<p>ಬೆಳಗಾವಿ: ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ನ 2025–26ನೇ ಸಾಲಿನ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್ಎಸ್ಎಸ್ ಘಟಕಗಳು ಹಾಗೂ ಇತರೆ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು.</p>.<p>ಸರ್ಕಾರಿ ವಿಮಾ ಇಲಾಖೆಯ ಬೆಳಗಾವಿ ವಿಭಾಗದ ಪ್ರಭಾರ ಉಪನಿರ್ದೇಶಕ ಜಗನ್ನಾಥರಾವ್ ಕಠಾರೆ, ‘ವಿದ್ಯಾರ್ಥಿಗಳು ಪರಿಶ್ರಮದ ಮೂಲಕ ವೃತ್ತಿಬದುಕು ಕಟ್ಟಿಕೊಳ್ಳಬೇಕು’ ಎಂದು ಕರೆಕೊಟ್ಟರು.</p>.<p>ಮುಧೋಳದ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಮೋಹನಕುಮಾರ ಡಿ., ‘ಇದು ಕೃತಕ ಬುದ್ಧಿಮತ್ತೆ(ಎಐ) ಯುಗ. ವಿದ್ಯಾರ್ಥಿಗಳು ತಂತ್ರಜ್ಞಾನದ ಸದುಪಯೋಗ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ವಾಸುದೇವ ಅಪ್ಪಾಜಿಗೋಳ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p>.<p>ತಮ್ಮಣ್ಣ ಢವಳೇಶ್ವರ ಇತರರಿದ್ದರು. ಐಶ್ವರ್ಯ ರೊಡಬಸನ್ನವರ ಸ್ವಾಗತಿಸಿದರು. ಸಾವಿತ್ರಿ ಹಳ್ಳಿ ವಂದಿಸಿದರು. ಸವಿತಾ ಲಕ್ಷ್ಮನ್ನವರ ಮತ್ತು ವಿದ್ಯಾ ಗುಂಡಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-21-395472967</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ನ 2025–26ನೇ ಸಾಲಿನ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್ಎಸ್ಎಸ್ ಘಟಕಗಳು ಹಾಗೂ ಇತರೆ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು.</p>.<p>ಸರ್ಕಾರಿ ವಿಮಾ ಇಲಾಖೆಯ ಬೆಳಗಾವಿ ವಿಭಾಗದ ಪ್ರಭಾರ ಉಪನಿರ್ದೇಶಕ ಜಗನ್ನಾಥರಾವ್ ಕಠಾರೆ, ‘ವಿದ್ಯಾರ್ಥಿಗಳು ಪರಿಶ್ರಮದ ಮೂಲಕ ವೃತ್ತಿಬದುಕು ಕಟ್ಟಿಕೊಳ್ಳಬೇಕು’ ಎಂದು ಕರೆಕೊಟ್ಟರು.</p>.<p>ಮುಧೋಳದ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಮೋಹನಕುಮಾರ ಡಿ., ‘ಇದು ಕೃತಕ ಬುದ್ಧಿಮತ್ತೆ(ಎಐ) ಯುಗ. ವಿದ್ಯಾರ್ಥಿಗಳು ತಂತ್ರಜ್ಞಾನದ ಸದುಪಯೋಗ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ವಾಸುದೇವ ಅಪ್ಪಾಜಿಗೋಳ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p>.<p>ತಮ್ಮಣ್ಣ ಢವಳೇಶ್ವರ ಇತರರಿದ್ದರು. ಐಶ್ವರ್ಯ ರೊಡಬಸನ್ನವರ ಸ್ವಾಗತಿಸಿದರು. ಸಾವಿತ್ರಿ ಹಳ್ಳಿ ವಂದಿಸಿದರು. ಸವಿತಾ ಲಕ್ಷ್ಮನ್ನವರ ಮತ್ತು ವಿದ್ಯಾ ಗುಂಡಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-21-395472967</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>