<p><strong>ಬೆಳಗಾವಿ</strong>: ರಾಯಬಾಗ ತಾಲ್ಲೂಕಿನ ನಿಡಗುಂದಿಯಲ್ಲಿ ತನ್ನ ತಂದೆ ಕೃಷಿಭೂಮಿಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸಿಂಗಾಡಿ ಹಿರೇಕೋಡಿ ಎಂಬುವವರನ್ನು ಜಿಲ್ಲಾ ಸಿಇಎನ್ ಅಪರಾಧ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅವರಿಂದ ₹22 ಲಕ್ಷ ಮೌಲ್ಯದ 440 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.</p>.<p>‘ನಿಡಗುಂದಿಯಲ್ಲಿ ಕಬ್ಬಿನ ಬೆಳೆ ಮಧ್ಯೆ, ಗಾಂಜಾ ಬೆಳೆಯುತ್ತಿರುವ ಮಾಹಿತಿ ಸಿಕ್ಕಿತ್ತು. ಅದನ್ನು ಆಧರಿಸಿ ದಾಳಿ ಮಾಡಿ, ಸಿಂಗಾಡಿ ಎಂಬಾತನನ್ನು ಬಂಧಿಸಲಾಗಿದೆ. ಆತನಿಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲ. ಆದರೆ, ಅವನು ಗಾಂಜಾ ಸರಬರಾಜು ಮಾಡುತ್ತಿರುವ ಮತ್ತು ಈ ಅಕ್ರಮದಲ್ಲಿ ಭಾಗಿಯಾದ ಸಹಚರರ ಕುರಿತು ಪರಿಶೀಲಿಸುತ್ತಿದ್ದೇವೆ’ ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಇತರೆ ವ್ಯವಹಾರಗಳಲ್ಲಿ ಸಿಂಗಾಡಿ ಭಾಗಿಯಾಗಿದ್ದಾನೆ ಎಂಬ ಅನುಮಾನವಿದೆ. ಆ ಬಗ್ಗೆ ಪರಿಶೀಲಿಸುತ್ತಿದ್ದೇವೆ’ ಎಂದು ಹೇಳಿದರು.</p>.<p><strong>ಆರೋಪಿ ಬೆನ್ನಟ್ಟಿ ಹಿಡಿದ ಕಾನ್ಸ್ಟೆಬಲ್</strong>: ರಾಯಬಾಗ ತಾಲ್ಲೂಕಿನ ಮುಗಳಖೋಡದ ಮಹಿಳೆಯೊಬ್ಬರು ಸೆ.5ರಂದು ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರಕ್ಕೆ ತೆರಳುತ್ತಿದ್ದರು. ರಾಯಬಾಗ ನಿಲ್ದಾಣದಲ್ಲಿ ಇಳಿದು ಬಸ್ಗೆ ಕಾಯುತ್ತಿದ್ದಾಗ, ಬೈಕ್ ಮೇಲೆ ಬಂದ ಮಹಾರಾಷ್ಟ್ರದ ರಾಜು ಪಕಾಲೆ ಮತ್ತು ರಾಹುಲ ಮಾಳಿ ಎಂಬುವವರು ಚಿನ್ನದ ಸರ ಕದ್ದು ಪರಾರಿಯಾಗಿದ್ದರು.</p>.<p>ನಿಲ್ದಾಣದ ಹೊರಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಕಾನ್ಸ್ಟೆಬಲ್ ಪರಶುರಾಮ ಗಾಣಿಗೇರ ಅವರು, 2.5 ಕಿ.ಮೀ ದೂರದವರೆಗೆ ಆರೋಪಿ ಬೆನ್ನಟ್ಟಿ ಹೋಗಿ ಹಿಡಿದರು. ಸ್ಥಳೀಯರೂ ಅವರಿಗೆ ಸಹಾಯ ಮಾಡಿದರು. ನಂತರ ಪರಾರಿಯಾಗಿದ್ದ ಮತ್ತೊಬ್ಬ ಆರೋಪಿ ಬಂಧಿಸಿ, ₹2.75 ಲಕ್ಷ ಮೌಲ್ಯದ 30 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ ಎಂದು ಗುಳೇದ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ರಾಯಬಾಗ ತಾಲ್ಲೂಕಿನ ನಿಡಗುಂದಿಯಲ್ಲಿ ತನ್ನ ತಂದೆ ಕೃಷಿಭೂಮಿಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸಿಂಗಾಡಿ ಹಿರೇಕೋಡಿ ಎಂಬುವವರನ್ನು ಜಿಲ್ಲಾ ಸಿಇಎನ್ ಅಪರಾಧ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅವರಿಂದ ₹22 ಲಕ್ಷ ಮೌಲ್ಯದ 440 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.</p>.<p>‘ನಿಡಗುಂದಿಯಲ್ಲಿ ಕಬ್ಬಿನ ಬೆಳೆ ಮಧ್ಯೆ, ಗಾಂಜಾ ಬೆಳೆಯುತ್ತಿರುವ ಮಾಹಿತಿ ಸಿಕ್ಕಿತ್ತು. ಅದನ್ನು ಆಧರಿಸಿ ದಾಳಿ ಮಾಡಿ, ಸಿಂಗಾಡಿ ಎಂಬಾತನನ್ನು ಬಂಧಿಸಲಾಗಿದೆ. ಆತನಿಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲ. ಆದರೆ, ಅವನು ಗಾಂಜಾ ಸರಬರಾಜು ಮಾಡುತ್ತಿರುವ ಮತ್ತು ಈ ಅಕ್ರಮದಲ್ಲಿ ಭಾಗಿಯಾದ ಸಹಚರರ ಕುರಿತು ಪರಿಶೀಲಿಸುತ್ತಿದ್ದೇವೆ’ ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಇತರೆ ವ್ಯವಹಾರಗಳಲ್ಲಿ ಸಿಂಗಾಡಿ ಭಾಗಿಯಾಗಿದ್ದಾನೆ ಎಂಬ ಅನುಮಾನವಿದೆ. ಆ ಬಗ್ಗೆ ಪರಿಶೀಲಿಸುತ್ತಿದ್ದೇವೆ’ ಎಂದು ಹೇಳಿದರು.</p>.<p><strong>ಆರೋಪಿ ಬೆನ್ನಟ್ಟಿ ಹಿಡಿದ ಕಾನ್ಸ್ಟೆಬಲ್</strong>: ರಾಯಬಾಗ ತಾಲ್ಲೂಕಿನ ಮುಗಳಖೋಡದ ಮಹಿಳೆಯೊಬ್ಬರು ಸೆ.5ರಂದು ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರಕ್ಕೆ ತೆರಳುತ್ತಿದ್ದರು. ರಾಯಬಾಗ ನಿಲ್ದಾಣದಲ್ಲಿ ಇಳಿದು ಬಸ್ಗೆ ಕಾಯುತ್ತಿದ್ದಾಗ, ಬೈಕ್ ಮೇಲೆ ಬಂದ ಮಹಾರಾಷ್ಟ್ರದ ರಾಜು ಪಕಾಲೆ ಮತ್ತು ರಾಹುಲ ಮಾಳಿ ಎಂಬುವವರು ಚಿನ್ನದ ಸರ ಕದ್ದು ಪರಾರಿಯಾಗಿದ್ದರು.</p>.<p>ನಿಲ್ದಾಣದ ಹೊರಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಕಾನ್ಸ್ಟೆಬಲ್ ಪರಶುರಾಮ ಗಾಣಿಗೇರ ಅವರು, 2.5 ಕಿ.ಮೀ ದೂರದವರೆಗೆ ಆರೋಪಿ ಬೆನ್ನಟ್ಟಿ ಹೋಗಿ ಹಿಡಿದರು. ಸ್ಥಳೀಯರೂ ಅವರಿಗೆ ಸಹಾಯ ಮಾಡಿದರು. ನಂತರ ಪರಾರಿಯಾಗಿದ್ದ ಮತ್ತೊಬ್ಬ ಆರೋಪಿ ಬಂಧಿಸಿ, ₹2.75 ಲಕ್ಷ ಮೌಲ್ಯದ 30 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ ಎಂದು ಗುಳೇದ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>