕ–ಮಹಾರಾಷ್ಟ್ರ ಮಧ್ಯೆ ಸಂಚಾರ ಕಡಿತಗೊಂಡಿದೆ. ಉಭಯ ರಾಜ್ಯಗಳಲ್ಲಿನ ಗ್ರಾಮಗಳಿಗೆ ತೆರಳಲು ಜನರು 25ರಿಂದ 30 ಕಿ.ಮೀ ಸುತ್ತು ಬಳಸಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ.</p><p>ಘಟಪ್ರಭಾ ನದಿ ಉಕ್ಕಿ ಹರಿಯುತ್ತಿರುವ ಕಾರಣ, ಮೂಡಲಗಿ ತಾಲ್ಲೂಕಿನ ಮಸಗುಪ್ಪಿ ಸೇತುವೆ ಮುಳುಗಡೆಯಾಗಿದೆ. ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಆವರಣ, ಹುಣಶ್ಯಾಳ ಪಿ.ವೈ. ಗ್ರಾಮದ ಹನುಮಂತ ದೇವರ ದೇವಸ್ಥಾನ ಜಲಾವೃತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>