<p><strong>ಬೆಳಗಾವಿ</strong>: ‘ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಗಂಭೀರ ತೊಂದರೆ ಉಂಟು ಮಾಡುತ್ತದೆ’ ಎಂದು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ. ದಯಾನಂದ ಹೇಳಿದರು.</p>.<p>ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಅಂಗವಾಗಿ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ಈಚೆಗೆ ಏರ್ಪಡಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಯುವಕರಲ್ಲಿ ರಕ್ತದೊತ್ತಡ ಕಂಡುಬರುತ್ತಿರುವುದು ಅತ್ಯಂತ ಅಪಾಯಕಾರಿ. ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ ಹಾಗೂ ಕೆಲಸದ ಒತ್ತಡದಿಂದ ರಕ್ತದೊತ್ತಡವು ಕಂಡು ಬರುತ್ತಿದೆ. ಮುಂಜಾಗೃತೆ ವಹಿಸುವದು ಅತ್ಯವಶ್ಯ. ಅಧಿಕ ರಕ್ತದೊತ್ತಡದ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>ವಿಭಾಗ ಮುಖ್ಯಸ್ಥ ಡಾ.ಸಂಜಯ ಪೋರವಾಲ ಮಾತನಾಡಿ, ‘ಅಧಿಕ ರಕ್ತದೊತ್ತಡವು ಯಾವುದೇ ಗುಣಲಕ್ಷಣಗಳನ್ನು ಹೊಂದಿರುವುದಿಲ್ಲ. ಆದರೆ, ಇದು ಹೃದಯಾಘಾತ, ಪಾರ್ಶ್ವವಾಯು, ಮೂತ್ರಪಿಂಡ ಖಾಯಿಲೆ ಹಾಗೂ ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ’ ಎಂದರು.</p>.<p>ಹಿರಿಯ ಹೃದ್ರೋಗ ತಜ್ಞವೈದ್ಯರಾದ ಡಾ.ಸುರೇಶ ಪಟ್ಟೇದ, ಡಾ.ಸಮೀರ ಅಂಬರ, ಡಾ.ವಿಜಯಾನಂದ ಮೆಟಗುಡಮಠ, ಡಾ.ಪ್ರಸಾದ ಎಂ.ಆರ್., ಡಾ.ಸುಹಾಸಿನಿ ಅಗರ್ಥಾ, ಡಾ.ವಿಶ್ವನಾಥ ಹೆಸರೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-21-1911149429</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಗಂಭೀರ ತೊಂದರೆ ಉಂಟು ಮಾಡುತ್ತದೆ’ ಎಂದು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ. ದಯಾನಂದ ಹೇಳಿದರು.</p>.<p>ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಅಂಗವಾಗಿ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ಈಚೆಗೆ ಏರ್ಪಡಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಯುವಕರಲ್ಲಿ ರಕ್ತದೊತ್ತಡ ಕಂಡುಬರುತ್ತಿರುವುದು ಅತ್ಯಂತ ಅಪಾಯಕಾರಿ. ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ ಹಾಗೂ ಕೆಲಸದ ಒತ್ತಡದಿಂದ ರಕ್ತದೊತ್ತಡವು ಕಂಡು ಬರುತ್ತಿದೆ. ಮುಂಜಾಗೃತೆ ವಹಿಸುವದು ಅತ್ಯವಶ್ಯ. ಅಧಿಕ ರಕ್ತದೊತ್ತಡದ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>ವಿಭಾಗ ಮುಖ್ಯಸ್ಥ ಡಾ.ಸಂಜಯ ಪೋರವಾಲ ಮಾತನಾಡಿ, ‘ಅಧಿಕ ರಕ್ತದೊತ್ತಡವು ಯಾವುದೇ ಗುಣಲಕ್ಷಣಗಳನ್ನು ಹೊಂದಿರುವುದಿಲ್ಲ. ಆದರೆ, ಇದು ಹೃದಯಾಘಾತ, ಪಾರ್ಶ್ವವಾಯು, ಮೂತ್ರಪಿಂಡ ಖಾಯಿಲೆ ಹಾಗೂ ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ’ ಎಂದರು.</p>.<p>ಹಿರಿಯ ಹೃದ್ರೋಗ ತಜ್ಞವೈದ್ಯರಾದ ಡಾ.ಸುರೇಶ ಪಟ್ಟೇದ, ಡಾ.ಸಮೀರ ಅಂಬರ, ಡಾ.ವಿಜಯಾನಂದ ಮೆಟಗುಡಮಠ, ಡಾ.ಪ್ರಸಾದ ಎಂ.ಆರ್., ಡಾ.ಸುಹಾಸಿನಿ ಅಗರ್ಥಾ, ಡಾ.ವಿಶ್ವನಾಥ ಹೆಸರೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-21-1911149429</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>