<p><strong>ಬೆಳಗಾವಿ:</strong> ವೈಭವದಿಂದ ನಡೆಯುವ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆಗೆ ಸೆ.6ರಂದು ಕುಂದಾನಗರಿ ಸಾಕ್ಷಿಯಾಗಲಿದೆ. </p><p>ಇದಕ್ಕೆ ತೊಡಕು ಆಗದಿರಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಅನುಕೂಲವಾಗಲಿ ಎಂಬ ಆಶಯದಿಂದ ಮುಸ್ಲಿಮರು ಸೆ.5ರಂದು ನಡೆಯಬೇಕಿದ್ದ ಈದ್–ಮಿಲಾದ್ ಮೆರವಣಿಗೆಯನ್ನು ಸೆ.14ಕ್ಕೆ ಮುಂದೂಡಿದ್ದಾರೆ. ಈ ಮೂಲಕ ಸತತ ಎರಡನೇ ವರ್ಷವೂ ಭಾವೈಕ್ಯ ಮೆರೆದಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಈ ನಿರ್ಣಯ ಸ್ವಾಗತಿಸಿದ್ದಾರೆ.</p><p>ಮಹಾರಾಷ್ಟ್ರದ ಪುಣೆ, ಮುಂಬೈ ಬಿಟ್ಟರೆ, ಅದ್ದೂರಿಯಾಗಿ ಗಣೇಶೋತ್ಸವ ನೆರವೇರುವುದೇ ಬೆಳಗಾವಿಯಲ್ಲಿ. ಈ ಸಲ 370ಕ್ಕೂ ಅಧಿಕ ಸಾರ್ವಜನಿಕ ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಿದ್ದು, ಸೆ.6ರಂದು ಸಂಜೆಯಿಂದ 7ರಂದು ಮಧ್ಯಾಹ್ನದವರೆಗೂ ಮೆರವಣಿಗೆ ನಡೆಯುವ ಸಾಧ್ಯತೆಯಿದೆ. ಅದರ ಮುನ್ನಾ, ನಗರದ ಹಲವು ಮಾರ್ಗಗಳಲ್ಲಿ ‘ಈದ್–ಮಿಲಾದ್’ ಮೆರವಣಿಗೆಯನ್ನು ವೈಭವದಿಂದ ನಡೆಸಲು ಮುಸ್ಲಿಮರು ತಯಾರಿ ನಡೆಸಿದ್ದರು. </p><p>ಇಲ್ಲಿ ಸೋಮವಾರ ನಡೆದ ಮುಸ್ಲಿಂ ಧರ್ಮಗುರುಗಳು ಹಾಗೂ ಮುಖಂಡರ ಸಭೆಯಲ್ಲಿ ಮೆರವಣಿಗೆ ಮುಂದೂಡುವ ನಿರ್ಣಯ ಕೈಗೊಳ್ಳಲಾಯಿತು.</p><p>‘ಈ ವರ್ಷ ಈದ್–ಮಿಲಾದ್ ಮೆರವಣಿಗೆಯನ್ನು ಸಂಭ್ರಮದಿಂದ ಮಾಡಲು ಮುಸ್ಲಿಮರು ತಯಾರಿ ಮಾಡಿಕೊಂಡಿದ್ದರು. ಮೊದಲು ಗಣೇಶ ಮೂರ್ತಿಗಳ ಮೆರವಣಿಗೆ ಸಡಗರದಿಂದ ನೆರವೇರಲೆಂದು ಅದನ್ನು ಮುಂದೂಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಮಗೂ ನೆರವಾಗಿದ್ದಾರೆ’ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ವೈಭವದಿಂದ ನಡೆಯುವ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆಗೆ ಸೆ.6ರಂದು ಕುಂದಾನಗರಿ ಸಾಕ್ಷಿಯಾಗಲಿದೆ. </p><p>ಇದಕ್ಕೆ ತೊಡಕು ಆಗದಿರಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಅನುಕೂಲವಾಗಲಿ ಎಂಬ ಆಶಯದಿಂದ ಮುಸ್ಲಿಮರು ಸೆ.5ರಂದು ನಡೆಯಬೇಕಿದ್ದ ಈದ್–ಮಿಲಾದ್ ಮೆರವಣಿಗೆಯನ್ನು ಸೆ.14ಕ್ಕೆ ಮುಂದೂಡಿದ್ದಾರೆ. ಈ ಮೂಲಕ ಸತತ ಎರಡನೇ ವರ್ಷವೂ ಭಾವೈಕ್ಯ ಮೆರೆದಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಈ ನಿರ್ಣಯ ಸ್ವಾಗತಿಸಿದ್ದಾರೆ.</p><p>ಮಹಾರಾಷ್ಟ್ರದ ಪುಣೆ, ಮುಂಬೈ ಬಿಟ್ಟರೆ, ಅದ್ದೂರಿಯಾಗಿ ಗಣೇಶೋತ್ಸವ ನೆರವೇರುವುದೇ ಬೆಳಗಾವಿಯಲ್ಲಿ. ಈ ಸಲ 370ಕ್ಕೂ ಅಧಿಕ ಸಾರ್ವಜನಿಕ ಮೂರ್ತಿಗಳನ್ನು ಪ್ರತಿಷ್ಠಾಪಿಸುತ್ತಿದ್ದು, ಸೆ.6ರಂದು ಸಂಜೆಯಿಂದ 7ರಂದು ಮಧ್ಯಾಹ್ನದವರೆಗೂ ಮೆರವಣಿಗೆ ನಡೆಯುವ ಸಾಧ್ಯತೆಯಿದೆ. ಅದರ ಮುನ್ನಾ, ನಗರದ ಹಲವು ಮಾರ್ಗಗಳಲ್ಲಿ ‘ಈದ್–ಮಿಲಾದ್’ ಮೆರವಣಿಗೆಯನ್ನು ವೈಭವದಿಂದ ನಡೆಸಲು ಮುಸ್ಲಿಮರು ತಯಾರಿ ನಡೆಸಿದ್ದರು. </p><p>ಇಲ್ಲಿ ಸೋಮವಾರ ನಡೆದ ಮುಸ್ಲಿಂ ಧರ್ಮಗುರುಗಳು ಹಾಗೂ ಮುಖಂಡರ ಸಭೆಯಲ್ಲಿ ಮೆರವಣಿಗೆ ಮುಂದೂಡುವ ನಿರ್ಣಯ ಕೈಗೊಳ್ಳಲಾಯಿತು.</p><p>‘ಈ ವರ್ಷ ಈದ್–ಮಿಲಾದ್ ಮೆರವಣಿಗೆಯನ್ನು ಸಂಭ್ರಮದಿಂದ ಮಾಡಲು ಮುಸ್ಲಿಮರು ತಯಾರಿ ಮಾಡಿಕೊಂಡಿದ್ದರು. ಮೊದಲು ಗಣೇಶ ಮೂರ್ತಿಗಳ ಮೆರವಣಿಗೆ ಸಡಗರದಿಂದ ನೆರವೇರಲೆಂದು ಅದನ್ನು ಮುಂದೂಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಮಗೂ ನೆರವಾಗಿದ್ದಾರೆ’ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>