<p><strong>ಬೆಳಗಾವಿ:</strong> ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ನಿರ್ದೇಶನಾಲಯ ಬುಧವಾರ ಇಲ್ಲಿ ಏರ್ಪಡಿಸಿದ್ದ ‘ಸ್ವಚ್ಛತಾ ಓಟ’ ಯಶಸ್ವಿಯಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಐತಿಹಾಸಿಕ ಕೋಟೆ ಕೆರೆ, ಗಿಡ– ಮರ ಮತ್ತು ಪರಿಸರ ನೋಡಿದಾಗ, ಬೆಂಗಳೂರು ಮಹಾನಗರಕ್ಕಿಂತ ಬೆಳಗಾವಿಯೇ ಸುಂದರವಾಗಿದೆ ಅನ್ನಿಸುತ್ತದೆ’ ಎಂದರು.</p>.<p>‘ರಾಜ್ಯದ ಎರಡನೇ ರಾಜಧಾನಿ ಎಂಬಂತೆ ಇರುವ ಬೆಳಗಾವಿಗೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಸರ್ಕಾರ ಕ್ರಮ ವಹಿಸಲಿದೆ. ದುಡಿಯುವ ಕೈಗಳಿಗೆ ಕೆಲಸ ಕೊಡಲಿದೆ’ ಎಂದರು.</p>.<p>‘1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಇಲ್ಲಿ ಐತಿಹಾಸಿಕ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಕಳೆದ ವರ್ಷ ಅದರ ಶತಮಾನೋತ್ಸವ ಆಚರಿಸಿದ್ದು, ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವುದೇ ಉದ್ದೇಶವಾಗಿತ್ತು’ ಎಂದರು.</p>.<p>ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ, ‘ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ರಾಜ್ಯದ ಕೆಲ ನಗರಗಳು ಸ್ಥಾನ ಪಡೆದಿವೆ. ಮುಂದಿನ ದಿನಗಳಲ್ಲಿ ಬೆಳಗಾವಿ ಮಹಾನಗರವೂ ಈ ಪಟ್ಟಿ ಸೇರಲಿ’ ಎಂದರು.</p>.<p>ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಆಸಿಫ್ ಸೇಠ್, ಉಪ ಮೇಯರ್ ವಾಣಿ ಜೋಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಇತರರಿದ್ದರು.</p>.<p>ಪ್ರಮಾಣಪತ್ರ ವಿತರಣೆ: ಪ್ರಮುಖ ರಸ್ತೆಗಳಲ್ಲಿ ಸಾಗಿದ ಓಟ, ಕೋಟೆ ಕೆರೆ ಆವರಣ ತಲುಪಿತು. ಚಳಿಯಲ್ಲೂ ವಿವಿಧ ವಯೋಮಾನದವರು ಉತ್ಸಾಹದಿಂದ ಪಾಲ್ಗೊಂಡು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಹೆಜ್ಜೆಹಾಕಿದರು. ಓಟದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ನೀಡಲಾಯಿತು.</p>.<div><blockquote>ಸ್ವಚ್ಛತೆಯೇ ದೇವರು ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಇಡೀ ನಗರ ಸ್ವಚ್ಛವಾಗಿ ಇರಬೇಕೆಂದರೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ</blockquote><span class="attribution">ಬೈರತಿ ಸುರೇಶ ನಗರಾಭಿವೃದ್ಧಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ನಿರ್ದೇಶನಾಲಯ ಬುಧವಾರ ಇಲ್ಲಿ ಏರ್ಪಡಿಸಿದ್ದ ‘ಸ್ವಚ್ಛತಾ ಓಟ’ ಯಶಸ್ವಿಯಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಐತಿಹಾಸಿಕ ಕೋಟೆ ಕೆರೆ, ಗಿಡ– ಮರ ಮತ್ತು ಪರಿಸರ ನೋಡಿದಾಗ, ಬೆಂಗಳೂರು ಮಹಾನಗರಕ್ಕಿಂತ ಬೆಳಗಾವಿಯೇ ಸುಂದರವಾಗಿದೆ ಅನ್ನಿಸುತ್ತದೆ’ ಎಂದರು.</p>.<p>‘ರಾಜ್ಯದ ಎರಡನೇ ರಾಜಧಾನಿ ಎಂಬಂತೆ ಇರುವ ಬೆಳಗಾವಿಗೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಸರ್ಕಾರ ಕ್ರಮ ವಹಿಸಲಿದೆ. ದುಡಿಯುವ ಕೈಗಳಿಗೆ ಕೆಲಸ ಕೊಡಲಿದೆ’ ಎಂದರು.</p>.<p>‘1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಇಲ್ಲಿ ಐತಿಹಾಸಿಕ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಕಳೆದ ವರ್ಷ ಅದರ ಶತಮಾನೋತ್ಸವ ಆಚರಿಸಿದ್ದು, ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವುದೇ ಉದ್ದೇಶವಾಗಿತ್ತು’ ಎಂದರು.</p>.<p>ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ, ‘ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ರಾಜ್ಯದ ಕೆಲ ನಗರಗಳು ಸ್ಥಾನ ಪಡೆದಿವೆ. ಮುಂದಿನ ದಿನಗಳಲ್ಲಿ ಬೆಳಗಾವಿ ಮಹಾನಗರವೂ ಈ ಪಟ್ಟಿ ಸೇರಲಿ’ ಎಂದರು.</p>.<p>ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಆಸಿಫ್ ಸೇಠ್, ಉಪ ಮೇಯರ್ ವಾಣಿ ಜೋಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಇತರರಿದ್ದರು.</p>.<p>ಪ್ರಮಾಣಪತ್ರ ವಿತರಣೆ: ಪ್ರಮುಖ ರಸ್ತೆಗಳಲ್ಲಿ ಸಾಗಿದ ಓಟ, ಕೋಟೆ ಕೆರೆ ಆವರಣ ತಲುಪಿತು. ಚಳಿಯಲ್ಲೂ ವಿವಿಧ ವಯೋಮಾನದವರು ಉತ್ಸಾಹದಿಂದ ಪಾಲ್ಗೊಂಡು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಹೆಜ್ಜೆಹಾಕಿದರು. ಓಟದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ನೀಡಲಾಯಿತು.</p>.<div><blockquote>ಸ್ವಚ್ಛತೆಯೇ ದೇವರು ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಇಡೀ ನಗರ ಸ್ವಚ್ಛವಾಗಿ ಇರಬೇಕೆಂದರೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ</blockquote><span class="attribution">ಬೈರತಿ ಸುರೇಶ ನಗರಾಭಿವೃದ್ಧಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>